Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀಗಳ ಸಹಕಾರದಿಂದ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆಯಡಿ ಕೆರೆಗೆ ನೀರು ಹರಿಯಿತು : ಶಾಸಕ ಡಾ.ಎಂ.ಚಂದ್ರಪ್ಪ

Facebook
Twitter
Telegram
WhatsApp

ಸುದ್ದಿಒನ್, ಹೊಳಲ್ಕೆರೆ, ಸೆಪ್ಟೆಂಬರ್. 25 : ಸಾವಿರಾರು ಕೋಟಿ ರೂ.ಗಳನ್ನು ತಂದು ಕ್ಷೇತ್ರವನ್ನು ಅಭಿವೃದ್ದಿಪಡಿಸಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.

ಮುತ್ತುಗದೂರು ಸರ್ಕಲ್‍ನಲ್ಲಿ ನಡೆಯುತ್ತಿರುವ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 32 ನೇ ಶ್ರದ್ದಾಂಜಲಿ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಬಹಳಷ್ಟು ಸಲ ಸರ್ಕಾರ ಎಚ್ಚರಿಕೆ ಕೊಟ್ಟರು ಇಂಜಿನಿಯರ್, ಗುತ್ತಿಗೆದಾರರು ಕೆಲಸ ಮಾಡಿರಲಿಲ್ಲ. ಅಂತಹ ಸಂದರ್ಭದಲ್ಲಿ ಸಿರಿಗೆರೆಯ ಡಾ.ಶಿವಮೂರ್ತಿ ಶಿವಚಾರ್ಯ ಮಹಾಸ್ವಾಮಿಗಳು ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ್ ಬೊಮ್ಮಾಯಿ ಇವರುಗಳು ಮುಖ್ಯಮಂತ್ರಿಗಳಾಗಿದ್ದಾಗ ಸಾಕಷ್ಟು ಒತ್ತಡ ತಂದ ಪರಿಣಾಮ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆಯಡಿ ತಾಲ್ಲೂಕಿನ ಮುತ್ತುಗದೂರು ಗ್ರಾಮದ ಕೆರೆಗೆ ನೀರು ಹರಿಯಲು ಸಾಧ್ಯವಾಯಿತು. ಜಿ.ಎಂ.ಸಿದ್ದೇಶ್ವರ್‍ರವರು ಕೇಂದ್ರ ಮಂತ್ರಿಯಾಗಿದ್ದಾಗ ಸಾಕಷ್ಟು ಹಣ ಮಂಜೂರು ಮಾಡಿಸಿದ್ದಾರೆಂದು ಹೇಳಿದರು.

ರೈತರು, ಜನಸಾಮಾನ್ಯರ ಬಗ್ಗೆ ಅಪಾರವಾದ ಕಾಳಜಿಯಿಟ್ಟುಕೊಂಡಿರುವ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಕಾಲ ಕಾಲಕ್ಕೆ ಇಂಜಿನಿಯರ್, ಗುತ್ತಿಗೆದಾರರುಗಳಿಗೆ ಎಚ್ಚರಿಕೆ ನೀಡುತ್ತ ಬಂದ ಪರಿಣಾಮ ಮುತ್ತುಗದೂರು ಗ್ರಾಮದ ಕೆರೆಗೆ ನೀರು ಬರುತ್ತಿದೆ. 2019 ರಲ್ಲಿ ಭರಮಸಾಗರ ಏತ ನೀರಾವರಿಗೆ 680 ಕೋಟಿ ರೂ.ಗಳನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿದ್ದೆ. ಮೂರು ವರ್ಷಗಳಲ್ಲಿ ನಲವತ್ತು ಕೆರೆಗಳಿಗೆ ನೀರು ತುಂಬಿಸಲಾಗಿದೆ. ಸಾಸಲು ಸರ್ಕಲ್‍ನಿಂದ ಹಿರೇಬೆನ್ನೂರು ಸರ್ಕಲ್‍ವರೆಗೆ 105 ಕೋಟಿ ರೂ.ಗಳಲ್ಲಿ ಕಾಂಕ್ರಿಟ್ ರಸ್ತೆಯಾಗಿದೆ. ಹಳ್ಳಕ್ಕೆ ಬ್ರಿಡ್ಜ್ ನಿರ್ಮಿಸಲು ಯಾರಾದರೂ ಜಾಗ ಕೊಟ್ಟರೆ ಹತ್ತು ಕೋಟಿ ರೂ.ಗಳಾಗಲಿ ಕಾಮಗಾರಿಗೆ ಆರಂಭಿಸುತ್ತೇನೆ.

ಸಾಸಲು ಸರ್ಕಲ್‍ನಿಂದ ರುದ್ರಪ್ಪ ಪೆಟ್ರೋಲ್ ಬಂಕ್‍ವರೆಗೆ ರಸ್ತೆಗೆ ಆರು ಕೋಟಿ ರೂ.ಗಳನ್ನು ಮಂಜೂರು ಮಾಡಿಸಿದ್ದೇನೆ. ಭೂತಪ್ಪನ ದೇವಸ್ಥಾನದ ಹತ್ತಿರ ಫ್ಲೈ ಓವರ್‍ಗೆ 34 ಕೋಟಿ ರೂ.ಗಳನ್ನು ಕೊಟ್ಟಿದ್ದೇನೆಂದರು.

ಶಾಂತಿವನ ವಿಶ್ರಾಂತಿ ಧಾಮದವರೆಗೆ ಸಿ.ಸಿ.ರಸ್ತೆ ಮಾಡಿಸುತ್ತೇನೆ. ಅಲ್ಲಿ ಬಿಲ್ಡಿಂಗ್ ಕಟ್ಟಲು ಹಣ ಮಂಜೂರು ಮಾಡಿಸುವೆ. ಮುತ್ತುಗದೂರು ಕೆರೆಗೆ ಎಸ್ಟಿಮೇಷನ್ ಮಾಡಿಸಿಕೊಟ್ಟರೆ ಹಣ ಬಿಡುಗಡೆಗೊಳಿಸಿ ಕಾಮಗಾರಿ ಆರಂಭಿಸಲಾಗುವುದು. ಭರಮಸಾಗರ ಕೆರೆ ಮಧ್ಯೆ ನೀರು ಉಕ್ಕಿ ಹರಿಯುತ್ತಿರುವುದನ್ನು ಕಂಡು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಪುಳಕಿತರಾದರು ಎಂದು ಡಾ.ಎಂ.ಚಂದ್ರಪ್ಪ ನುಡಿದರು.

ದಾವಣಗೆರೆ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್, ಪುಟ್ಟಣ್ಣ, ರುದ್ರಣ್ಣ, ನಾಗರಾಜ್, ಕೃಷ್ಣಪ್ರಸಾದ್, ಶಶಿಪಾಟೀಲ್ ಮತ್ತಿತರ ಪ್ರಮುಖರು ಶ್ರದ್ದಾಂಜಲಿ ಸಮಾರಂಭದಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ನಾಳೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.28 : ಸುಖಾಯು‌ ಆಯುರ್ವೇದ ಕ್ಲಿನಿಕ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಹಾಗೂ ಉಚಿತ ಆರೋಗ್ಯ ಸಲಹಾ ಶಿಬಿರವನ್ನು ನಗರದ ಸಾದಿಕ್ ನಗರದ ನಿವಾಸಿಗಳಿಗೆ ನಾಳೆ (ಸೆಪ್ಟೆಂಬರ್. 29 ರ ಭಾನುವಾರ)

ಈ ರಾಶಿಯವರ ಜೊತೆ ಮದುವೆಯಾಗಿ ಕೆಲವೇ ದಿನವೊಳಗೆ ಬಯಲಾಯಿತು ದುರ್ಬುದ್ಧಿ!

ಈ ರಾಶಿಯವರಿಗೆ ಕೈ ತುಂಬಾ ಹಣಪ್ರಾಪ್ತಿ. ಈ ರಾಶಿಯವರ ಜೊತೆ ಮದುವೆಯಾಗಿ ಕೆಲವೇ ದಿನವೊಳಗೆ ಬಯಲಾಯಿತು ದುರ್ಬುದ್ಧಿ! ಶನಿವಾರರಾಶಿ ಭವಿಷ್ಯ -ಸೆಪ್ಟೆಂಬರ್-28,2024 ಇಂದಿರಾ ಏಕಾದಶಿ ಸೂರ್ಯೋದಯ: 06:09, ಸೂರ್ಯಾಸ್ತ : 06:03 ಶಾಲಿವಾಹನ ಶಕೆ

ಎರಡನೆ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ

error: Content is protected !!