Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಮಹಿಳಾ ಕ್ರೀಡಾಕೂಟ : ಸಭೆಯಲ್ಲಿ ನಿರ್ಧಾರ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆ. 09 : ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆಯುವ ಶರಣಸಂಸ್ಕøತಿ ಉತ್ಸವದಲ್ಲಿ ಮಹಿಳಾ ಕ್ರೀಡಾಕೂಟದಲ್ಲಿ ಸ್ಪೂನ್ ಅಂಡ್ ಲೆಮನ್, ಹಗ್ಗ-ಜಗ್ಗಾಟ, ಮ್ಯೂಜಿಕಲ್ ಚೇರ್, ಮಡಿಕೆ ಹೊಡೆಯುವುದು, ಬಕೆಟ್ ಇನ್ ದ ಬಾಲ್, ಥ್ರೋಬಾಲ್, ಶರಣ-ಶರಣೆಯರ ವೇಷಭೂಷಣ ಸ್ಪರ್ಧೆಯನ್ನು ಏರ್ಪಡಿಸಲು ಶ್ರೀಮಠದಲ್ಲಿಂದು ನಡೆದ ಮಹಿಳಾ ಕ್ರೀಡಾಕೂಟ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

20-50 ವಯೋಮಾನದ ಮಹಿಳೆಯರು ಹಾಗೂ 50ರ ವಯೋಮಾನದ ನಂತರದ ಮಹಿಳೆಯರು ಪಾಲ್ಗೊಳ್ಳಬಹುದಾಗಿದ್ದು, ವಿಜೇತರಿಗೆ ಪ್ರಥಮ ಬಹುಮಾನ 3 ಸಾವಿರ ರೂ, ದ್ವಿತೀಯ ಬಹುಮಾನ 2 ಸಾವಿರ ರೂ. ಹಾಗು ತೃತೀಯ ಬಹುಮಾನ 1 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು. ಕ್ರೀಡಾಸಕ್ತರು ಆಧಾರ್ ಕಾರ್ಡ್‌ ನೊಂದಿಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಕ್ರೀಡಾಕೂಟದ ಮಹಾಪೋಷಕರಾದ ಡಾ. ಬಸವ ಕುಮಾರ ಸ್ವಾಮಿಗಳು, ಡಾ. ಬಸವಪ್ರಭು ಸ್ವಾಮಿಗಳು, ಮಹಿಳಾ ಕ್ರೀಡಾಕೂಟದ ಅಧ್ಯಕ್ಷೆ ಶ್ರೀಮತಿ ರುದ್ರಾಣಿ ಗಂಗಾದರ್, ಶ್ರೀಮತಿ ದೇವಿಕುಮಾರಿ, ಶ್ರೀಮತಿ ಮೋಕ್ಷ ರುದ್ರಸ್ವಾಮಿ, ಶ್ರೀಮತಿ ಆಶಾ ಹಾಲಪ್ಪನಾಯಕ, ಶ್ರೀಮತಿ ಪುಷ್ಪವಲ್ಲಿ, ಶ್ರೀಮತಿ ಸುಮಾ ರಾಜಶೇಖರ್ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment