Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಿಳಾ ಬರಹಗಳಿಗೆ ವಿಮರ್ಶೆಯ ನ್ಯಾಯ ಸಿಕ್ಕಿಲ್ಲ : ‘ಬಹುರೂಪಿ’ ಕೃತಿ ಬಿಡುಗಡೆಯಲ್ಲಿ ಜೋಗಿ ಅಭಿಪ್ರಾಯ

Facebook
Twitter
Telegram
WhatsApp

ಬೆಂಗಳೂರು, (ಜುಲೈ 17) : ಮಹಿಳಾ ಬರಹಗಾರರನ್ನು ಸಮಕಾಲೀನ ವಿಮರ್ಶೆ ಕಡೆಗಣಿಸಿದೆ ಎಂದು ಸಾಹಿತಿ, ಹಿರಿಯ ಪತ್ರಕರ್ತ ಜೋಗಿ ಅಭಿಪ್ರಾಯಪಟ್ಟರು.

‘ಬಹುರೂಪಿ’ ಪ್ರಕಾಶನ ಹಮ್ಮಿಕೊಂಡಿದ್ದ ಮಧುರಾಣಿ ಎಚ್ ಎಸ್ ಅವರ ಕವನ ಸಂಕಲನ ‘ನೀಲಿ ಚುಕ್ಕಿಯ ನೆರಳು’ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ನಾವೆಲ್ಲರೂ ಓದುವ ಕಾಲಕ್ಕೆ ಮಹಿಳಾ ಬರಹಗಾರರು ಸಾಕಷ್ಟು ಸಂಖ್ಯೆಯಲ್ಲಿ ಬರೆಯುತ್ತಿದ್ದರು. ಆದರೆ ಕನ್ನಡ ವಿಮರ್ಶೆ ಅವರನ್ನು ಚರ್ಚಿಸುತ್ತಲೇ ಇರಲಿಲ್ಲ. ಈಗಲೂ ಸಹಾ ಮಹಿಳಾ ಬರಹಗಾರರ ಸಂಖ್ಯೆ ವಿಫುಲವಾಗಿದೆ. ಆದರೂ ವಿಮರ್ಶೆ ಅವರ ಬಗ್ಗೆ ಸಾಕಷ್ಟು ಗಮನ ಹರಿಸಿಲ್ಲ ಎಂದರು. ಮಧುರಾಣಿ ಅವರ ಕವಿತೆಗಳಲ್ಲಿನ ಶಕ್ತಿ ಅಗಾಧವಾದದ್ದು ಎಂದರು.

ಕವಯತ್ರಿ, ಅನುವಾದಕಿ ಹೇಮಾ ಎಸ್  ಅವರು ಮಾತನಾಡಿ ಮಧುರಾಣಿ ಅವರ ಕವಿತೆಗಳ ಆತ್ಮವಿಶ್ವಾಸ ಬೆರಗು ಹುಟ್ಟಿಸುತ್ತದೆ. ಅವರ ಕವಿತೆಗಳುದ್ದಕ್ಕೂ ಅದು ಹರಡಿಕೊಂಡಿದೆ. ಅವರ ಕವಿತೆಗಳ ದನಿಯ ಪ್ರಭಾವ ಸಾಕಷ್ಟು ಕಾಲ ಕನ್ನಡ ಕವಿತೆಗಳ ಮೇಲಿರುತ್ತದೆ ಎಂದರು.

ಬರಹಗಾರ ಜಿ ಎನ್ ಮೋಹನ್ ಮಾತನಾಡಿ ಮಧುರಾಣಿ ಅವರ ಕವಿತೆಗಳು ದಿಟ್ಟ ದನಿಯನ್ನು ಹೊಂದಿವೆ. ಅವರ ಕವಿತೆಗಳಲ್ಲಿನ ಹೊಸತನ, ನುಡಿಗಟ್ಟುಗಳು ಬೆರಗು ಹುಟ್ಟಿಸುತ್ತವೆ. ಮಹಿಳಾ ಕಾವ್ಯ ಸಾಗುತ್ತಿರುವ ದಾರಿಗೆ ಈ ಕವನ ಸಂಕಲನ ಕನ್ನಡಿ ಹಿಡಿಯುತ್ತದೆ ಎಂದರು.

ಕೃತಿ: ನೀಲಿ ಚುಕ್ಕಿಯ ನೆರಳು
ಕವಿ: ಮಧುರಾಣಿ ಎಚ್ ಎಸ್
ಪ್ರಕಾಶನ: ಬಹುರೂಪಿ
ಬೆಲೆ: ರೂ 120

ಬಹುರೂಪಿ ಪ್ರಕಾಶನ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾಹಿತಿ, ಹಿರಿಯ ಪತ್ರಕರ್ತ ಜೋಗಿ ಅವರು ಮಧುರಾಣಿ ಎಚ್ ಎಸ್ ಅವರ ‘ನೀಲಿ ಚುಕ್ಕಿಯ ನೆರಳು’ ಕೃತಿ ಬಿಡುಗಡೆ ಮಾಡಿದರು. ಚಿತ್ರದಲ್ಲಿ ಬಹುರೂಪಿಯ ಜಿ ಎನ್ ಮೋಹನ್, ವಿಮರ್ಶಕಿ ಹೇಮಾ ಎಸ್ ಇದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಗಾಳಿ ಮಳೆಗೆ ಹಾರಿಹೋದ ಶಾಲೆಯ ಮೇಲ್ಛಾವಣಿ ಶೀಟುಗಳು, ಹ್ಯಾಂಗ್ಲರುಗಳು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,     ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 11 : ಶುಕ್ರವಾರ ರಾತ್ರಿ ಸುರಿದ ಮಳೆ ಗಾಳಿಗೆ ಮಲ್ಲಾಪುರದಲ್ಲಿರುವ ಬಾಪೂಜಿ ಹಿರಿಯ ಪ್ರಾಥಮಿಕ

ಬೆಂಗಳೂರಿನಲ್ಲಿ KAS ಆಫೀಸರ್ ಹೆಂಡತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ಬೆಂಗಳೂರು: ಹೈಕೋರ್ಟ್ ವಕೀಲೆಯಾಗಿದ್ದ ಚೈತ್ರಾ ಬಿ.ಗೌಡ ಎಂಬುವವರು ಸಾವನ್ನಪ್ಪಿದ್ದಾರೆ. ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದರಿಂದ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಚೈತ್ರಾಗೆ ಇನ್ನು 35 ವರ್ಷ ವಯಸ್ಸಾಗಿತ್ತಷ್ಟೆ. ಸಂಜಯ್ ನಗರ ಪೊಲೀಸ್ ಠಾಣಾ

ಟೀಂ ಇಂಡಿಯಾ ಕೋಚ್ ಹುದ್ದೆಗೆ ಮೂವರ ಹೆಸರು ರೇಸ್ ನಲ್ಲಿ : ದ್ರಾವಿಡ್ ಗೆ ಸಿಗಲ್ವಾ ಮತ್ತೆ ಹುದ್ದೆ..?

ಐಪಿಎಲ್ ಮುಗಿದ ಕೂಡಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಅದಕ್ಕೆ ಉಳಿದಿರುವುದು ಇನ್ನು ಕೇವಲ 20 ದಿನಗಳಷ್ಟೇ. ಆದರೆ ಈ ಬೆನ್ನಲ್ಲೇ ಟೀಂ ಇಂಡಿಯಾ ಕೋಚ್ ಬಗ್ಗೆ ಚರ್ಚೆ ಶುರುವಾಗಿದೆ. ಈಗ ಇರುವ ಟೀಂ ಇಂಡಿಯಾದ

error: Content is protected !!