ಮುಂಬರುವ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸುವತ್ತ ಶ್ರಮ ವಹಿಸಿ : ಸಚಿವ ಮಧು ಬಂಗಾರಪ್ಪ

suddionenews
1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 21  : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದಲ್ಲಿ ಉತ್ತಮ ಸರ್ಕಾರ ರಚನೆಯಾಗಿದೆ. ಎಲ್ಲರೂ ಒಗ್ಗಟ್ಟಾಗಿ ಪಕ್ಷದ ಕೆಲಸ ಮಾಡಬೇಕಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಕಾರ್ಯಕರ್ತರಿಗೆ ತಿಳಿಸಿದರು.

ಸಿರಿಗೆರೆ ತೆರಳುತ್ತಿದ್ದ ಅವರು ಗುರುವಾರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವಲ್ಲಿ ಕಾರ್ಯಕರ್ತರು ಈಗಿನಿಂದಲೆ ಶ್ರಮ ವಹಿಸಬೇಕು. ಇಷ್ಟು ದಿನ ಅಧಿಕಾರಕ್ಕೆ ಬರಲು ಹೋರಾಟ ಮಾಡಬೇಕಾಯಿತು. ಈಗ ಅಧಿಕಾರವನ್ನು ಗಟ್ಟಿಗೊಳಿಸಿಕೊಳ್ಳಬೇಕಿದೆ. ಅಧಿಕಾರ ಇರುವುದು ಸೇವೆ ಮಾಡುವುದಕ್ಕಾಗಿ ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಕೆಲಸ ಮಾಡೋಣ. ಪಕ್ಷ ನನಗೆ ಅಧಿಕಾರ ಕೊಟ್ಟಿದೆ ಮುಂದಿನ ದಿನಗಳಲ್ಲಿ ಮತ್ತೆ ಬರುತ್ತೇನೆ. ಆಗ ಎಲ್ಲರೊಟ್ಟಿಗೆ ಇದ್ದು, ಚರ್ಚಿಸುತ್ತೇನೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಮಾಜಿ ಸಚಿವ ಹೆಚ್.ಆಂಜನೇಯ, ಶಾಸಕ ಕೆ.ಸಿ.ವೀರೇಂದ್ರಪಪ್ಪಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ರೇಣುಕ ಶಿವು, ಉಪಾಧ್ಯಕ್ಷ ರವಿಕುಮಾರ್, ಕಾರ್ಯದರ್ಶಿ ಆರ್.ಗಂಗಾಧರ್, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ನಗರಸಭೆ ಸದಸ್ಯೆ ಮೀನಾಕ್ಷಿ, ಕೆ.ಪಿ.ಸಿ.ಸಿ. ಮಹಿಳಾ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಸೈಯದ್ ಖುದ್ದೂಸ್, ಸೇವಾದಳದ ಇಂದಿರಾ, ಸ್ವಾಮಿ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

Share This Article
Leave a Comment

Leave a Reply

Your email address will not be published. Required fields are marked *