ವರದಿ ಮತ್ತು ಫೋಟೋ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಬಡವರಿಗೆ ಮುಟ್ಟಿಸುವಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ಶಾಶಕ ಜಿ.ಹೆಚ್.ತಿಪ್ಪಾರೆಡ್ಡಿ ಸೂಚಿಸಿದರು.
ತಾಲ್ಲೂಕು ಆಡಳಿತದ ವತಿಯಿಂದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ವೃದ್ದರು, ವಿಧವೆಯರು, ಅಂಗವಿಕಲರಿಗೆ ಮಂಜೂರಾಗಿರುವ ಪಿಂಚಣಿ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದರು.
ಬಡವರಿಗೆ ನಾನಾ ರೀತಿಯ ಸಮಸ್ಯೆಗಳಿರುತ್ತವೆ ಎನ್ನುವ ಕಾರಣಕ್ಕಾಗಿ ಕಳೆದ ನಾಲ್ಕು ತಿಂಗಳ ಹಿಂದೆ ತಹಶೀಲ್ದಾರ್ ಮತ್ತು ಸಿಬ್ಬಂದಿಗಳಿಗೆ ಸೂಚಿಸಿದ್ದೆ ಅದರಂತೆ ಚಿತ್ರದುರ್ಗ ಕಸಬಾ ಸುತ್ತಮುತ್ತ, ಹಿರೇಗುಂಟನೂರು ಹೋಬಳಿ, ನಗರದ ಐದಾರು ವಾರ್ಡ್ಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಶ್ರಮ ವಹಿಸಿ ಅರ್ಹರನ್ನು ಹುಡುಕಿ ಪಿಂಚಣಿ ಮಂಜೂರು ಮಾಡಿರುವುದು ನಿಜವಾಗಿಯೂ ಸಂತಸದ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಯಿಂದ ಯಾರು ವಂಚಿತರಾಗಬಾರದು. ಅಂಗವಿಕಲರು ಮನೆಯಲ್ಲಿಯೇ ಕುಳಿತು ದುಡಿಮೆ ಮಾಡಬಹುದು ಸಾಕಷ್ಟು ಅವಕಾಶಗಳಿವೆ. ಸರ್ಕಾರದ ಪಿಂಚಣಿ ಮುಪ್ಪಿನ ಕಾಲದಲ್ಲಿ ನೆರವಾಗಲಿದೆ. ನನ್ನ ಕ್ಷೇತ್ರದಲ್ಲಿ ಎಲ್ಲರಿಗೂ ಅಧಿಕಾರಿಗಳು ಪಿಂಚಣಿ ಮುಟ್ಟಿಸಿದ್ದಾರೆ. ಉಳಿದಂತೆ ಯಾರಾದರೂ ಇದ್ದಲ್ಲಿ ಮುಂದಿನ ದಿನಗಳಲ್ಲಿ ಅವರಿಗೂ ಸಿಗಲಿದೆ ನಿರಾಸೆಯಾಗುವುದು ಬೇಡ ಎಂದು ಹೇಳಿದರು.
ತಹಶೀಲ್ದಾರ್ ಜಿ.ಹೆಚ್.ಸತ್ಯನಾರಾಯಣ, ಗ್ರೇಡ್-ಟು ತಹಶೀಲ್ದಾರ್ ಬೀಬಿ ಫಾತಿಮ, ಕಂದಾಯ ನಿರೀಕ್ಷಕ ಶರಣಪ್ಪ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಈ ಸಂದರ್ಭದಲ್ಲಿದ್ದರು.