Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಂಬೇಡ್ಕರ್ ಆಶಯದಂತೆ ಹೆಣ್ಣು ಸರ್ವ ಸ್ವತಂತ್ರಳಾಗಬೇಕು : ಹೆಚ್.ಆನಂದ್‍ಕುಮಾರ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 08 : ಮಹಿಳೆ ಸಣ್ಣ ಸಣ್ಣ ವ್ಯಾಪಾರಗಳನ್ನು ಮಾಡುವ ಮೂಲಕ ಸ್ವಾವಲಂಭಿಯಾಗಿ ಬದುಕುವುದನ್ನು ಕಲಿಯಬೇಕೆಂದು ಸಮಾಜ ಸೇವಕಿ ಕೆ.ಸಿ.ವೀಣ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಗಾಟಿಸಿ ಮಾತನಾಡಿದರು.
ಹೆಣ್ಣು ಎಂದಾಕ್ಷಣ ಅಬಲೆ ಎನ್ನುವ ಹಣೆಪಟ್ಟಿ ಕಟ್ಟುವುದು ಸಹಜ. ಅದಕ್ಕಾಗಿ ಮಹಿಳೆ ಶಿಕ್ಷಣವಂತಳಾಗುವ ಮೂಲಕ ತನ್ನ ಮೇಲಾಗುವ ದೌರ್ಜನ್ಯ, ದಬ್ಬಾಳಿಕೆ, ಶೋಷಣೆಯನ್ನು ಮೆಟ್ಟಿ ನಿಂತಾಗ ಮಾತ್ರ ಸಮಾಜದಲ್ಲಿ ದಿಟ್ಟತನದಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯ. ಸಣ್ಣ ಸಣ್ಣ ಕೆಲಸಗಳನ್ನು ಮಾಡುತ್ತ ದೊಡ್ಡ ಉದ್ಯಮಿಗಳಾಗುವ ಹಂತಕ್ಕೆ ಬೆಳೆಯಬೇಕೆಂದು ಹೇಳಿದರು.

ಸುಧಾ ಶ್ರೀನಿವಾಸ್‍ಮೂರ್ತಿ ಮಾತನಾಡುತ್ತ ಹೆಣ್ಣು ಕೇವಲ ಅಡುಗೆ ಮನಗೆ ಮಾತ್ರೆ ಸೀಮಿತವಾಗಬಾರದು. ಸರ್ಕಾರದಿಂದ ಅನೇಕ ಸೌಲಭ್ಯಗಳಿವೆ. ಎಲ್ಲವನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲೀಕರಣವಾಗಬೇಕು. ಹಕ್ಕನ್ನು ಯಾರಿಂದಲೂ ಕೇಳಿ ಪಡೆಯುವುದಲ್ಲ. ಪ್ರತಿಭಟನೆ, ಹೋರಾಟ, ಚಳುವಳಿ ಮೂಲಕ ತನಗೆ ಸಿಗಬೇಕಾದ ನ್ಯಾಯವನ್ನು ಗಿಟ್ಟಿಸಿಕೊಳ್ಳಬೇಕೆಂದರು.

ಲೇಖಕ ಹೆಚ್.ಆನಂದ್‍ಕುಮಾರ್ ಮಾತನಾಡಿ ಪ್ರತಿ ಮನೆಯಲ್ಲಿಯೂ ಹೆಣ್ಣು ಒಂದಲ್ಲ ಒಂದು ರೀತಿಯಲ್ಲಿ ಶೋಷಣೆ ಅನುಭವಿಸಿಕೊಂಡು ಬರುತ್ತಿದ್ದಾಳೆ. ಶಿಕ್ಷಣದ ಮೂಲಕ ಜಾಗೃತಳಾಗಬೇಕು. ಐರೋಪ್ಯ ದೇಶದಲ್ಲಿ ಹೆಣ್ಣಿನ ಮೇಲೆ ಅತ್ಯಾಚಾರ, ಅನಾಚಾರಗಳು ನಡೆಯುವುದು ತುಂಬಾ ಕಡಿಮೆ. ಏಕೆಂದರೆ ಅಲ್ಲಿ ವೈಚಾರಿಕತೆಯಿದೆ. ಪುರಾಣ ಕಾಲದಿಂದಲೂ ಹೆಣ್ಣಿನ ಶೋಷಣೆ ನಡೆಯುತ್ತಿದೆ. ಅಂಬೇಡ್ಕರ್ ಆಶಯದಂತೆ ಹೆಣ್ಣು ಸರ್ವ ಸ್ವತಂತ್ರಳಾಗಬೇಕೆಂದು ಕರೆ ನೀಡಿದರು.

ಮುನಿರಾ ಎ.ಮಕಾಂದಾರ್, ಮೋಕ್ಷರುದ್ರಸ್ವಾಮಿ, ನಗರಸಭೆ ಸದಸ್ಯೆ ಪಿ.ಕೆ.ಮೀನಾಕ್ಷಿ, ಪ್ರಜಾ ಕಲ್ಯಾಣ ಸಮಿತಿಯ ರಾಜ್ಯಾಧ್ಯಕ್ಷ ಹರೀಶ್, ರತ್ನಮ್ಮ, ಶಶಿ, ನಾಗರಾಜ್ ಇವರುಗಳು ವೇದಿಕೆಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment