ಚಪ್ಪಲಿಯಲ್ಲಿ ಹೊಡೆಯುತ್ತೀನಿ : ಬಿಜೆಪಿ ಸಂಸದರಿಗೆ ಎಚ್ಚರಿಕೆ ಕೊಟ್ಟ ಕವಿತಾ..!

 

ತೆಲಂಗಾಣ: ತಮ್ಮ ವಿರುದ್ಧ ವೈಯಕ್ತಿಕ ಟೀಕೆ ಮಾಡುವುದನ್ನು ನಿಲ್ಲಿಸದೇ ಹೋದಲ್ಲಿ ನಿಜಾಮಾಬಾದ್ ರಸ್ತೆಯಲ್ಲಿಯೇ ನಿಲ್ಲಿಸಿಕೊಂಡು ಚಪ್ಪಲಿ ತೆಗೆದುಕೊಂಡು ಹೊಡೆಯುತ್ತೀನಿ ಎಂದು ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಮಗಳು ಕವಿತಾ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಸಂಸದ ಧರ್ಮಪುರಿ ಅರವಿಂದ್ ಅವರು ಕವಿತಾ ಅವರು ಬಿಜೆಪಿ ಸೇರ್ಪಡೆಗೆ ಪ್ರಯತ್ನಿಸುತ್ತಿದ್ದಾರೆ. ಅವರು ಪಕ್ಷವನ್ನು ಬದಲಾಯಿಸಿದ್ದಾರೆ. ಸಿಎಂ ಅವರ ಮಗಳ ಮೇಲೆ ವ್ಯಾಪಾರ ಶುರು ಮಾಡಿದ್ದಾರೆ ಎಂದು ಹೇಳಿದ್ದರು. ಈ ಹೇಳಿಕೆಗೆ ಕವಿತಾ ಸರಿಯಾಗಿ ತಿರುಗೇಟು ನೀಡಿದ್ದಾರೆ.

ಪ್ರತಿಕ್ರಿಯೆ ನೀಡಿದ ಕವಿತಾ, ಅರವಿಂದ್ ಅವರು ಬಹಳ ಕೆಳಮಟ್ಟಕ್ಕೆ ಇಳಿದಿದ್ದಾರೆ. ಅಲ್ಲ ನಿಮ್ಮ ಬಗ್ಗೆ ನಿಮಗೆ ಏನನ್ನಿಸುತ್ತದೆ..? ಆಧಾರರಹಿತ ಕಮೆಂಟ್ ಗಳನ್ನು ಮಾಡಿದರೆ ಸರಿ ಇರುವುದಿಲ್ಲ. ಇನ್ನೊಮ್ಮೆ ವೈಯಕ್ತಿಕ ಕಾರಣಗಳನ್ನು ಇಟ್ಟುಕೊಂಡು ಕಮೆಂಟ್ ಮಾಡಿದರೆ ನಿಜಾಮಾಬಾದ್ ರಸ್ತೆಯಲ್ಲಿ ನಿಲ್ಲಿಸಿಕೊಂಡು ಚಪ್ಪಲಿಯಲ್ಲಿ ಹೊಡೆಯುತ್ತೀನಿ ಎಂದಿದ್ದಾರೆ.

ಬಹಳ ದಿನದಿಂದ ನಾನು ಸಂಯಮದಿಂದ ವರ್ತಿಸುತ್ತಿದ್ದೇನೆ. ಆದರೆ ಇನ್ನು ಸುಮ್ಮನೆ ಇರುವುದಿಲ್ಲ. ಮುಖ್ಯಮಂತ್ರಿಯಾಗಿರುವ ಕೆ ಚಂದ್ರಶೇಖರ್ ರಾವ್ ಅವರಿಗೂ ಗೌರವ ನೀಡುವುದಿಲ್ಲ. ಆ ರೀತಿಯ ಟೀಕೆಗಳನ್ನು ಮಾಡುತ್ತಿರುತ್ತಾರೆ. ಅಷ್ಟಕ್ಕೂ ಅರವಿಂದ್ ತೆಲಂಗಾಣಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

40 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago