Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಹಿಳಾ ರಿಸರ್ವೇಷನ್ : ಕಾಂಗ್ರೆಸ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗೆ ಸಜ್ಜಾದ ಬಿಜೆಪಿ..!

---Advertisement---

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ, ಕಾಂಗ್ರೆಸ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಾಡೋದಕ್ಕೆ ಬಿಜೆಪಿ ಸಿದ್ಧವಾಗಿದೆ. ಎಲ್ಲಾ ಕಡೆ ಹೋರಾಟಕ್ಕೆ ಕರೆ ನೀಡಿದೆ. ಈ ಸಂಬಂಧ ನಾಳೆ ಬೆಂಗಳೂರಿನಲ್ಲಿ ಹೋರಾಟ ನಡೆಯಲಿದೆ. ಕಾಂಗ್ರೆಸ್ ವಿರುದ್ಧ ಪೋಸ್ಟರ್ ಗಳನ್ನು ರಿಲೀಸ್ ಮಾಡಿದೆ.

ಇವರು ಮಹಿಳೆಯರ ವಿರೋಧಿಗಳು, ಮಹಿಳಾ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿದರು ಎಂಬ ಕಾರಣಕ್ಕೆ ಈಗಾಗಲೇ ರಾಮನಗರದಲ್ಲಿ ಹೋರಾಟ ನಡೆದಿದೆ. ಕಾಂಗ್ರೆಸ್ ನ ಈ ಮನಸ್ಥಿತಿ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಮಹಿಳಾ‌ಮೀಸಲಾತಿ ವಿಧೇಯಕ ನಿನ್ನೆ ಫೇಲ್ ಆಗಿದೆ. ದೇಶದ ಎಲ್ಲಾ ರಾಜಕೀಯ ಪಕ್ಷಗಳ, ಮಹಿಳಾ ಕಾರ್ಯಕರ್ತೆಯರ ಅಪೇಕ್ಷೆ ಇತ್ತು. ಮಹಿಳಾ ವಿಧೇಯಕ ಪಾಸ್ ಆಗ್ಬೇಕು ಎಂಬ ಬಿಲ್ ಪಾಸ್ ಆಗಬೇಕೆಂಬ ಆದೆ ಎಲ್ಲರಿಗೂ ಇತ್ತು. ನಮಗೊಂದು ಆಸೆ ಇತ್ತು. ಹೆಚ್ಚು ಸೀಟುಗಳು ಆಗಬೇಕು, ಪುರುಷರಿಗೂ ಅನ್ಯಾಯ ಆಗಬಾರದು, ಮಹಿಳೆಯರಿಗೂ ಸೀಟುಗಳು ಸಿಗಬೇಕು ಅಂತ.

ಈ ಬಿಲ್ ಗೆ ಮೆಜಾರಿಟಿ ಸಿಗಲಿಲ್ಲ. ಕಾಯ್ತಾ ಇದ್ದಂತ ಮಹಿಳೆಯರಿಗೆ ದುಃಖ ಆಗಿದೆ. ಮುಂದಿನ ಬಾರಿ ಮೋದಿ ಅವರ ಸರ್ಕಾರದಲ್ಲಿಯೇ ಈ ಮೀಸಲಾತಿ ಬರುತ್ತದೆ. ದೇಶದ ಜನ ರಾಹುಲ್ ಗಾಂಧಿಯವರನ್ನು ಕ್ಷಮಿಸೋಲ್ಲ. ದಕ್ಷಿಣ ಭಾರತ, ಉತ್ತರ ಭಾರತ ಅಂತ ಕಥೆ ಹೇಳಿಕೊಂಡು, ಇಂಡಿಯನ್ ಅಲಯನ್ಸ್ ಅನ್ಯಾಯ ಮಾಡ್ತಾ ಇದ್ದಾರೆ. ಇದನ್ನ ಮಹಿಳೆಯರು ಎಂದಿಗೂ ಕ್ಷಮಿಸುವುದಿಲ್ಲ. ಮುಂದಿನ ದಿನಗಳಲ್ಲಿ ಇದಕ್ಕೆ ನ್ಯಾಯ ಸಿಗುವಂತ ಕೆಲಸ ಆಗುತ್ತೆ ಎಂಬ ನಂಬಿಕೆ ಇದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now