Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನ್ಯಾಯಾಂಗದ ಕಣ್ಣಿಗೆ ಮಣ್ಣೆರೆಚುವ ಕೆಲಸ : ಡಿಕೆಶಿ ಕೇಸ್ ವಾಪಾಸ್ ಬಗ್ಗೆ ಆರ್ ಅಶೋಕ್ ಗರಂ

---Advertisement---

ಡಿಸಿಎಂ ಡಿಕೆ ಶಿವಕುಮಾರ್ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ಕೇಸ್ ವಾಪಾಸ್ ಪಡೆದಿದ್ದರ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದಾರೆ. ರಾಜ್ಯ ಸರ್ಕಾರ ತೆಗೆದುಕೊಂಡ ಈ ನಿರ್ಧಾರ ಸಂವಿಧಾನ ಬಾಹಿರವಾಗಿದೆ ಎಂದೇ ಕಿಡಿಕಾರಿದ್ದಾರೆ.

ಇದು ರಾಜಕೀಯ ದುರುದ್ದೇಶಗಳಿಂದ ಕೂಡಿದೆ. ಡಿಕೆ ಶಿವಕುಮಾರ್ ಅವರು ಆದಾಯ ಮೀರಿದ ಆಸ್ತಿ ಗಳಿಸಿದ್ದಾರೆ ಎಂದು ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರವೂ 2019ರಲ್ಲಿ ಸಿಬಿಐ ತನಿಖೆಗೆ ಒಪ್ಪಿಸಿತ್ತು. ಒಮ್ಮೆ ತನಿಖೆಗೆ ನೀಡಿದ್ದ ಪ್ರಕರಣವನ್ನು ಹಿಂಪಡೆಯಲು ಬರುವುದಿಲ್ಲ. ಕಾಂಗ್ರೆಸ್ ಸರ್ಕಾರ ಕೂಡ ಇದೇ ರೀತಿ ಯಡಿಯೂರಪ್ಪ ಹಾಗೂ ಜನಾರ್ದನ ರೆಡ್ಡಿ ಪ್ರಕರಣಗಳನ್ನು ತನಿಖೆಗೆ ನೀಡಿತ್ತು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ಪ್ರಕರಣಗಳನ್ನು ಹಿಂಪಡೆಯುವ ಕೆಲಸ ಮಾಡಲಿಲ್ಲ. ಈ ಸರ್ಕಾರ ತಮಗೆ ತೋಚುವ ರೀತಿ ಮಾಡುವ ಮೂಲಕ ನ್ಯಾಯಾಂಗದ ಕಣ್ಣಿಗೆ ಮಣ್ಣು ಎರಚುವ ಕೆಲಸ ಮಾಡುತ್ತಿದೆ ಎಂದಿದ್ದಾರೆ.

ಸರ್ಕಾರದ ಕ್ರಮವನ್ನು ವಿರೋಧಿಸಿ ನಿಲುವಳಿ ಸೂಚನೆ ಮಂಡನೆಗೆ ಪ್ರಯತ್ನ ನಡೆಸಿದರು. ಬಿಜೆಪಿಯ ಎಲ್ಲಾ ಶಾಸಕರು ದನಿಗೂಡಿಸಿ ಈ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದರು. ಆದರೆ ಇದಕ್ಕೆ ಒಪ್ಪಂದ ಸ್ಪೀಕರ್ ಖಾದರ್ ಅವರು ಪ್ರಕರಣದ ವಿಚಾರಣೆ ನ್ಯಾಯಾಲಯದ ಮುಂದೆ ಇದೆ ಎಂದು ಅವಕಾಶ ನಿರಾಕರಿಸಿದರು. ಸ್ಪೀಕರ್ ಈ ಸಂಬಂಧ ಚರ್ಚೆಗೆ ಅವಕಾಶ ನೀಡಲಿಲ್ಲ. ಬಿಜೆಪಿ ನಾಯಕರು ಅವಕಾಶ ನೀಡುವಂತೆ ಸ್ಪೀಕರ್ ಬಳಿ ಕೇಳಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment