ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 02 : ಕಥೆ, ಕಾದಂಬರಿ, ಕವನಗಳು ಸಮಾಜ ಸುಧಾರಣೆಯಾಗುವಂತ ಸಂದೇಶಗಳನ್ನು ನೀಡಬೇಕೆಂದು ಚಿನ್ಮುಲಾದ್ರಿ ಸಾಹಿತ್ಯ ವೇದಿಕೆ ಗೌರವಾಧ್ಯಕ್ಷರು ಹಾಗೂ ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್ವುಲ್ಲಾ ತಿಳಿಸಿದರು.

ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ, ಗಾನಯೋಗಿ ಸಂಗೀತ ಬಳಗದಿಂದ ಪತ್ರಕರ್ತರ ಭವನದಲ್ಲಿ ಗಿರೀಶ್ ಎಸ್.ಸಿ.(ರಾಗಿ) ರವರ ರಾಗಿ ತೆನೆ ಪುಸ್ತಕ ಕವನ ಸಂಕಲನ ಬಿಡುಗಡೆಗೊಳಿಸಿ ಮಾತನಾಡಿದರು.
ಭಾನು ಮುಷ್ತಾಕ್ರವರ ಬರವಣಿಗೆ ಕಡೆ ಇಡಿ ವಿಶ್ವವೇ ತಿರುಗಿ ನೋಡುವಂತಾಗಿರುವುದರಿಂದ ಬುಕರ್ ಪ್ರಶಸ್ತಿ ಸಿಕ್ಕಿತು. ದೇಶದ ಸ್ವಾತಂತ್ರಕ್ಕಾಗಿ ಅನೇಕ ಪತ್ರಿಕೆಗಳು ಬರವಣಿಗೆ ಮೂಲಕ ಬ್ರಿಟೀಷರ ವಿರುದ್ದ ಹೋರಾಡಿರುವ ಉದಾಹರಣೆಗಳಿವೆ. ಬರಹಗಾರರ ಮೇಲೆ ಸಮಾಜ ಸುಧಾರಣೆಯ ಜವಾಬ್ದಾರಿಯಿದೆ. ಪೋಕ್ಸೋ, ರೇಪ್ ಕೇಸ್ ಇವುಗಳು ಕಡಿಮೆಯಾಗಬೇಕಾದರೆ ಸಮಾಜ ಸುಧಾರಕರು, ಲೇಖಕರ ಪಾತ್ರ ಮುಖ್ಯ. ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಎಲ್ಲರೂ ಮೊಬೈಲ್, ವಾಟ್ಸ್ಪ್, ಫೇಸ್ಬುಕ್ಗಳ ಹಿಂದೆ ಬಿದ್ದಿರುವುದರಿಂದ ಕಥೆ, ಕವನ, ಕಾದಂಬರಿಗಳನ್ನು ಓದುವವರ ಸಂಖ್ಯೆ ಕಡಿಮೆಯಾಗಿದೆ ಎಂದು ವಿಷಾಧಿಸಿದರು.
ಚಿನ್ಮುಲಾದ್ರಿ ಸಾಹಿತ್ಯ ವೇದಿಕೆ ಅಧ್ಯಕ್ಷ ಡಾ.ಶಫಿವುಲ್ಲಾ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕøತ ಆರುಂಡಿ ಶ್ರೀನಿವಾಸಮೂರ್ತಿ, ಶಿಕ್ಷಕಿ ಸೌಭಾಗ್ಯಲಕ್ಷ್ಮಿ ಟಿ. ಸಂಗೀತ ಶಿಕ್ಷಕಿ ಕೋಕಿಲ ರುದ್ರಮೂರ್ತಿ, ಗಿರೀಶ್ ಎಸ್.ಸಿ. (ರಾಗಿ) ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ ಸಂಸ್ಥಾಪಕ ಅಧ್ಯಕ್ಷೆ ದಯಾ ಪುತ್ತೂರ್ಕರ್ ಇವರುಗಳು ವೇದಿಕೆಯಲ್ಲಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್