Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರುಡ್‍ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆದು ಮಹಿಳೆಯರು ಸ್ವ-ಉದ್ಯೋಗಿಗಳಾಗಿ : ರುಡ್‍ಸೆಟ್ ನಿರ್ದೇಶಕಿ ರಾಧ ಕರೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂ.11 : ಒಂದು ಕಾಲದಲ್ಲಿ ಅಡುಗೆ ಮನೆಗೆ ಸೀಮಿತಳಾಗಿದ್ದ ಮಹಿಳೆ ಇಂದು ಸಬಲೆಯಾಗಿ ಬದುಕಲು ಅನೇಕ ಯೋಜನೆಗಳಿವೆ ಎಂದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕಿ ಶ್ರೀಮತಿ ರಾಧ ತಿಳಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಸಿರಿಗೆರೆ ಯೋಜನಾ ಕಚೇರಿ ವ್ಯಾಪ್ತಿಯ ಡಿ.ಮದಕರಿಪುರ ಕಾರ್ಯಕ್ಷೇತ್ರದ ಸ್ಪೂರ್ತಿ ಜ್ಞಾನವಿಕಾಸ ಕೇಂದ್ರದಲ್ಲಿ ಮಹಿಳೆಯರಿಗೆ ಸ್ವ-ಉದ್ಯೋಗ ತರಬೇತಿ ಉದ್ಗಾಟಿಸಿ ಮಾತನಾಡಿದರು.

ಧರ್ಮಸ್ಥಳದ ಹೇಮಾವತಿ ಅಮ್ಮನವರು ಜ್ಞಾನವಿಕಾಸ ಕಾರ್ಯಕ್ರಮ ಮೂಲಕ ಮಹಿಳೆಯರಿಗೆ ನಾನಾ ರೀತಿಯ ಮಾಹಿತಿಗಳನ್ನು ನೀಡುತ್ತ ಹೇಗೆ ಸ್ವಾವಲಂಭಿಯಾಗಿ ಬದುಕಬಹುದು ಎನ್ನುವುದನ್ನು ಕಲಿಸುತ್ತಿದ್ದಾರೆ. ಟೈಲರಿಂಗ್, ಎಂಬ್ರಾಯಿಡಿಂಗ್, ಅಣಬೆ ಬೇಸಾಯ, ಕುರಿ ಸಾಕಾಣಿಕೆ, ಬ್ಯೂಟಿ ಪಾರ್ಲರ್ ಇನ್ನು ಹತ್ತು ಹಲವಾರು ತರಬೇತಿಗಳನ್ನು ಪಡೆಯುವುದರಿಂದ ಮಹಿಳೆ ಮನೆಯಲ್ಲಿಯೇ ಕುಳಿತ ಹಣ ಸಂಪಾದಿಸುವ ಅವಕಾಶಗಳಿವೆ. ಎಲ್ಲವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ತರಬೇತಿ ಪಡೆಯುವವರಿಗೆ ರುಡ್‍ಸೆಟ್ ಸಂಸ್ಥೆಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯಗಳನ್ನು ನೀಡುತ್ತಿದ್ದೇವೆ. ಮಹಿಳೆಯರು ತರಬೇತಿಗಳನ್ನು ಪಡೆಯುವ ಮೂಲಕ ಆರ್ಥಿಕವಾಗಿ ಸ್ವಾವಲಂಭಿಗಳಾಗಬಹುದೆಂದು ಹೇಳಿದರು.

ಕುಬೇರಮ್ಮ, ಕಮಲಾಕ್ಷಿ, ರೂಪ, ಪ್ರಮೀಳ, ಶ್ರೀದೇವಿ, ಜಯಶೀಲ, ಜ್ಞಾನವಿಕಾಸ ಸಮನ್ವಯಾಧಿಕಾರಿ ಶಿವಲೀಲ ಎಸ್.ಬಾಗೋಡಿ ವೇದಿಕೆಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...