Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖಾಸಗಿ ಶಾಲಾ-ಕಾಲೇಜು ಮತ್ತು ಬಸ್ಸುಗಳ ಮೇಲೆ ಕನ್ನಡ ನಾಮ ಫಲಕ ಬರೆಯಿಸಿ : ಕರುನಾಡ ವಿಜಯಸೇನೆ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.09 :  ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ಖಾಸಗಿ ಶಾಲಾ-ಕಾಲೇಜುಗಳಲ್ಲಿ ಮತ್ತು ಬಸ್‍ಗಳ ಮೇಲಿರುವ ಆಂಗ್ಲ ಭಾಷೆಯ ನಾಮ ಫಲಕಗಳನ್ನು ಕೂಡಲೆ ತೆಗೆದು ಕನ್ನಡದಲ್ಲಿ ನಾಮ ಫಲಕಗಳನ್ನು ಬರೆಸುವಂತೆ ಕರುನಾಡ ವಿಜಯಸೇನೆ ಕಾರ್ಯಕರ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಕರ್ನಾಟಕದಲ್ಲಿ ಕನ್ನಡವನ್ನು ಶೇ.60 ರಷ್ಟು ಬಳಸುವಂತೆ ಸರ್ಕಾರದ ಆದೇಶವಿದ್ದರೂ ಜಿಲ್ಲೆಯ ಎಲ್ಲಾ ಖಾಸಗಿ ಶಾಲಾ-ಕಾಲೇಜಗಳಲ್ಲಿ ಹಾಗೂ ಬಸ್‍ಗಳ ಮೇಲೆ ಇಂಗ್ಲಿಷ್ ನಾಮ ಫಲಕಗಳು ರಾರಾಜಿಸುತ್ತಿರುವುದು ಕನ್ನಡ ಭಾಷೆಗೆ ಅಪಮಾನವಾದಂತಾಗಿದೆ. ನಗರದ ಪ್ರತಿಷ್ಠಿತ ಶಾಲಾ-ಕಾಲೇಜುಗಳಲ್ಲಿ ಕನ್ನಡವನ್ನು ಕಡೆಗಣಿಸಲಾಗುತ್ತಿದೆ. ಹತ್ತು ದಿನಗಳೊಳಗಾಗಿ ಕನ್ನಡ ನಾಮ ಫಲಕಗಳು ಇರಬೇಕು. ಇಲ್ಲದಿದ್ದಲ್ಲಿ ಅಂತಹ ನಾಮ ಫಲಕಗಳನ್ನು ಕಿತ್ತೆಸೆಯಲಾಗುವುದೆಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಎಚ್ಚರಿಸಿದರು.

ಕರುನಾಡ ವಿಜಯಸೇನೆ ಜಿಲ್ಲಾ ಸಂಚಾಲಕ ರಾಜಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ನಗರಾಧ್ಯಕ್ಷ ಅವಿನಾಶ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಖಿಲೇಶ್, ಮಹಮದ್ ರಫಿ, ಹರೀಶ್ ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...