Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದರಾಮಯ್ಯರಿಗೆ ನಿರೀಕ್ಷಣಾ ಜಾಮೀನು ಸಿಗುತ್ತಾ..? ಸಿಬಿಐಗೆ ವಹಿಸುವ ಅಧಿಕಾರ ಇರುವುದು ಯಾರಿಗೆ..?

---Advertisement---

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮೂಡಾ ಕೇಸು ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸುವುದಕ್ಕೂ ಸೂಚನೆ ನೀಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಬೆಂಬಲಿಗರಿಗೆ ಆತಂಕ ಶುರುವಾಗಿದೆ. ಹಾಗಾದ್ರೆ ಸಿದ್ದರಾಮಯ್ಯ ಅವರಿಗೆ ನಿರೀಕ್ಷಣಾ ಜಾಮೀನು ಪಡೆಯುವ ಸಾಧ್ಯತೆ ಇದೆಯಾ..? ಈ ಕೇಸನ್ನ ಸಿಬಿಐಗೆ ವಹಿಸಿದರೆ ಏನು ಮಾಡೋದು ಎಂಬೆಲ್ಲಾ ಪ್ರಶ್ನೆಗಳು ಈ ಕೇಸಲ್ಲಿ ಹಲವರಿಗೆ ಕಾಡುತ್ತಿದೆ.

ಈ ಬಗ್ಗೆ ಲಾಯರ್ ರಾಮಮೂರ್ತಿಯವರು ಖಾಸಗಿ ಚಾನೆಲ್ ಒಂದರಲ್ಲಿ ಮಾಹಿತಿ ನೀಡಿದ್ದು ಹೀಗಿದೆ. ನ್ಯಾಯಾಲಯದ ಆದೇಶ ಇರುವ ಕಾರಣ ಅವರು ಈಗಲೇ ಎಫ್ಐಆರ್ ದಾಖಲಿಸಲೇಬೇಕಿದೆ. ತನಿಖೆ ಶುರುವಾದಾಗ ಸತ್ಯಾಂಶ ಹೇಗೆ ಹೊರಗೆ ಬರುತ್ತದೋ ಆಮೇಲೆ ಆರೋಪಿಗಳ ಪಟ್ಟಿ ಬದಲಾಗುತ್ತದೆ ಎಂದು ಆರೋಪ ಪಟ್ಟಿ ವಿಚಾರಕ್ಕೆ ಮಾಹಿತಿ ನೀಡಿದ್ದಾರೆ.

ಇನ್ನು ನಿರೀಕ್ಷಣಾ‌ ಜಾಮೀನಿನ ಬಗ್ಗೆ ಮಾತನಾಡಿ, ಅದು ತನಿಖಾಧಿಕಾರಿಯ ವಿವೇಚನೆಗೆ ಬಿಟ್ಟಿದ್ದು. ಆರೋಪಿಗಳಿಗೆ ಬಂಧನದ ಭೀತಿ ಎದುರಾದರೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಬಹುದು. ಬಂಧನವೇನು ಆಗಲ್ಲ ಎಂದಾದರೆ ಜಾಮೀನಿಗೆ ಅರ್ಜಿ ಸಲ್ಲಿಸಲ್ಲ ಎಂದಿದ್ದಾರೆ.

ಕೇಸನ್ನು ಸಿಬಿಐಗೆ ವಹಿಸುವ ಬಗ್ಗೆ ಮಾತನಾಡಿ, ಎಫ್ಐಆರ್ ದಾಖಲಾದ ತಕ್ಷಣ ಲೋಕಾಯುಕ್ತ ಪೊಲೀಸರಿಗೆ ಎಲ್ಲಾ ಅಧಿಕಾರ ಬರುತ್ತದೆ. ಯಾವ ವಸ್ತುವನ್ನಾದರೂ ಸೀಜ್ ಮಾಡಬಹುದು, ಯಾರನ್ನಾದರೂ ತನಿಖೆ ಮಾಡಬಹುದಾಗಿರುತ್ತದೆ. ಈ ವಿಷಯದ ಒಳಹೊಕ್ಕು ತನಿಖೆ ಮಾಡಬೇಕಾಗುತ್ತದೆ. ಕೆಲವರು ಈಗಾಗಲೇ ಲೋಕಾಯುಕ್ತ ಪೊಲೀಸ್ ತನಿಖೆಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಸಿಬಿಐಗೆ ವಹಿಸುವುದಕ್ಕೆ ಹೈಕೋರ್ಟ್ ಗೆ ಮಾತ್ರ ಅನುಮತಿ ಇದೆ. ಬೇರೆ ಯಾರೂ ಕೂಡ ಸಿಬಿಐಗೆ ವಹಿಸುವಂತೆ ಇಲ್ಲ. ಇಲ್ಲಂದ್ರೆ ರಾಜ್ಯ ಸರ್ಕಾರ ವಹಿಸಬಹುದಾಗಿದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment