Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿನಿಮಾದಲ್ಲಿ ಸಕ್ರೀಯವಾಗಿರುವ ರಮ್ಯಾ ಮತ್ತೆ ರಾಜಕೀಯಕ್ಕೆ ಬರ್ತಾರಾ..? ಮಂಡ್ಯ ಎಂಟ್ರಿಗೆ ಯಾರಿಂದ ವಿರೋಧ..?

---Advertisement---

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆಯುತ್ತಿದೆ. ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಿದೆ. ಇದರ ನಡುವೆ ರಮ್ಯಾ ಹೆಸರು ಕೂಡ ಚರ್ಚೆಗೆ ಬಂದಿದೆ. ರಮ್ಯಾ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರಾ ಎಂಬ ಚರ್ಚೆ ಎದ್ದಿದೆ. ಅದರ ಜೊತೆಗೆ ರಮ್ಯಾ ಅವರನ್ನು ಈ ಬಾರಿಯ ಚುನಾವಣೆಗೆ ಕರೆತರುವುದು ಬೇಡ ಎಂದು ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.

ನಟಿ ರಮ್ಯಾ ರಾಜಕೀಯದಿಂದ ದೂರಾಗಿ ಈಗ ಮತ್ತೆ ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ಸಿನಿಮಾ ನಿರ್ಮಾಣ, ನಟನೆಯ ಜೊತೆಯಲ್ಲಿ ಬ್ಯುಸಿಯಾಗಿದ್ದಾರೆ. ಅಭಿಮಾನಿಗಳ ಆಸೆಯಂತೆ ರಮ್ಯಾ ಅವರು ಕಮ್ ಬ್ಯಾಕ್ ಆಗಿದ್ದಾರೆ. ಆದರೆ ಇದರ ನಡುವೆ ರಮ್ಯಾ ಮತ್ತೆ ಚಿತ್ರರಂಗಕ್ಕೆ ಬರಲಿದ್ದಾರಾ ಎಂಬ ಪ್ರಶ್ನೆ ಇದೆ.

ಸಚಿವ ಎಂ ಸಿ ಸುಧಾಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಮ್ಯಾ ಅವರ ವಿಚಾರ ಚರ್ಚೆಗೆ ಬಂದಿದೆ. ಯಾವುದೇ ಕಾರಣಕ್ಕೂ ರಮ್ಯಾ ಅವರನ್ನು ಲೋಕಸಭಾ ಚುನಾವಣೆಗೆ ಕರೆತರಬಾರದು. ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುತ್ತಿರುವ ನಾಯಕರಿಗೆ ಅವಕಾಶ ನೀಡಿ. ಕೊನೆ ಪಕ್ಷ ಚೆಲುವರಾಯಸ್ವಾಮಿ ಅವರ ಪತ್ನಿಗಾದರೂ ಟಿಕೆಟ್ ನೀಡಿ ಎಂದಿದ್ದಾರಂತೆ.

ಅದರ ಜೊತೆಗೆ ಸಭೆಯಲ್ಲಿ ಹಲವರ ಹೆಸರು ಕೂಡ ಪ್ರಸ್ತಾಪಗೊಂಡಿದೆ. ಕೆಪಿಸಿಸಿ ಖಜಾಂಚಿ ವಿನಯ್ ಕಾರ್ತೀಕ್ ಅವರಿಗೆ ಅವಕಾಶ ನೀಡಿ ಎಂಬ ಅಭಿಪ್ರಾಯಗಳು ಕೇಳಿ ಬಂದಿದೆ. ಸಭೆಯಲ್ಲಿ ವಿನಯ್ ಕಾರ್ತೀಕ್ ಹೆಸರನ್ನು ಹಲವರು ಪ್ರಸ್ತಾಪ ಮಾಡಿದ್ದಾರೆ. ಇದೇ ಹೆಸರನ್ನು ಹೈಕಮಾಂಡ್ ಮುಂದೆಯೂ ಇಡಲು ನಿರ್ಧರಿಸಿದ್ದು, ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರಲು ನಿರ್ಧಾರ ಕೈಗೊಂಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment