Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೀರ್ತಿ ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯ ಪಾನ ಸಪ್ತಾಹ | ತಾಯಿಯ ಹಾಲು ಮಕ್ಕಳಿಗೆ ಅಮೃತಕ್ಕೆ ಸಮಾನ : ಡಾ. ಮಲ್ಲಿಕಾರ್ಜುನ ಕೀರ್ತಿ

---Advertisement---

ಸುದ್ದಿಒನ್, ಚಿತ್ರದುರ್ಗ. ಆ.06:  ತಾಯಿ ಹಾಲು ಅಮೃತಕ್ಕೆ ಸಮಾನ ಮಗು ಜನಿಸಿದ ತಕ್ಷಣ ತಾಯಿಯ ಹಾಲನ್ನು ನೀಡಬೇಕು, ಹೊರಗಿನ ಹಾಲನ್ನು ಹಾಕದೆ ತಾಯಿ ಹಾಲನ್ನೇ ಅತಿ ಹೆಚ್ಚು ಹಾಕಬೇಕು ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದೆ ಎಂದು ಕೀರ್ತಿ ಆಸ್ಪತ್ರೆಯ ಮುಖ್ಯಸ್ಥರು ಡಾ. ಬಿ. ಮಲ್ಲಿಕಾರ್ಜುನ ಕೀರ್ತಿ ಅವರು ಹೇಳಿದರು.

ನಗರದ ಪ್ರತಿಷ್ಠಿತ ಕೀರ್ತಿ ಆಸ್ಪತ್ರೆಯಲ್ಲಿ ಭಾನುವಾರ (ಆಗಸ್ಟ್.04)  ಹಮ್ಮಿಕೊಂಡಿದ್ದ ವಿಶ್ವ ಸ್ತನ್ಯ ಪಾನ ಸಪ್ತಾಹವನ್ನು ಡಾ.ಬಿ.ಮಲ್ಲಿಕಾರ್ಜುನ ಕೀರ್ತಿ ಅವರ ಮಾರ್ಗದರ್ಶನದಲ್ಲಿ ಆಚರಿಸಲಾಯಿತು.

 

ವಿಶ್ವ ಸ್ತನ್ಯಪಾನ ಸಪ್ತಾಹ 2024ರ ಘೋಷ ವಾಕ್ಯ ‘ಕೊರತೆಗಳನ್ನು ಕೊನೆಗೊಳಿಸಿ ಸರ್ವರಿಗೂ ಸ್ತನ್ಯಪಾನದ ಬೆಂಬಲ ನೀಡಿ’ ಎನ್ನುವ ಘೋಷವಾಕ್ಯದಂತೆ ಗರ್ಭಿಣಿ ಮತ್ತು ಬಾಣಂತಿಯರು ಹಾಗೂ ಮಕ್ಕಳ ತಾಯಂದಿರಿಗೆ ಎದೆಯ ಹಾಲಿನ ಮಹತ್ವವನ್ನು ಸಾರಿದರು.

ಈ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ನರ್ಸ್‍ಗಳಿಗೆ
ರಸಪ್ರಶ್ನೆ, ರಂಗೋಲಿ ಬಿಡಿಸುವ, ಪೋಸ್ಟರ್ ಮತ್ತು ಗ್ರೀಟಿಂಗ್ ಕಾರ್ಡ್ ಮಾಡುವ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ವೈದ್ಯಕೀಯ ಸಿಬ್ಬಂದಿ, ಆಡಳಿತ ಮಂಡಳಿ ಮತ್ತು ಭಾಗವಹಿಸಿದ್ದ ಸ್ಪರ್ಧಿಗಳಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಈ ಸ್ಪರ್ಧಾತ್ಮಕ ಕಾರ್ಯಕ್ರಮಕ್ಕೆ ಜಡ್ಜ್ ಗಳಾಗಿ ಡಾ. ಪೃಥ್ವೀಶ್, ಡಾ. ರಾಘವೇಂದ್ರ ಮತ್ತು ಡಾ. ಸ್ಮಿತಾ ಕೀರ್ತಿ, ಅವರು ಭಾಗವಹಿಸಿದ್ದರು ಎಂದು ಆಸ್ಪತ್ರೆಯ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment