Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜ್ಞಾನಭಾರತಿ ವಿದ್ಯಾಮಂದಿರದಲ್ಲಿ ವಿಶ್ವಪರಿಸರ ದಿನಾಚರಣೆ : ಮನುಷ್ಯನ ದುರಾಸೆಯಿಂದ ಜೀವನದ ಮೇಲೆ ಪ್ರತಿಕೂಲ ಪರಿಣಾಮ : ರವೀಂದ್ರನಾಥ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂ.05 :  ಮನುಷ್ಯ ಪರಿಸರದ ಒಂದು ಭಾಗ ಮನುಷ್ಯನ ದುರಾಸೆಯಿಂದ ಇಂದು ನಾವು ತಿನ್ನುವಂತಹ ಆಹಾರವು ವಿಷಪೂರಿತವಾಗಿದೆ. ಹೆಚ್ಚು ಹೆಚ್ಚು ಬೆಳೆಯನ್ನು ಬೆಳೆಯಲು ರಾಸಾಯನಿಕಯುಕ್ತ ರಸಗೊಬ್ಬರಗಳನ್ನು ಬಳಸಿ ಬೆಳೆಗಳನ್ನು ಬೆಳೆಯುತ್ತಿದ್ದು, ಇದರಿಂದ ಮಣ್ಣಿನ ನೈಸರ್ಗಿಕ ಫಲವತ್ತತೆ ಕಡಿಮೆಯಾಗಿ ಮಣ್ಣಿನಲ್ಲಿ ರಾಸಾಯನಿಕ ಅಂಶಗಳು ಹೆಚ್ಚುತ್ತಿರುವುದರಿಂದ ಮಾನವ ಜೀವನದ ಮೇಲೆ ಪ್ರತಿಕೂಲ ಪರಿಣಾಮವನ್ನು ಉಂಟು ಮಾಡುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕರಾದ ರವೀಂದ್ರನಾಥ ಹೇಳಿದರು.

ನಗರದ ಜ್ಞಾನಭಾರತಿ ವಿದ್ಯಾಮಂದಿರದಲ್ಲಿ ಆಯೋಜಿಸಿದ್ದ ವಿಶ್ವಪರಿಸರ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ‌ ಮಾತನಾಡಿದರು.

ಆದ್ದರಿಂದ ಮಣ್ಣಿನ ನೈಸರ್ಗಿಕ ಫಲವತ್ತತೆಯನ್ನು ಕಾಪಾಡುವ ದೃಷ್ಟಿಯಿಂದ ನಮ್ಮ ರೈತರು ಹೆಚ್ಚು ಹೆಚ್ಚು ಸಾವಯವ ಗೊಬ್ಬರಗಳನ್ನು ಬಳಸಿ ಬೆಳೆಗಳನ್ನು ಬೆಳೆಯಬೇಕು. ಪರಿಸರ ನಾಶದಿಂದ ಜಾಗತಿಕ ತಾಪಮಾನವು ಹೆಚ್ಚಳವಾಗಿದ್ದು, ಇದರಿಂದ ಅನೇಕ ಸಾವು ನೋವುಗಳು ಸಂಭವಿಸುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಮನೆಗಳ ಮುಂದೆ ಒಂದು ಗಿಡವನ್ನು ನೆಡುವುದರ ಮುಖಾಂತರ ಜಾಗತಿಕ ತಾಪಮಾನ ಕಡಿಮೆ ಮಾಡಲು ತಾವೆಲ್ಲರೂ ಕೈ ಜೋಡಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಗಿಡಮರಗಳನ್ನು ಬೆಳೆಸುವುದರಿಂದ ಪರಿಸರದಲ್ಲಿ ತಂಪು ವಾತಾವರಣ ನಿರ್ಮಾಣವಾಗುತ್ತದೆ. ವಾತಾವರಣದಲ್ಲಿನ ಕಾರ್ಬನ್ ಡೈಯಾಕ್ಸೈಡ್ ಅನ್ನು ಹೀರಿಕೊಂಡು ಗಿಡಗಳು ಉತ್ತಮವಾದ ಆಮ್ಲಜನಕವನ್ನು ಹೊರಹಾಕುತ್ತವೆ. ಇದರಿಂದ ಮನುಷ್ಯನಿಗೆ ಅನೇಕ ಶ್ವಾಸಕೋಶ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಶಾಲೆಯ ಕಾರ್ಯದರ್ಶಿಗಳಾದ ಡಾ.ಕೆ.ರಾಜೀವಲೋಚನ್ ಅವರು ಮಾತನಾಡುತ್ತಾ ಇಂದು ಮಲೆನಾಡು ತಪ್ಪಲಿನಲ್ಲಿ ಇರುವಂತಹ ಅನೇಕ ದಟ್ಟ ಅರಣ್ಯಗಳು ಇಂದು ಕಣ್ಮರೆಯಾಗುತ್ತಿರುವುದು ವಿಷಾದನೀಯ  ಸಂಗತಿ. ಮನುಷ್ಯ ತನ್ನ ಆಸೆ ಆಕಾಂಕ್ಷೆಗಳನ್ನು ಈಡೇರಿಸಿಕೊಳ್ಳಲು ಕಾಡಿನಲ್ಲಿರುವ ಅನೇಕ ಬೆಲೆಬಾಳುವಂತಹ ಮರಗಳನ್ನು ಕಡಿದು ನಾಶ ಮಾಡುತ್ತಿರುವುದರಿಂದ ಕಾಡನ್ನೇ ನಂಬಿಕೊಂಡು ಜೀವನ ಸಾಗಿಸುವ ಪ್ರಾಣಿ ಸಂಕುಲ, ಪಕ್ಷಿ ಸಂಕುಲ ಇಂದು ಅಪಾಯಕಾರಿ ಘಟ್ಟ ತಲುಪಿವೆ. ಆದ್ದರಿಂದ ‘ಕಾಡನ್ನು ಬೆಳೆಸಿ, ನಾಡನ್ನು ಉಳಿಸಿ’, ‘ಮನೆಗೊಂದು ಮರ ಊರಿಗೊಂದು ವನ’ ಎಂಬಂತೆ ನಾವೆಲ್ಲರೂ ಪರಿಸರ ಸಂರಕ್ಷಣೆಗೆ ಮುಂದಾಗಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತಾಧಿಕಾರಿಗಳಾದ ಶ್ರೀ ಹನುಮೇಶ್ ಪದಕಿ, ಶಿಕ್ಷಕವೃಂದದವರು ಹಾಗೂ ಪೋಷಕ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪರಿಸರಕ್ಕೆ ಸಂಬಂಧಪಟ್ಟ ಪರಿಸರ ಗೀತೆಯ ನೃತ್ಯ ಕಾರ್ಯಕ್ರಮ ಮನೋಮೋಹಕವಾಗಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment