Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತೀರಾ..? : ನಿಖಿಲ್ ಕುಮಾರಸ್ವಾಮಿ ಉತ್ತರ ಏನಾಗಿತ್ತು..?

Facebook
Twitter
Telegram
WhatsApp

ಬೀದರ್:ನಿಖಿಲ್ ಕುಮಾರಸ್ವಾಮಿ ಅವರು ಚುನಾವಣೆಗೆ ಸ್ಪರ್ಧಿಸಿ ಎರಡು ಬಾರೀ ಸೋಲು ಕಂಡಿದ್ದಾರೆ. ಇತ್ತಿಚೆಗೆ ದೊಡ್ಡ ಬ್ಯಾನರ್ ನಲ್ಲಿ ಸಿನಿಮಾ ಆರಂಭಿಸಿದ್ದಾರೆ. ಅಂದೇ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಿಖಿಲ್ ರಾಜಕೀಯದ ಬಗ್ಗೆ ಭವಿಷ್ಯ ಹೇಳಿದ್ದರು. ನಿಖಿಲ್ ಇನ್ನು ಐದು ವರ್ಷ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಸಿನಿಮಾದ ಕಡೆಗೆ ಹೆಚ್ಚು ಗಮನ ನೀಡುತ್ತಾರೆ ಎಂದಿದ್ದರು.

ಇದೀಗ ಅದೇ ವಿಚಾರವಾಗಿ ನಿಖಿಲ್ ಕುಮಾರಸ್ವಾಮಿ ಕೂಡ ಉತ್ತರ ನೀಡಿದ್ದಾರೆ. ನಾನು ಸಿನಿಮಾ ಶೂಟಿಂಗ್ ಆರಂಭಿಸಿ ಒಂದು ವಾರ ಆಗಿದೆ. ರಾಜಕೀಯದಿಂದ ದೂರ ಉಳಿಯಬೇಕು ಅಂತಾನೆ ಸಿನಿಮಾ ಕಡೆ ಗಮನ ಕೊಟ್ಟಿರುವುದು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತನಾಗಿ ಓಡಾಡುತ್ತೇನೆ ಎಂದು ಸ್ಪರ್ಧೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಬಗ್ಗೆ ಮಾತನಾಡಿ, ಮೈತ್ರಿ ಬಗೆಗಿನ ವಿಚಾರದಲ್ಲಿ ನಮ್ಮ‌ ಪಕ್ಷದ ವರಿಷ್ಠರೆ ತೆರೆ ಎಳೆಯುತ್ತಾರೆ‌. ಯಾರು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುದನ್ನು ಅವರೇ ತೀರ್ಮಾನ ಮಾಡುತ್ತಾರೆ. ಒಂದು ಪ್ರಾದೇಶಿಕ ಪಕ್ಷ ಕಟ್ಟುವುದು ಅಷ್ಟು ಸುಲಭವಲ್ಲ. ದೇವೇಗೌಡರ ಪರಿಶ್ರಮದಿಂದ, ಕಾರ್ಯಕರ್ತರಿಂದ ಜೆಡಿಎಸ್ ಪಕ್ಷ ಇದೆ. ಬಹಳಷ್ಟು ನಾಯಕರ ಕೊಡುಗೆ ಇದೆ. ಕುಮಾರಸ್ವಾಮಿ ಅವರು ಕೂಡ ಕಳೆದ 25 ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

error: Content is protected !!