Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮೋದಿಯವರ ಮುಂದೆ ರಾಹುಲ್ ಗಾಂಧಿ ಕರೆದುಕೊಂಡು ಬರ್ತೀರಾ..? : ಬಿಎಸ್ವೈ, ಸಿಟಿ ರವಿ ಕೆಂಡಾಮಂಡಲ..!

---Advertisement---

ಬೆಂಗಳೂರು: ಕಾಂಗ್ರೆಸ್ ಹೊತ್ತಿಸಿದ ಟೆಂಡರ್ ಕಿಡಿ ಈಗ ಬಿಜೆಪಿ ನಾಯಕರಿಗೆ ತಲೆ ಕೆಡಿಸಿದೆ. ಕಾಂಗ್ರೆಸ್ ನಾಯಕರ ಮಾತಿಗೆ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಸಿಟಿ ರವಿ ಮಾತನಾಡಿ, ಅವರ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ದಾಖಲೆಗಳು ಇಲ್ಲದೆ ಇರುವಂತ ಆರೋಪ ನಿಮ್ಮದು. ಗಾಳಿಯಲ್ಲಿ ಗುಂಡು ಆರಿಸುವುದರಲ್ಲಿ ನಿಸ್ಸೀಮರು. ದಾಖಲೆಗಳಿದ್ದರೆ ಕೊಡಿ. ಇಷ್ಟೆಲ್ಲಾ ದಾಖಲೆಗಳಿದ್ದರೆ ವಿಧಾನಸೌಧದಲ್ಲಿ ಯಾಕೆ ಹೇಳಲಿಲ್ಲ. ವಿಧಾನಸೌಧದಲ್ಲಿ ಮಾತನಾಡಿ ಎಂದರೆ ಮಾತನಾಡಲ್ಲ. ಸುಮ್ಮನೆ ಹೊರಗೆ ಬಂದು ಮಾತನಾಡುತ್ತಾರೆ. ವಿಕ್ಷಗಳ ಬಳಿ ದಾಖಲೆ ಇದ್ದರೆ, ಎಸಿಬಿ, ಲೋಕಾಯುಕ್ತಕ್ಕೆ ದೂರು ಕೊಡಲಿ. ಅವರಿಗೂ ಸ್ವತಂತ್ರ್ಯವಿದೆ. ಯಾರಿಗೂ ನಾವೂ ನಿರಾಕರಿಸುತ್ತಿಲ್ಲ ಎಂದಿದ್ದಾರೆ.

 

ಈ ಬಗ್ಗೆ ಯಡಿಯೂರಪ್ಪ ಮಾತನಾಡಿ, ಕಳೆದ ಎಂಟು ವರ್ಷದಲ್ಲಿ ಪ್ರಧಾನಿ‌ ಮೋದಿಯವರು ದೇಶ ವಿದೇಶ ಸುತ್ತಿ‌ ಬಂದರು ವಿಶ್ರಾಂತಿ ತೆಗೆದುಕೊಳ್ಳದೆ ದೇಶ ಸೇವೆ ಮಾಡುತ್ತಿರುವ ಪ್ರಧಾನಿ ಮೋದಿಯವರು ನಮ್ಮ ಜೊತೆ ಇದ್ದಾರೆ. ಇದ್ಯಾರೋ ಯಂಕ – ನಾಣಿ – ಸೀನನಿಗೆ ತಲೆ ಕೆಡಿಸಿಕೊಳ್ಳುವುದು ಬೇಡ. ಮೋದಿಯವರ ಬಗ್ಗೆ ಜನ ಎಷ್ಟು ಭರವಸೆ ಇಟ್ಟಿದ್ದಾರೆ ಗೊತ್ತಿದೆ. ರಾಹುಲ್ ಗಾಂಧಿ ಬಿಜೆಪಿಗೆ ಸವಾಲು ಆಗುವುದಕ್ಕೆ ಸಾಧ್ಯವಾ. ಈ ಕಾಂಗ್ರೆಸ್ ನವರು ಯಂಕ, ನಾಣಿ, ಸೀನಾ ಅಂತಾರೆ. ಯಾರೋ ಏನೋ ಹೇಳುತ್ತಾರೆ ಅಂತ ತಲೆಕೆಡಿಸಿಕೊಳ್ಳವೇಡಿ. ಕಾಂಗ್ರೆಸ್ ನಾಯಕರು ತಿರುಕನ ಕನಸು ಕಾಣುತ್ತಿದ್ದಾರೆ.

ನಾನು ಕಾಂಗ್ರೆಸ್ ನವರುಗೆ ಒಂದು ಪ್ರಶ್ನೆ ಕೇಳುತ್ತೇನೆ. ನಿಮ್ಮ ನಾಯಕ ಯಾರು..? ರಾಹುಲ್ ಗಾಂಧಿಯನ್ನು ಕರೆದುಕೊಂಡು ಬಂದು ಮೋದಿ ಅವರ ಎದುರು ಮತ ಕೇಳುತ್ತೀರಾ..? ಯಾರು ಭಯ ಪಡುವುದು ಬೇಡ. ಈ ಬಾರಿಯೂ ನಾವೇ ಅಧಿಕಾರಕ್ಕೆ ಬರುವುದು ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...