Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರುನಾಡಿನಲ್ಲಿ‌ ಕನ್ನಡವೇ ಮೊದಲು : ಹಿಂದಿ ರಾಷ್ಟ್ರ ಭಾಷೆ ವಿಚಾರಕ್ಕೆ ಯದುವೀರ್ ಒಡೆಯರ್ ಉತ್ತರ

Facebook
Twitter
Telegram
WhatsApp

ದಾವಣಗೆರೆ: ಕೆಲವು ದಿನಗಳ ಹಿಂದೆ ಅಜಯ್ ದೇವಗನ್ ಹಿಂದಿಯೇ ನಮ್ಮ ರಾಷ್ಟ್ರ ಭಾಷೆ ಅಂತ ಹೇಳಿ ಎಲ್ಲರಿಂದ ಪಾಠ ಮಾಡಿಸಿಕೊಂಡಿದ್ದರು. ನಮ್ಮ ಸ್ಯಾಂಡಲ್ ವುಡ್ ಸ್ಟಾರ್ ಕಿಚ್ಚ ಸುದೀಪ್ ಕೂಡ ಸರಿಯಾಗಿಯೇ ಉತ್ತರ ಕೊಟ್ಟಿದ್ದರು. ಆದರೆ ಇದೀಗ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಕೂಡ ಹಿಂದಿ ರಾಷ್ಟ್ರ ಭಾಷೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಕನ್ನಡವೇ ಮೊದಲು ಎಂದಿದ್ದಾರೆ.

ಜಿಲ್ಲೆಯ ಕೋಲ್ಕುಂಟೆ ಗ್ರಾಮದಲ್ಲಿ ನಡೆದ ಮೈಸೂರು ವಂಶಸ್ಥರ ಶಿಲಾಶಾಸನಪ್ರತಿಕೃತಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಯದುವೀರ್ ಅವರು, ಕರುನಾಡಿನಲ್ಲಿ ಕನ್ನಡವೇ ಮೊದಲು. ಕನ್ನಡವನ್ನೇ ಮೊದಲಾಗಿರುವಂತೆ ನೋಡಿಕೊಳ್ಳಬೇಕು. ಭಾರತದಲ್ಲಿ ಕನ್ನಡ ಹೇಗೆ ಒಂದು ಭಾಷೆಯೋ ಹಿಂದಿಯೂ ಅದೇ ರೀತಿ ಒಂದು ಭಾಷೆಯಷ್ಟೆ. ಎಲ್ಲಾ ಭಾಷೆಗೂ ಸಮಾನತೆ ನೀಡಬೇಕು ಎಂದಿದ್ದಾರೆ.

ಕೆಲವು ದಿನಗಳಿಂದ ಹಿಂದಿ ರಾಷ್ಟ್ರ ಭಾಷೆ ವಿಚಾರಕ್ಕೆ ಸದ್ದು ಗದ್ದಲ ಬರುತ್ತನೆ ಇದೆ. ಅಜಯ್ ದೇವಗನ್ ವಿಚಾರಕ್ಕೆ ಪರಭಾಷೆಯವರು ಸಹ ವಿರೋಧ ವ್ಯಕ್ತಪಡಿಸಿದ್ದಾರೆ. ಕಿಚ್ಚನುಗೆ ಬೆಂಬಲ ನೀಡಿದ್ದಾರೆ. ಆಯಾ ಸ್ಥಳೀಯ ಭಾಷೆಗಳು ಅವರವರ ರಾಜ್ಯಗಳಿಗೆ ಪ್ರಮುಖ ಭಾಷೆ. ಸದ್ಯ ಯಾವ ಭಾಷೆಯನ್ನು ಅಧಿಕೃತ ರಾಷ್ಟ್ರ ಭಾಷೆಯನ್ನಾಗಿಸಿಲ್ಲ. ಈ ಬಗ್ಗೆ ತಿಳಿಯದೆ ಹೀಗೆ ನಾತಾಡಿರುವುದು ಅಜಯ್ ದೇವಗನ್ ಅವರ ಜ್ಞಾನ ತೋರಿಸುತ್ತದೆ ಎಂದು ಹಲವರು ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!