ಮಹಿಳೆಯರು ಕೀಳರಿಮೆಯನ್ನು ಬಿಟ್ಟು ಸ್ವಾವಲಂಬಿಯಾಗಿ : ಜಿ.ಎಸ್.ವೆಂಕಟೇಶ್

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಮಾರ್ಚ್. 20 : ಹೆಣ್ಣು ಮಕ್ಕಳು ತಮ್ಮಲ್ಲಿರುವ ಕೀಳರಿಮೆಯನ್ನು ಬಿಟ್ಟು ಶಕ್ತಿ ಸಾಮರ್ಥ್ಯವನ್ನು ಅರಿತಾಗ ಸ್ವಾವಲಂಭಿಯಾಗಿ ಬದುಕಬಹುದು ಎಂದು ಬಜ್ ಇಂಡಿಯಾ ಟ್ರಸ್ಟ್, ಬಬ್-ವಿಮೆನ್ ಕಾರ್ಯಕ್ರಮ ವ್ಯವಸ್ಥಾಪಕ ಬೆಂಗಳೂರಿನ ಜಿ.ಎಸ್.ವೆಂಕಟೇಶ್ ಕರೆ ನೀಡಿದರು.

 

ಬಜ್ ಇಂಡಿಯಾ ಟ್ರಸ್ಟ್, ಬಜ್-ವಿಮೆನ್ ಚಿತ್ರದುರ್ಗ ಸಹಯೋಗದೊಂದಿಗೆ ತ.ರಾ.ಸು.ರಂಗಮಂದಿರದಲ್ಲಿ ಗುರುವಾರ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಗೆಳತಿ ಸಮಾಗಮ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.

 

ಹಳ್ಳಿ ಹಳ್ಳಿಗೆ ಹೋಗಿ ಹೆಣ್ಣು ಮಕ್ಕಳನ್ನು ಒಂದು ಕಡೆ ಸೇರಿಸಿ ತರಬೇತಿ ಕೊಡುವುದು ಕಷ್ಟದ ಕೆಲಸ. ರಾಜ್ಯದ ಹದಿಮೂರು ಜಿಲ್ಲೆಗಳಲ್ಲಿ 6 ವರೆ ಲಕ್ಷ ಮಹಿಳೆಯರಿಗೆ ತರಬೇತಿ ನೀಡಲಾಗಿದೆ. 2012 ರಿಂದ ಇಲ್ಲಿಯವರೆಗೂ ನಮ್ಮ ಸಂಸ್ಥೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರು, ಸಿ.ಡಿ.ಪಿ.ಓ.ಗಳು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಸಹಕಾರ ನೀಡುತ್ತ ಬರುತ್ತಿದ್ದಾರೆ. ಅಡುಗೆ ಮನೆಗಷ್ಟೆ ಮಹಿಳೆಯರು ಸೀಮಿತ ಎನ್ನುವ ತಪ್ಪು ಕಲ್ಪನೆ ಬೇಡ. ನಮ್ಮ ಸಂಸ್ಥೆಯಿಂದ ಸ್ಪೂರ್ತಿ ತರಬೇತಿ ನೀಡಿರುವುದರಿಂದ ಸಣ್ಣ ಪುಟ್ಟ ವ್ಯಾಪಾರಗಳನ್ನು ಮಾಡುವುದರ ಜೊತೆ ಹಣ ಉಳಿತಾಯ ಮಾಡುವ ಜಾಗೃತಿ ಮೂಡಿದೆ ಎಂದು ಹೇಳಿದರು.

 

ನಮ್ಮದು ಹಣ ಕೊಡುವ ಸಂಸ್ಥೆಯಲ್ಲ. ಸ್ವಾವಲಂಭಿಗಳಾಗಿ ಬದುಕುವ ಜ್ಞಾನ ನೀಡುತ್ತೇವೆ. ಹದಿನೆಂಟು ಸಾವಿರ ಹಳ್ಳಿಗಳಿಂದ ಹದಿನೈದು ಸಾವಿರ ಹೆಣ್ಣು ಮಕ್ಕಳು ಸ್ವಯಂ ಸೇವಕಿಯರಾಗಿ ಕೆಲಸ ಮಾಡುತ್ತಿದ್ದಾರೆ. ಹಳ್ಳಿಗಳಲ್ಲಿ ಜೇನುಗೂಡು ಸಭೆಗಳನ್ನು ನಡೆಸುವಷ್ಟರ ಮಟ್ಟಿಗೆ ಮಹಿಳೆಯರು ಬುದ್ದಿವಂತರಾಗಿದ್ದಾರೆ. ಕಲುಷಿತ ಆಹಾರ ಸೇವನೆಯಿಂದ ಪ್ರತಿಯೊಬ್ಬರು ರಕ್ತದೊತ್ತಡ, ಸಕ್ಕರೆ ಕಾಯಿಲೆಯಿಂದ ಹೃದಯಾಘಾತಕ್ಕೆ ಬಲಿಯಾಗುವುದು ಸರ್ವೆ ಸಾಮಾನ್ಯವಾಗಿದೆ. ಎರಡು ವರ್ಷಗಳಿಂದ ಸಂಸ್ಥೆಗೆ ಶಕ್ತಿ ಫಂಡ್ ನೀಡಲು ಸಿದ್ದರಾಗಿದ್ದೀರಿ. ಈ ಹಣ ಬಳಸಿಕೊಂಡು ಹೊಸ ಜಿಲ್ಲೆಗಳಲ್ಲಿ ಮಹಿಳೆಯರಿಗೆ ತರಬೇತಿ ನೀಡುತ್ತಿದ್ದೇವೆ. ಕೆಲವು ಹೊರ ದೇಶಗಳಲ್ಲಿಯೂ ಬಜ್ ಇಂಡಿಯಾ ಸಂಸ್ಥೆ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿದೆ ಎಂದರು.

 

ಮಳೆ ನೀರು ಕೊಯ್ಲು ತಜ್ಞ ಎನ್.ಜೆ.ದೇವರಾಜರೆಡ್ಡಿ ಮಾತನಾಡುತ್ತ ಬಜ್ ಇಂಡಿಯಾ ಸಂಸ್ಥೆ ಚಿತ್ರದುರ್ಗ ಜಿಲ್ಲೆಯಲ್ಲಿ ಇಷ್ಟೊಂದು ಮಹಿಳಾ ಪಡೆಯನ್ನು ಕಟ್ಟಿರುವುದು ಸುಲಭದ ಕೆಲಸವಲ್ಲ. ಮಾ.22 ವಿಶ್ವ ಜಲ ದಿನಾಚರಣೆ ಆಚರಿಸುತ್ತಿರುವುದರಿಂದ ಮಹಿಳೆಯರು ನೀರಿನ ಮಹತ್ವ ಅರಿಯಬೇಕು. ನೀರು ಮತ್ತು ನಾರಿಯರಿಗೆ ಸಾವಿರಾರು ವರ್ಷಗಳ ಅವಿನಾಭಾವ ಸಂಬಂಧವಿದೆ ಎಂದು ಹೇಳಿದರು.

 

ಮಳೆ ನೀರು ವ್ಯರ್ಥವಾಗಿ ಹರಿದು ಹೋಗಲು ಬಿಡದೆ ಹೇಗೆ ಸಂಗ್ರಹಿಸಿ ಮಿತವಾಗಿ ಬಳಸಬೇಕು ಎನ್ನುವುದರ ಕುರಿತು ಮಹಿಳೆಯರಲ್ಲಿ ಅರಿವಿರಬೇಕು. ಇತ್ತೀಚಿನ ದಿನಗಳಲ್ಲಿ ಎಲ್ಲಾ ನೀರು ಕಲುಷಿತಗೊಂಡಿರುವುದರಿಂದ ಸದ್ಯದ ಪರಿಸ್ಥಿತಿಯಲ್ಲಿ ಪರಿಶುದ್ದವಾದ ನೀರು ಯಾವುದಾದರೂ ಇದ್ದರೆ ಅದು ಮಳೆ ನೀರು ಮಾತ್ರ. ಮಳೆ ನೀರು ಕೊಯ್ಲಿಗೆ ಹೆಚ್ಚಿನ ಒತ್ತು ಕೊಟ್ಟು ಅಡುಗೆಗೆ ಬಳಸಿದರೆ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮ ಬೀರುತ್ತದೆ. ಮನೆಯ ಛಾವಣಿ ಮೇಲೆ ಬೀಳುವ ಮಳೆ ನೀರನ್ನು ಸಂಗ್ರಹಿಸಿಟ್ಟುಕೊಂಡರೆ ಒಳ್ಳೆಯದು ಎಂದು ತಿಳಿಸಿದರು.

 

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಎ.ಸಿ.ಡಿ.ಪಿ.ಓ. ಮಂಜುಳ ಮಾತನಾಡಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಮುಖ್ಯ. ಸ್ತ್ರೀಶಕ್ತಿ ಗುಂಪುಗಳನ್ನು ರಚಿಸುವುದು ಸುಲಭವಲ್ಲ. ಸ್ವ-ಉದ್ಯೋಗದ ಮೂಲಕ ದುಡಿಮೆಯ ದಾರಿ ಕಂಡುಕೊಂಡು ಸ್ವಾವಲಂಭಿಗಳಾಗಿ ಬದುಕಲು ಬಜ್ ಇಂಡಿಯಾ ಸಂಸ್ಥೆ ಶ್ರಮಿಸುತ್ತಿದೆ. ಇದರ ಜೊತೆ ನಮ್ಮ ಇಲಾಖೆ ಕೂಡ ಕೈಜೋಡಿಸುತ್ತಿದೆ ಎಂದು ಹೇಳಿದರು.

ಎನ್.ಆರ್.ಎಂ.ಎಲ್.ನ ಯೋಗೇಶ್, ಸಾಹಿತಿ ಶರಿಫಾಬಿ, ಬಸವೇಶ್ವರ ವಿದ್ಯಾಸಂಸ್ಥೆಯ ಅಧ್ಯಕ್ಷೆ ಪ್ರಭಾವತಿ ಶಂಕರಪ್ಪ ವೇದಿಕೆಯಲ್ಲಿದ್ದರು.

 

suddionenews

Recent Posts

18 ಬಿಜೆಪಿ ನಾಯಕರ ಅಮಾನತು ; ಯಾವೆಲ್ಲಾ ಸೌಲಭ್ಯಗಳು ನಿಷಿದ್ಧ ಗೊತ್ತಾ..?

ಬೆಂಗಳೂರು; ಸ್ಪೀಕರ್ ಎಂಬುದನ್ನು ಮರೆತ ಬಿಜೆಪಿ ನಾಯಕರು ಅವರ ಪೀಠದ ಮೇಲೆಯೇ ಹತ್ತಿ, ಬಜೆಟ್ ಪ್ರತಿಯನ್ನು ಹರಿದು ಹಾಕಿ, ಅಗೌರವ…

17 minutes ago

ಟಿವಿ9 ಕನ್ನಡ ಲೈಫ್‌ಸ್ಟೈಲ್ ಆಟೋಮೊಬೈಲ್ ಮತ್ತು ಫರ್ನಿಚರ್ ಎಕ್ಸ್‌ಪೋ!

ಬೆಂಗಳೂರು ನಗರದ ಜನತೆಗೆ ಸಂತಸದ ಸುದ್ದಿ! ಟಿವಿ9 ಕನ್ನಡವು ಅದ್ಭುತವಾದ ಲೈಫ್‌ಸ್ಟೈಲ್ ಆಟೋಮೊಬೈಲ್ ಮತ್ತು ಫರ್ನಿಚರ್ ಎಕ್ಸ್‌ಪೋವನ್ನು ಆಯೋಜಿಸುತ್ತಿದೆ. ಈ…

3 hours ago

ಏರಿಕೆಯತ್ತ ಸಾಗಿದ್ದ ಚಿನ್ನ ಇಂದು ಇಳಿಕೆ ; ಎಷ್ಟಿದೆ ದರ

ಬೆಂಗಳೂರು: ಕಳೆದ ಎರಡ್ಮೂರು ದಿನದಿಂದ ಏರಿಕೆಯಾಗುತ್ತಿದ್ದ ಚಿನ್ನದ ದರ ಇಂದು ಇಳಿಕೆಯಾಗಿದೆ. 22 ಕ್ಯಾರಟ್ ನ ಒಂದು ಗ್ರಾಂಗೆ 40…

4 hours ago

ನಾನು ಮನನೊಂದಿದ್ದೇನೆ, ರಾಜೀನಾಮೆ ನೀಡ್ತೇನೆ ; ಶಾಸಕ ಬಿ.ಆರ್.ಪಾಟೀಲ್

ವಿಧಾನಸಭೆ ಅಧಿವೇಶನದ ಅಂತಿಮ ದಿನವಾದ ಇಂದು ಸದನದಲ್ಲಿ ಬಿಜೆಪಿ ಸದಸ್ಯರು ಹೈಡ್ರಾಮಾವನ್ನೇ ಮಾಡಿದ್ದಾರೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ ಶೇಕಡಾ 4ರಷ್ಟು…

4 hours ago

ಚಿತ್ರದುರ್ಗ : ನಿವೃತ್ತ ಡಿಹೆಚ್‍ಓ ಡಾ.ಹೆಚ್.ಹೆಚ್.ನಾಯ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 21 : ನಿವೃತ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಹೆಚ್.ನಾಯ್ಕ (88 ವರ್ಷ) ಗುರುವಾರ…

4 hours ago

ಏಪ್ರಿಲ್ 1 ರಿಂದ 13 ರವರೆಗೆ ಏಕನಾಥೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ

ಸುದ್ದಿಒನ್, ಚಿತ್ರದುರ್ಗ : ಏಪ್ರಿಲ್ 1 ರಿಂದ 13 ರವರೆಗೆ ನಡೆಯುವ ಏಕನಾಥೇಶ್ವರಿ ಅಮ್ಮನ ಜಾತ್ರಾ ಮಹೋತ್ಸವದ ಅಂಗವಾಗಿ ಕೋಟೆ…

5 hours ago