Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

---Advertisement---

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಶಿಬಿರವನ್ನು ಉಪ ವಿಭಾಗಾಧಿಕಾರಿಗಳಾದ ಕಾರ್ತಿಕ್ ರವರು ಉದ್ಘಾಟಿಸಿ ರೆಡ್‍ಕ್ರಾಸ್ ಸಂಸ್ಥೆ ಎನ್ನುವುದು ಸೇವಾ ಮನೋಭಾವ ಸಂಸ್ಥೆಯಾಗಿದೆ. ಇಲ್ಲಿ ಯಾವುದೇ ರೀತಿಯ ಸ್ವಾರ್ಥ ಇಲ್ಲದೆ ಸೇವೆಯನ್ನೇ ಗುರಿಯಾಗಿಸಿಕೊಂಡು ಕಳೆದ 123 ವರ್ಷಗಳಿಂದ ನಿರಂತರವಾಗಿ ಜನರ ಸೇವೆಯನ್ನು ಮಾಡುತ್ತಾ ಬಂದಿದೆ. ರೆಡ್‍ಕ್ರಾಸ್‍ನ ಸದಸ್ಯರು ಸಹಾ ಸಹಾ ಯಾವುದೇ ರೀತಿಯ ಸ್ವಾರ್ಥ ಇಲ್ಲದೆ ಸೇವೆಯನ್ನು ಮಾಡುತ್ತಿದ್ದಾರೆ. ಇವರಿಂದ ಅನೇಕ ಜನರಿಗೆ ಸಹಾಯವಾಗಿದೆ ಇವರ ಸೇವೆ ಹೀಗೇಯೇ ಮುಂದುವರೆಯಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಚಿತ್ರದುರ್ಗ ಶಾಖೆಯ ಸಭಾಪತಿಗಳಾದ ಶ್ರೀಮತಿ ಗಾಯತ್ರಿ ಶಿವರಾಂ, ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿನ ಅಧ್ಯಕ್ಷರಾದ ಡಾ.ಸಿದ್ದಲಿಂಗಯ್ಯ ಗುಡೀಮಠ್, ಕಾರ್ಯದರ್ಶಿ ಸಂತೋಷ ಗುಡೀಮಠ್, ಪ್ರಾಂಶುಪಾಲರಾದ ಚಂದ್ರಶೇಖರ್, ಉಪ ಸಭಾಪತಿ ಗಳಾದ ಅರುಣ್ ಕುಮಾರ್, ಕಾರ್ಯದರ್ಶಿ ಮಜಹರ್ ಉಲ್ಲಾ, ನಿರ್ದೇಶಕಾರದ ಕಾರ್ತಿಕ ಶಿವರಾಂ ಗುರುಮೂರ್ತಿ, ಡಾ.ಮಧುಸೂಧನ್ ರೆಡ್ಡಿ ವೀಣಾ ಜಯರಾಂ, ಸುರೇಶ, ಮಹಮ್ಮದ್ ಆಲಿ ಉಪಸ್ಥಿತರಿದ್ದರು ಇದೇ ಸಂದರ್ಭದಲ್ಲಿ 25ಯೂನಿಟ್‍ಗಿಂತ ಹೆಚ್ಚು ರಕ್ತವನ್ನು ಸಂಗ್ರಹ ಮಾಡಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...