Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಿಳೆಯರಿಗೆ ಮೀಸಲಾತಿ ಅಗತ್ಯ : ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

Facebook
Twitter
Telegram
WhatsApp

ಚಿತ್ರದುರ್ಗ : ವಿಧಾನಸಭೆ ಮತ್ತು ಪಾರ್ಲಿಮೆಂಟ್‍ನಲ್ಲಿ ಮಹಿಳಾ ಮೀಸಲಾತಿ ಕುರಿತು ಚರ್ಚೆಯಾಗುತ್ತಿದ್ದು, ಕಾನೂನು ಜಾರಿಗೊಳಿಸುವ ಈ ಎರಡು ಕಡೆ ಮಹಿಳೆಯರಿಗೆ ಮೀಸಲಾತಿ ಬೇಕು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.

ಬ್ರೆಡ್ಸ್ ಬೆಂಗಳೂರು ಹಾಗೂ ಚಿತ್ರಡಾನ್‍ಬೋಸ್ಕೋ ಸಂಸ್ಥೆ ಚಿತ್ರದುರ್ಗ ವತಿಯಿಂದ ಶನಿವಾರ ಡಾನ್‍ಬೋಸ್ಕೋ ಸಂಸ್ಥೆಯಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಪ್ರಪಂಚದಲ್ಲಿಯೇ ಅತ್ಯಂತ ಬಲಶಾಲಿ ರಾಷ್ಟ್ರ ಅಮೇರಿಕಾದಲ್ಲಿ ಇದುವರೆವಿಗೂ ಒಬ್ಬ ಮಹಿಳೆ ಅಧ್ಯಕ್ಷೆಯಾಗಿಲ್ಲ. ಅದರೆ ಬ್ರಿಟನ್, ಪಾಕಿಸ್ಥಾನ, ಭಾರತದಲ್ಲಿ ಮಹಿಳೆಯರು ಪ್ರಧಾನಿಯಾಗಿದ್ದಾರೆ. ನಮ್ಮ ದೇಶದಲ್ಲಿ ಇತ್ತೀಚೆಗೆ ಮಹಿಳೆಯರಿಗೆ ಸ್ವಲ್ಪ ಮಟ್ಟಿಗೆ ಸಮಾನತೆ ನೀಡಲಾಗುತ್ತಿದೆ. ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರು ಹಣ ಉಳಿತಾಯ ಮಾಡಿ ಬ್ಯಾಂಕ್‍ಗಳಲ್ಲಿ ಇಟ್ಟಿರುವುದರಿಂದ ಮಹಿಳೆಯರಿಗೆ ಸಾಲ ಸಿಗುತ್ತದೆ. ಪ್ರಾಮಾಣಿಕವಾಗಿ ಸಾಲ ಹಿಂದಿರುಗಿಸುವವರು ಮಹಿಳೆಯರೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಹಿಳೆಯರ ಅಭಿವೃದ್ದಿಗೆ ವಿಶೇಷ ಗಮನ ಕೊಡುತ್ತಿದೆ. ಕೇಂದ್ರದಿಂದಲೂ ಸಾಕಷ್ಟು ಅನುದಾನಗಳು ಬರುತ್ತವೆ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿರುವಂತೆ ವಿಧಾನಸಭೆ ಮತ್ತು ಪಾರ್ಲಿಮೆಂಟ್‍ನಲ್ಲಿಯೂ ಮೀಸಲಾತಿ ಬೇಕು. ಇದರಿಂದ ಎಲ್ಲಾ ಜನಾಂಗಕ್ಕೂ ಸಮಾನತೆ ನೀಡಿದಂತಾಗುತ್ತದೆ. ಮಕ್ಕಳು ತಮ್ಮ ತಂದೆ-ತಾಯಿಗಳನ್ನು ವಯಸ್ಸಾದ ಮೇಲೆ ಅನಾಥಾಶ್ರಮಕ್ಕೆ ಸೇರಿಸುವ ಪದ್ದತಿ ಸರಿಯಲ್ಲ. ಮನೆಯಲ್ಲಿಯೇ ಜೋಪಾನ ಮಾಡಬೇಕು ಎಂದರು.

ಪೆನಾಲ್ ಅಡ್ವೊಕೇಟ್ ದಿಲ್‍ಷಾದ್ ಉನ್ನಿಸಾ ಮಾತನಾಡಿ 2019 ರಲ್ಲಿ ಚಿತ್ರದುರ್ಗದಿಂದ ಚಳುವಳಿ ಆರಂಭಿಸಿದ ಹೆಣ್ಣು ಮಕ್ಕಳು ಮದ್ಯಪಾನ ನಿಷೇಧಿಸುವಂತೆ ಬೆಂಗಳೂರಿಗೆ ಪಾದಯಾತ್ರೆ ಹೊರಟಿದ್ದು, ಒಂದು ವಿಶೇಷ. ಮಹಿಳೆಯರು ಪ್ರತಿಭಟನೆ, ಚಳುವಳಿ, ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ.

ಅಮೇರಿಕಾದ ನ್ಯೂಯಾರ್ಕ್‍ನ ಬಟ್ಟೆ ಗಿರಣಿಯಲ್ಲಿ ಯಾವುದೇ ನಿಗಧಿತ ಸಮಯವಿಲ್ಲದೆ. ಕಡಿಮೆ ವೇತನಕ್ಕಾಗಿ ದುಡಿಯುತ್ತಿದ್ದ ಮಹಿಳೆಯರು ತಮ್ಮ ಹಕ್ಕಿಗಾಗಿ 1908 ರಲ್ಲಿ ಹೋರಾಟ ನಡೆಸಿದ್ದರ ಫಲವಾಗಿ ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಮಹಿಳೆಯ ಆವಿಷ್ಕಾರ, ಸಾಧನೆ, ಶಿಕ್ಷಣಕ್ಕಾಗಿ ಯಾವುದೇ ಜಾತಿ, ಧರ್ಮ, ಲಿಂಗ ಭೇದವಿಲ್ಲ. ಸುಸ್ಥಿರ ಸಮಾಜಕ್ಕಾಗಿ ಸಮಾನತೆ ಬೇಕು. ಇದರಿಂದ ಅಭಿವೃದ್ದಿ ಸಾಧ್ಯ. ಲಿಂಗ ಅಸಮಾನತೆ ಇರುವ ಕಡೆ ಮಹಿಳೆಯರು ಧ್ವನಿಯಾಗಬೇಕು. ಹನ್ನೆರಡನೆ ಶತಮಾನದಲ್ಲಿ ಬಸವಣ್ಣನವರ ಅನುಭವ ಮಂಟಪದಲ್ಲಿ ಅಕ್ಕಮಹಾದೇವಿಗೆ ವಿಶೇಷ ಸ್ಥಾನಮಾನ ನೀಡಲಾಗಿತ್ತು. ಅವಕಾಶ ಸಿಕ್ಕರೂ ಕೆಲವು ಮಹಿಳೆಯರು ಮನೆಯಿಂದ ಹೊರಬರುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಡಾನ್‍ಬೋಸ್ಕೋ ನಿರ್ದೇಶಕ ಫಾದರ್ ಸಜ್ಜಿಜಾರ್ಜ್ ಅಧ್ಯಕ್ಷತೆ ವಹಿಸಿದ್ದರು.
ಫಾದರ್ ಜೋಸೆಫ್ ದಂಡಾವತಿ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಮಹಾಲಕ್ಷ್ಮಿ, ಸುಧ ವೇದಿಕೆಯಲ್ಲಿದ್ದರು.

ಶೃತಿ ಪ್ರಾರ್ಥಿಸಿದರು. ಥೆರೇಸಾ ಸ್ವಾಗತಿಸಿದರು. ಸಣ್ಣನಿಂಗಪ್ಪ ವಂದಿಸಿದರು. ಕಾರ್ಯಕ್ರಮ ಸಂಯೋಜಕಿ ಭಾರತಿ ನಿರೂಪಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!