ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಾಮರಾಜನಗರ; ಮಲೆಮಹದೇಶ್ವರ ಸ್ವಾಮಿಗೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಇದ್ದಾರೆ. ಮಾದಪ್ಪನ ಭಕ್ತರು ಹುಂಡಿಗೆ ಹಾಕುವ ಕಾಣಿಕೆ ಹಣವೇ ಎಣಿಕೆ ಮಾಡುವಾಗ ಕೋಟಿ ಕೋಟಿ ಕಲೆಕ್ಷನ್ ಆಗಿರುತ್ತದೆ. ಇದನ್ನ ನೋಡಿದಾಗಲೇ ಅರ್ಥವಾಗಬೇಕು ಮಾದಪ್ಪನ ಎಷ್ಟು ಭಕ್ತರಿದ್ದಾರೆ ಅನ್ನೋದು. ಇದೀಗ ಮಲೆಮಹದೇಶ್ವರ ಬೆಟ್ಟದ ಮ್ಯೂಸಿಯಂ ವಿಚಾರಕ್ಕೆ ಸಾಕಷ್ಡು ವಿವಾದ ಸೃಷ್ಟಿಯಾಗಿದೆ. 108 ಅಡಿ ಮಹದೇಶ್ವರ ಪುತ್ಥಳಿ ಕೆಳಗೆ ನಿರ್ಮಾಣವಾಗಿರುವ ಮ್ಯೂಸಿಯಂ ವಿವಾದದ ಕೇಂದ್ರ ಬಿಂದುವಾಗಿದೆ.
ಅಷ್ಟಕ್ಕೂ ವಿವಾದ ಆಗುವುದಕ್ಕೆ ಕಾರಣವೇನು ಅನ್ನೋದನ್ನ ನೋಡುವುದಾದರೆ, ಮಾ್ಪ್ಪನ ಇತಿಹಾಸವನ್ನು ಸಾರುವ ಕಲಾಕೃತಿಗಳು ಮ್ಯೂಸಿಯಂನಲ್ಲಿದೆ. ಆ ಕಲಾಕೃತಿಗಳಲ್ಲಿ ರಾಮಮೊಗಪ್ಪ ದಂಪತಿಯ ಕಲಾಕೃತಿಯನ್ನು ನಿರ್ಮಾಣ ಮಾಡಿಲ್ಲ. ಇದೇ ಇಂದಿಗೆ ಸಮಸ್ಯೆಯಾಗಿದೆ. ಆ ವಂಶಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದು, ಸರಗೂರು ಮಠದ ಸಿದ್ದಪ್ಪ ನ್ಯಾಯಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಮೂರ್ತಿ ದೇವದಾಸ್ ಅವರು ಪುತ್ಥಳಿಗೆ ಅವಕಾಶ ನೀಡುವಂತೆ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ ಸೂಚನೆಯನ್ನ ನೀಡಿದೆ. ಈ ಸಂಬಂಧ ನ್ಯಾಯಾಲಯ ಕೂಡ ಪ್ರಶ್ನೆ ಮಾಡಿತ್ತು. ಆದರೆ ಪ್ರಾಧಿಕಾರದ ವಕೀಲರು ಮ್ಯೂಸಿಯಂ ಸಂಪೂರ್ಣ ಆಗಿಲ್ಲ ಅಂತಾನೇ ಉತ್ತರ ನೀಡಿದ್ದರು.
ಈಗ ನೋಡಿದ್ರೆ ಮ್ಯೂಸಿಯಂ ಸಂಪೂರ್ಣವಾಗಿದ್ದು, ಏಪ್ರಿಲ್ 24 ರಂದು ಉದ್ಘಾಟನೆಗೂ ಸಿದ್ಧವಾಗಿದೆ. ಈ ನಡುವೆ ಇದೊಂದು ಅಪೂರ್ಣಗೊಂಡ ಮ್ಯೂಸಿಯಂ. ಯಾವುದೇ ಕಾರಣಕ್ಕೂ ಉದ್ಘಾಟನೆಯಾಗಬಾರದು ಎಂದು ರಾಮಮೋಗಪ್ಪ ವಂಶಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಈ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಒಂದು ವೇಳೆ ಉದ್ಘಾಟನೆಯಾದರೆ ಕಟ್ಮೆಂಟ್ ಆಫ್ ಕೋರ್ಟ್ ಆಗುವ ಸಾಧ್ಯತೆ ಇದೆ. ಮಹದೇಶ್ವರರಿಗೆ ಮೊದಲು ಎಣ್ಣೆ ಮಜ್ಜನ ಮಾಡಿಸಿದ್ದು, ಮಹದೇಶ್ವರನ ಪೂಜೆಗೆ ಮಹಿಳೆಯರಿಗೂ ಅವಕಾಶವನ್ನು ಕಲ್ಪಿಸಿದ್ದು ರಾಮಮೊಗಪ್ಪ ಕುಟುಂಬವಾಗಿದೆ. ಮ್ಯೂಸಿಯಂನಲ್ಲಿ ಈ ಕುಟುಂಬವನ್ನು ಕಡೆಗಣಿಸಿದ್ದು, ಎಷ್ಟು ಸರಿ ಅಂತಿದ್ದಾರೆ ಅವರ ಕುಟುಂಬಸ್ಥರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್