ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 02 : ಭಾರತದಲ್ಲಿ ಹಬ್ಬಗಳಿಗೆ ವಿಶೇಷ ಸ್ಥಾನವಿದೆ ಅದರಲ್ಲೂ ನವರಾತ್ರಿ ಹಬ್ಬದ ಪ್ರಯುಕ್ತ ಶಮಿ ಅಥವಾ ಬನ್ನಿ ಮರವನ್ನು ಮಹಿಳೆಯರು ಭಯ ಭಕ್ತಿಯಿಂದ 9 ದಿನಗಳ ಕಾಲ ಪೂಜೆ ಮಾಡಿ ಇಷ್ಟಾರ್ಥಗಳು ನೆರವೇರಲಿ ಎಂದು ಕಾಳಿಯಲ್ಲಿ ಬೇಡಿಕೊಳ್ಳುತ್ತಾರೆ.
ನವರಾತ್ರಿಯ ನಂತರ ಅಧರ್ಮದ ವಿರುದ್ಧ ಜಯವನ್ನು ಸಾಧಿಸುವ ವಿಜಯದಶಮಿ ಹಬ್ಬವನ್ನು ಆಚರಿಸುವ ಹಿನ್ನೆಲೆಯಲ್ಲಿ ವಿಜಯ ದಶಮಿ ಹಬ್ಬವು ಆಯಾ ಪ್ರದೇಶಗಳಿಗೆ ತಕ್ಕಂತೆ ತನ್ನ ಆಚರಣೆಯಲ್ಲಿ, ನಂಬಿಕೆಯಲ್ಲಿ ಭಿನ್ನತೆಯನ್ನು ಹೊಂದಿದೆ.
ಕರ್ನಾಟಕದಲ್ಲಿ ಈ ದಿನ ಶಮಿ ಪೂಜೆಗೆ ಅಥವಾ ಬನ್ನಿ ವೃಕ್ಷದ ಪೂಜೆಯನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ.
ನವರಾತ್ರಿ ವೇಳೆ ಅನೇಕ ರೂಪಗಳ ದೇವಿಗೆ ಅರ್ಚನೆ ನಡೆಯುತ್ತದೆ. ಇದರ ಜೊತೆಯಲ್ಲೇ ಮಹಾನಮಿಯ ದಿನದಂದು ಬನ್ನಿ (ಶಮಿ) ವೃಕ್ಷದ ಪೂಜೆ ನಡೆಯುತ್ತದೆ. 9 ದಿನಗಳ ಕಾಲ ಮಹಿಳೆಯರಿಂದ ಮೌನಾನುಷ್ಟಾನ ಮೂಲಕ ವಿವಿಧ ಕಡೆ ಬನ್ನಿ ಮರಕ್ಕೆ ನಸುಕಿನ ವೇಳೆ ವಿಶೇಷ ಪೂಜೆ ಮಾಡುವಂತಹ ಪದ್ದತಿ ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿದೆ.
ನವರಾತ್ರಿ ಪ್ರಾರಂಭವಾದ ದಿನದಿಂದ ಒಟ್ಟು 9 ದಿನಗಳ ಮಹಿಳೆಯರು ಮೌನ ವ್ರತಾಚರಣೆ ಮೂಲಕ ಪೂಜಾ ಕೈಂಕರ್ಯ ನೆರವೇರಿಸುತ್ತಾರೆ. ವ್ರತ ಕೈಗೊಂಡ ಮಹಿಳೆಯರು ಶುಭ್ರತೆಯಿಂದ ಹೂವ್ವು ಹಣ್ಣು ಕಾಯಿ ತಂದು ಬನ್ನಿ ಇರುವ ಕಡೆ ಹೋಗಿ ಮರಕ್ಕೆ ಐದು ಸುತ್ತು ಪ್ರದಕ್ಷಿಣೆ ಹಾಕಿ, ಬನ್ನಿ ಮಹಾಕಾಳಿ ದೇವತೆಗೆ ನಮಸ್ಕರಿಸುತ್ತಾರೆ. ದೇವಿಗೆ ನೈವೇದ್ಯ ಸಮರ್ಪಣೆ ಮಾಡಿ ಇಷ್ಟಾರ್ಥ ಗಳ ನೆರವೇರಿಲಿ ಎಂದು ವಿಶೇಷ ಪೂಜೆಗಳನ್ನ ಕೈಗೊಳ್ಳತ್ತಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್