ಭವಿಷ್ಯದಲ್ಲಿ ಸಿಎಂ ಆಗಲಿದ್ದಾರಾ ಸತೀಶ್ ಜಾರಕಿಹೊಳಿ..?

suddionenews
1 Min Read

ತುಮಕೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಸ್ಥಾನ ವಿಚಾರ ಚರ್ಚೆಯಾಗುತ್ತಲೇ ಇರುತ್ತದೆ. ಒಮ್ಮೊಮ್ಮೆ ದಲಿತಬಸಿಎಂ ವಿಚಾರವೂ ಸದ್ದು ಮಾಡುತ್ತಾ ಇರುತ್ತೆ. ಇದೀಗ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂಬ ಮಾತು ಕೇಳಿ ಬರುತ್ತಾ ಇದೆ.

ಸಿಎಂ ಸ್ಥಾನಕ್ಕೆ ಈ ಬಾರಿ ಸಚಿವ ಸತೀಶ್ ಜಾರಕಿಹೊಳಿ ಹೆಸರು ಪ್ರಸ್ತಾಪವಾಗಿದೆ. ಸಚಿವ ಕೆ ಎನ್ ರಾಜಣ್ಣ ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ನಮ್ಮ ಸಮಾಜಕ್ಕೆ ಸಿಎಂ ಸ್ಥಾನ ಸಿಗಬೇಕು ಎಂಬುದು ಅಭಿಲಾಷೆ ಹೀಗಾಗಿ ನಮ್ಮ ಸಮಾಜದಿಂದ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾಗಬೇಕು ಎಂದು ಸಹಕಾರಿ ಸಚಿವ ಕೆ ಎನ್ ರಾಜಣ್ಣ ಹೇಳಿದ್ದಾರೆ.

ಇನ್ನು ಸತೀಶ್ ಜಾರಕಿಹೊಳಿ ಅವರು ಕೂಡ ಮುಖ್ಯಮಂತ್ರಿಯಾಗುವ ಬಗ್ಗೆ ತಮ್ಮ ಅಭಿಲಾಷೆಯನ್ನು ವ್ಯಕ್ತಪಡಿಸಿದ್ದಾರೆ. ಈಗಲೇ ಮುಖ್ಯಮಂತ್ರಿಯಾಗುವುದು ಅಲ್ಲ. ಮುಂದಿನ ಅವಧಿಯಲ್ಲಿ ಮುಖ್ಯಮಂತ್ರಿ ಆಗೋಣಾ ಎಂದು ಹೇಳುವ ಮೂಲಕ ತಾವೂ ಕೂಎ ಸಿಎಂ ಆಕಾಂಕ್ಷಿ ಎಂದು ತೋರಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *