Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವರ್ತೂರು ಸಂತೋಷ್ ಗೆ ಇಂದು ಜಾಮೀನು ಸಿಗುತ್ತಾ..?

---Advertisement---

ಬೆಂಗಳೂರು: ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ್ದರು ಎಂಬ ಕಾರಣಕ್ಕೆ ಬಿಗ್ ಬಾಸ್ ಮನೆಯಿಂದಾನೇ ಅವರನ್ನು ಅರಣ್ಯಾಧಿಕಾರಿಗಳು ಕರೆದುಕೊಂಡು ಹೋಗಿದ್ದರು. ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೂ ನೀಡಲಾಗಿತ್ತು. ಬಳಿಕ ವರ್ತೂರು ಪರ ವಕೀಲರು ಜಾಮೀನಿಗೂ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ವರ್ತೂರು ಸಂತೋಷ್ ಬಂಧನವನ್ನು ಪ್ರಶ್ನಿಸಿ ಜಾಮೀನಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಕೋರ್ಟಗ ಅರ್ಜಿ ವಿಚಾರಣೆ ನಡೆಸಿದ ಬಳಿಕ ಆದೇಶವನ್ನು ಕಾಯ್ದಿರಿಸಿತ್ತು. ಇಂದು ಮತ್ತೆ ಆ ಅರ್ಜಿ ವಿಚಾರಣೆಗೆ ಬರಲಿದ್ದು, ಆದೇಶ ಹೊರ ಬೀಳುವ ಸಾಧ್ಯತೆ ಇದೆ.

ಈ ಸಂಬಂಧ ವರ್ತೂರು ಸಂತೋಷ್ ಪರ ವಕೀಲ ಕೆ ನಟರಾಜನ್ ಮಾತನಾಡಿದ್ದು, ಸೆಲೆಬ್ರೆಟಿಗಳಿಗೆ ನೋಟೀಸ್ ಕೊಟ್ಟಿದ್ದಾರೆ. ಆದರೆ ವರ್ತೂರು ಸಂತೋಷ್ ಗೆ ಮಾತ್ರ ಯಾವ ನೋಟೀಸ್ ಕೂಡ ನೀಡಿಲ್ಲ. ಏಕಾಏಕಿ ಅವರನ್ನು ಬಂಧಿಸಿದ್ದಾರೆ. ಸಂತೋಷ್ ಕೃಷಿಕರು. ಅವರ ಮೇಲೆ ಯಾವುದೇ ಅಪರಾಧಗಳಿಲ್ಲ. ಅರಣ್ಯಾಧಿಕಾರಿಗಳ ಕ್ರಮ ಸರಿಯಲ್ಲ. ಈ ಬಗ್ಗೆ ನ್ಯಾಯಾಲಯದಲ್ಲಿ ಪ್ರಸ್ತಾಪ ಮಾಡಿದ್ದೇನೆ. ಇವತ್ತು ಜಾಮೀನು ಸಿಗುವ ಸಾಧ್ಯತೆ ಇದೆ ಎಂದಿದ್ದಾರೆ.

ಇನ್ನು ವರ್ತೂರು ಸಂತೋಷ್ ಹುಲಿ ಉಗುರಿನ ಪ್ರಕರಣದಲ್ಲಿ ಯಾವಾಗ ಬಂಧಿತರಾದರೋ ಅಂದಿನಿಂದ ಸೆಲೆಬ್ರೆಟಿಗಳಿಗೂ ಕಂಟಕ ಶುರುವಾಗಿತ್ತು. ಈಗಾಗಲೇ ಹಲವು ಕೇಸ್ ಗಳು ದಾಖಲಾಗಿವೆ. ಹಲವು ಪೆಂಡೆಂಟ್ ಗಳನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ಕೂಡ ನಡೆಯುತ್ತಿದೆ. ಬೇರೆ ಬೇರೆ ಕಡೆಗಳಲ್ಲೂ ಹುಲಿ ಉಗುರಿನ ಪತ್ತೆಯಾಗುತ್ತಿದೆ. ಅರಣ್ಯಾಧಿಕಾರಿಗಳು ಈ ಮೂಲಕ ಹೈ ಅಲರ್ಟ್ ಆಗಿದ್ದಾರೆ. ದರ್ಶನ್ ಹಾಗೂ ನಿಖಿಲ್ ಕುಮಾರಸ್ವಾಮಿ ಮನೆಯಲ್ಲಿ ಸಿಕ್ಕಿದ್ದು ಒರಿಜಿನಲ್ ಅಲ್ಲ ಎಂಬುದು ಈ ಮಧ್ಯೆ ತಿಳಿದು ಬಂದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment