Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಇರಲ್ವಾ..? ಸಿಟಿ ರವಿ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಇರಲ್ಲ. ಲೋಕಸಭಾ ಚುನಾವಣೆಯ ಬಳಿಕ ಪತನಗೊಳ್ಳುತ್ತದೆ ಎಂದು ಸಿಟಿ ರವಿ ಭವಿಷ್ಯ ನುಡಿದಿದ್ದಾರೆ. ಶಾಸಕರ ಒಳಬೇಗುದಿಯಿಂದಾನೆ ಪತನವಾಗುತ್ತೆ ಎಂದಿದ್ದಾರೆ.

ಜಾಸ್ತಿ ಪಂಚರ್ ಹಾಕಿದರೂ ಅದು ಕಷ್ಟವೇ. ಲೋಕಸಭಾ ಚುನಾವಣೆಯ ತನಕ ಬ್ಯಾಲೆನ್ಸ್ ಮಾಡುತ್ತಾರೆ ಅಷ್ಟೇ. ಸಿಎಂ ಸಿದ್ದರಾಮಯ್ಯ ಸರ್ಕಾರ ಲೋಕಸಭಾ ಚುನಾವಣೆ ಬಳಿಕ ಪಂಕ್ಚರ್ ಆಗೋದು ಗ್ಯಾರಂಟಿ. ಸಚಿವರ ವಿರುದ್ಧ ಕಾಂಗ್ರೆಸ್ ಶಾಸಕರು ಬರೆದ ಪತ್ರ ನಕಲಿ ಎಂದು ಹೇಳಿದ್ರು. ಆದರೆ ಅದನ್ನು ಗಂಭೀರವಾಗಿ ತೆಗೆದುಕೊಂಡು ಸಿಎಂ ಸಿದ್ದರಾಮಯ್ಯ ಅವರು ಸರಣಿ ಸಭೆ ನಡೆಸುತ್ತಿದ್ದಾರೆ.

ಈ ರೀತಿಯ ಅಸಮಾಧಾನ ನೋಡಿದ್ರೆ ಲೋಕಸಭಾ ಚುನಾವಣೆ ತನಕ ಸರ್ಕಾರ ಉಳಿಯುತ್ತಾ..? ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಬರೆದು ಪತ್ರ ನಕಲಿ ಎನ್ನುತ್ತಾರೆ. ಇದರ ಹಿಂದೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇರಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ನಕಲಿ ಎಂದು ಹೇಳಿದಾಗಲೇ ಅವರು ಎಡವಿದ್ದು. ನಕಲಿ ಎಂದು ಯಾರೂ ಹೇಳಬೇಕು..? ತನಿಖೆ ನಡೆಸಿದ ಬಳಿಕ ಹೇಳಬೇಕು ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!