ತೆಲಂಗಾಣದ ರಾಜ್ಯಪಾಲರಾಗ್ತಾರಾ ಸೂಪರ್ ಸ್ಟಾರ್ ರಜನೀಕಾಂತ್..? ಅಷ್ಟಕ್ಕೂ ಬಿಜೆಪಿಯ ಪ್ಲ್ಯಾನ್ ಏನು..?

 

ಸದ್ಯ ಸೂಪರ್ ಸ್ಟಾರ್ ರಜನೀಕಾಂತ್ ಜೈಲರ್ ಸಕ್ಸಸ್ ಖುಷಿಯಲ್ಲಿದ್ದಾರೆ. ಇದರ ಬೆನ್ನಲ್ಲೇ ರಜನೀಕಾಂತ್ ರಾಜ್ಯಪಾಲರಾಗ್ತಾರೆ ಎಂಬ ಸುದ್ದಿಯೂ ಜೋರಾಗಿದೆ. ತೆಲಂಗಾಣದ ರಾಜ್ಯಪಾಲರನ್ನಾಗಿ ಮಾಡಲು ಬಿಜೆಪಿ ಪ್ಲ್ಯಾನ್ ರೂಪಿಸಿದೆ ಎನ್ನಲಾಗ್ತಾ ಇದೆ‌. ರಜನೀಕಾಂತ್ ಕೂಡ ಈ ಹಿಂದೆ ತಮಿಳುನಾಡು ರಾಜಕೀಯಕ್ಕೆ ಬರುವುದಾಗಿ ಹೇಳಿದ್ದರು. ಆ ಬಳಿಕ ಅನಾರೋಗ್ಯಕ್ಕೆ ತುತ್ತಾದ ಕಾರಣ ರಾಜಕೀಯದ ವಿಚಾರವನ್ನು ಮುಂದೂಡಲಾಗಿತ್ತು. ಇದೀಗ ಅವರು ರಾಜಕೀಯಕ್ಕೆ ಬರುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ರಜನೀಕಾಂತ್ ಅವರಿಗೆ ರಾಜ್ಯಪಾಲರ ಹುದ್ದೆಯ ಆಫರ್ ನೀಡಲಾಗಿದೆ ಎನ್ನಲಾಗಿದೆ. ಆದರೆ ಈ ಸಂಬಂಧ ಇನ್ನು ಯಾವುದೇ ಅಧಿಕೃತ ಮಾಹಿತಿ ರಜನೀಕಾಂತ್ ಅವರ ಕಡೆಯಿಂದಾಗಲಿ ಅಥವಾ ಬಿಜೆಪಿ ಕಡೆಯಿಂದಾಗಲಿ ಬಂದಿಲ್ಲ. ಇತ್ತಿಚೆಗೆ ಹಿಮಾಲಯಕ್ಕೆ ಹೋಗಿದ್ದ ರಜನೀಕಾಂತ್ ಬರುವಾಗ ಉತ್ತರ ಪ್ರದೇಶದ ಸಿಎಂ ಸೇರಿದಂತೆ ಹಲವು ರಾಜಕೀಯ ಗಣ್ಯರನ್ನು ಭೇಟಿಯಾಗಿ ಬಂದಿದ್ದರು.

ಇನ್ನು ತೆಲಂಗಾಣದಲ್ಲಿ ರಾಜ್ಯಪಾಲರು ಹಾಗೂ ಸಿಎಂ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ. ಇದು ಅಲ್ಲಿನ ರಾಜಕೀಯ ಬೆಳವಣಿಗೆಯ ಮೇಲೆ ಪರಿಣಾಮ ಬೀರಲಿದೆ. ಇದರ‌ನಡುವೆ ರಜನೀಕಾಂತ್ ಅವರ ರಾಜ್ಯಪಾಲರಾಗುವ ವಿಚಾರ ಸದ್ದು ಮಾಡಿದ್ದು, ಆ ಕಿತ್ತಾಟ‌ ನಿಲ್ಲಿಸಲು ಬಿಜೆಪಿ ಏನಾದರೂ ಈ ಪ್ಲ್ಯಾನ್ ಮಾಡಿದೆಯಾ ಎಂಬ ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ರಜನೀಕಾಂತ್ ಮತ್ತು ಶಿವಣ್ಣ ಅಭಿನಯದ ಜೈಲರ್ ಕ್ರೇಜ್ ಇನ್ನು ಹಾಗೇ ಇದೆ. ರಿಲೀಸ್ ಆದ ಕೆಲವೇ ದಿನಗಳಲ್ಲಿ ಒಳ್ಳೆ ರೆಸ್ಪಾನ್ಸ್ ಪಡೆದುಕೊಂಡ ಸಿನಿಮಾ, ಕ್ರೇಜ್ ಸೃಷ್ಟಿ ಮಾಡಿತ್ತು. ಇದರ ನಡುವೆ ರಜನೀಕಾಂತ್ ರಾಜಕೀಯ ಪ್ರವೇಶ ಮಾಡ್ತಾರ ಎಂಬುದನ್ನು ನೋಡಬೇಕಿದೆ.

suddionenews

Recent Posts

ವಿರಾಟ್ ಕೊಹ್ಲಿ ಸೂಪರ್ ಸೆಂಚುರಿ : ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿದ ಭಾರತ

  ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…

16 minutes ago

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

41 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

1 hour ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

2 hours ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

2 hours ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago