Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಕ್ಕಲಿಗರ ಮತ ಸೆಳೆಯಲು ಮೀಸಲಾತಿ ಅಸ್ತ್ರ ವರ್ಕೌಟ್ ಆಗುತ್ತಾ..?

Facebook
Twitter
Telegram
WhatsApp

ಚುನಾವಣೆ ಸಮೀಪಿಸುತ್ತಿದ್ದಂತೆ ಹಲವು ಬೇಡಿಕೆಗಳನ್ನಿಟ್ಟುಕೊಂಡು ಜನ ಹೋರಾಟಕ್ಕೆ ಇಳಿದಿದ್ದಾರೆ. ಅತ್ತ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಮೀಸಲಾತಿಯ ಹೋರಾಟ ಜಾಸ್ತಿಯಾಗಿದೆ. ಎಸ್ಸಿ/ಎಸ್ಟಿ ಸಮುದಾಯದವರಿಗೆ ಮೀಸಲಾತಿ ಹೆಚ್ಚಿಸಿದ್ದೆ ತಡ, ಬೇರೆ ಬೇರೆ ಸಮುದಾಯದವರು ನಮಗೂ ಹೆಚ್ಚಿಸಿ ಎನ್ನುತ್ತಿದ್ದಾರೆ.

ಒಕ್ಕಲಿಗ ಮೀಸಲಾತಿ ಹೆಚ್ಚಳಕ್ಕೆ ನಿನ್ನೆ ಸಚಿವ ಆರ್ ಅಶೋಕ್ ನೇತೃತ್ವದಲ್ಲಿ ಸಭೆ ನಡೆದಿದೆ. ಸಭೆ ಬಳಿಕ ಒಕ್ಕಲಿಗ ಸಚಿವರು, ನಿಯೋಗ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿತ್ತು. ಶೇ.4ರಷ್ಟಿರೋ ಮೀಸಲಾತಿಯನ್ನು ಶೇ. 12ಕ್ಕೆ ಏರಿಕೆ ಮಾಡುವಂತೆ ಬೆಳಗಾವಿಯ ಸುವರ್ಣಸೌಧದಲ್ಲಿರುವ ಸಿಎಂ ಕಚೇರಿಗೆ ಭೇಟಿ ನೀಡಿ, ಮನವಿ ಸಲ್ಲಿಸಿದ್ದಾರೆ.

ಈ ವೇಳೆ “ಅಶೋಕ್ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯದವರು ಮನವಿಯನ್ನು ನೀಡಿದ್ದಾರೆ. ಆ ಮನವಿಯಲ್ಲಿ ಮೀಸಲಾತಿ ಬಗ್ಗೆ ಕೇಳಿದ್ದಾರೆ. ಈ ಹಿಂದೆ ನಿರ್ಮಲಾನಂದ ಸ್ವಾಮೀಜಿಗಳು ಕೂಡ ಮೀಸಲಾತಿ ವಿಚಾರಕ್ಕೆ ಮನವಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿ, ಪರಿಶೀಲನೆಗೆ ಕಳುಹಿಸಿದ್ದೇವೆ” ಎಂದಿದ್ದಾರೆ.

ಸದ್ಯ ಚುನಾವಣೆ ಹತ್ತಿರವಾಗುತ್ತಿದೆ. ಬಿಜೆಪಿಯನ್ನೇ ಅಧಿಕಾರಕ್ಕೆ ತರಬೇಕು ಎಂದು ಪಣ ಪಕ್ಷದ ನಾಯಕರು ಪಣ ತೊಟ್ಟಿದ್ದಾರೆ. ಈ ಬಾರಿ ಹಳೆ ಮೈಸೂರು ಭಾಗವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಂತೆ ಕಾಣುತ್ತಿದೆ. ಆದ್ರೆ ಅದು ಜೆಡಿಎಸ್ ಭದ್ರಕೋಟೆಯಾಗಿದೆ. ಒಕ್ಕಲಿಗ ಸಮುದಾಯವೂ ಹೆಚ್ಚಾಗಿದ್ದು, ಈಗ ಮೀಸಲಾತಿ ಹೆಚ್ಚಳವಾದರೆ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆಯೂ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!