ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರೆಸಿದೆ. ಈ ಯುದ್ಧದಲ್ಲಿ ಸಾಕಷ್ಟು ಜನ ನಾಗರಿಕರು ಸಾವನ್ನಪ್ಪಿದ್ದಾರೆ. ಮಕ್ಕಳು ಅನಾಥರಾಗಿದ್ದಾರೆ. ಆದರೂ ಯುದ್ಧ ನಿಲ್ಲುತ್ತಿಲ್ಲ. ಈ ಮಧ್ಯೆ ರಷ್ಯಾ ಸೇನೆ ದಾಳಿಯಲ್ಲಿ ಇಲ್ಲಿವರೆಗೆ 202 ಶಾಲೆಗಳು, 34 ಆಸ್ಪತ್ರೆಗಳು ಧ್ವಂಸಗೊಂಡಿವೆ ಎಂದು ಉಕ್ರೇನ್ ಮಾಹಿತಿ ಹಂಚಿಕೊಂಡಿದೆ.
ವಿಶ್ವ ಬ್ಯಾಂಕ್ನಿಂದ ಉಕ್ರೇನ್ ಗೆ 700 ಮಿಲಿಯನ್ ಡಾಲರ್ ನೆರವು ನೀಡಲಾಗಿದೆ. ಅಗತ್ಯ ಸೇವೆಗಾಗಿ ಈ ಸಹಾಯ ಮಾಡಿದೆ ವಿಶ್ವ ಬ್ಯಾಂಕ್. ಈ ಮಧ್ಯೆ ಅಧ್ಯಕ್ಷ ಝೆಲನ್ ಸ್ಕಿ ನಾಪತ್ತೆಯಾಗಿದ್ದಾರೆಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಝೆಲೆನ್ ಸ್ಕಿ ಅವರೇ ಪ್ರತಿಕ್ರಿಯೆ ನೀಡಿದ್ದು, ನಾನು ಯಾರಿಗೂ ಹೆದರಲ್ಲ. ಎಲ್ಲಿಯೂ ಹೋಗಿಲ್ಲ. ನಾನು ಕೀವ್ ನಲ್ಲಿಯೇ ಇದ್ದೇನೆ ಎಂದಿದ್ದಾರೆ.
ಇನ್ನು ರಷ್ಯಾ ವಿರುದ್ಧ ಇತರ ರಾಷ್ಟ್ರಗಳ ನಿರ್ಬಂಧ ಮುಂದುವರೆದಿದೆ. ರಷ್ಯಾಗೆ ತೈಲ ಶೋಧನೆ ಉಪಕರಣಗಳ ರಫ್ತಿಗೆ ನಿರ್ಬಂಧ ಹೇರಲಾಗಿದೆ. ಶೋಧನಾ ಉಪಕರಣ ರಫ್ತು ಮಾಡಲ್ಲ ಎಂದು ಜಪಾನ್ ಹೇಳಿದೆ. ಈ ನಡುವೆ ಉಕ್ರೇನ್ ಮೇಲೆ ರಷ್ಯಾ ಯುದ್ಧದ ತೀವ್ರತೆ ಹೆಚ್ಚಿಸಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…