Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ರಾಜ್ಯಾಧ್ಯಕ್ಷೆಯಾಗಿ ಶೋಭಾ ಕರಂದ್ಲಾಜೆ ಆಯ್ಕೆಯಾಗ್ತಾರಾ..?

---Advertisement---

 

ಲೋಕಸಭಾ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿವೆ. ಇತ್ತ ಬಿಜೆಪಿಯಲ್ಲಿ ಇನ್ನು ಕೂಡ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆಯೇ ಆಗಿಲ್ಲ. ಅಧಿವೇಶನದಲ್ಲೂ ವಿರೋಧ ಪಕ್ಷ ನಾಯಕನಿಲ್ಲದೆ ಮುಗಿದು ಹೋಗಿದೆ. ಇದೀಗ ಲೋಕಸಭಾ ಚುನಾವಣೆಗೂ ಮುನ್ನ, ಮೊದಲು ರಾಜ್ಯಾಧ್ಯಕ್ಷರ ಆಯ್ಕೆ‌ ಮಾಡಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಬಿಜೆಪಿ ಹೈಕಮಾಂಡ್ ಅಂಗಳದಲ್ಲಿ ಶೋಭಾ ಕರಂದ್ಲಾಜೆ ಹೆಸರು ಫೈನಲ್ ಆಗಿದೆ ಎನ್ನಲಾಗುತ್ತಿದೆ.

ಶೋಭಾ ಕರಂದ್ಲಾಜೆ ಅವರನ್ನು ರಾಜ್ಯಾಧ್ಯಕ್ಷೆಯಾಗಿ ಮಾಡುವುದಕ್ಕೆ ಒಪ್ಪಿಗೆ ಕೂಡ ಸಿಕ್ಕಂತೆ ಆಗಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಪುತ್ರ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಹಂಬಲವಿತ್ತು. ಅದನ್ನು ಈಗಾಗಲೇ ಹೈಕಮಾಂಡ್ ಕಿವಿಗೂ ಮುಟ್ಟಿಸಿದ್ದರು. ಆದರೂ ವಿರೋಧಗಳು ಬರಬಾರದು ಎಂಬ ಕಾರಣಕ್ಕೆ ಶೋಭಾ ಕರಂದ್ಲಾಜೆ ಅವರನ್ನು ಆಯ್ಕೆ ಮಾಡಲಾಗಿದೆ. ಒಂದು ವೇಳೆ ಬಿಜೆಪಿಯಲ್ಲಿ ಶೋಭಾ ಕರಂದ್ಲಾಜೆ ಅಧ್ಯಕ್ಷೆಯಾದರೆ ಮೊದಲ ಮಹಿಳಾ ಅಧ್ಯಕ್ಷೆಯಾಗುತ್ತಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡಿರುವ ಬಿಜೆಪಿ, ಒಕ್ಕಲಿಗರ ಮತವನ್ನು ಸೆಳೆಯುವ ಪ್ಲ್ಯಾನ್ ರೂಪಿಸಿದೆ. ಶೋಭಾ ಕರಂದ್ಲಾಜೆಯವರನ್ನು ನೇಮಕ ಮಾಡುವುದರಿಂದ ಒಕ್ಕಲಿಗರ ಮತಬ್ಯಾಂಕ್ ಅನ್ನು ಟಚ್ ಮಾಡಿದಂತೆ ಆಗುತ್ತದೆ. ಜೊತೆಗೆ ಜೆಡಿಎಸ್ ಕೂಡ ಕೈ ಜೋಡಿಸುತ್ತಿರುವ ಕಾರಣ, ಒಕ್ಕಲಿಗರ ಮತಗಳ ಕ್ರೂಢೀಕರಣ ಹೆಚ್ಚಾಗುತ್ತದೆ ಎಂಬ ಆಲೋಚನೆಯೇ ಆಗಿದೆ. ಹೀಗಾಗಿ ಹೈಕಮಾಂಡ್ ಕಡೆಯಿಂದ ಎಲ್ಲಾ ರೀತಿಯ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಅನೌನ್ಸ್ ಮಾಡುವುದೊಂದೆ ಬಾಕಿ ಇದೆ.

ಇನ್ನು ವಿರೋಧ ಪಕ್ಷದ ನಾಯಕ ಆಯ್ಕೆಯೂ ಆಗಬೇಕಾಗಿದೆ. ಸದ್ಯಕ್ಕೆ ಬಸವರಾಜ್ ಬೊಮ್ಮಾಯಿ ಅವರು ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿರುವ ಕಾರಣ, ಈಗ ಬೇಡ ಎಂದು ಸುಮ್ಮನಾಗಿದ್ದಾರೆ ಎನ್ನಲಾಗಿದೆ. ಅವರ ಆರೋಗ್ಯದ ಸ್ಥಿತಿ ಸರಿಯಾದ ಮೇಲೆ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಬಹುದು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment