Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ, ಡಿಸಿಎಂ ಹಾಗೂ ಸರ್ಕಾರದ ವಿರುದ್ಧ ಕೇರಳದಲ್ಲಿ ಯಾಗ : ಅಷ್ಟಕ್ಕೂ ಏನಿದು ಶತ್ರು ಭೈರವನ ಯಾಗ..?

---Advertisement---

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಹೊಸ ಶಾಕಿಂಗ್ ವಿಚಾರವೊಂದನ್ನು ಹೇಳಿದ್ದಾರೆ. ನನ್ನ ವಿರುದ್ಧ ಸಿಎಂ ವಿರುದ್ಧ ಹಾಗೂ ಸರ್ಕಾರದ ವಿರುದ್ಧ ಕೇರಳದಲ್ಲಿ ಶತ್ರು ಭೈರವಿಯಾಗ ನಡೆಯುತ್ತಿದೆ ಎಂದಿದ್ದಾರೆ. ಈ ವಿಚಾರ ಹೇಳಿ ಎಲ್ಲರಿಗೂ ಅಚ್ಚರಿ ನೀಡಿದ್ದಾರೆ.

ನನ್ನ ವಿರುದ್ಧ, ಸಿಎಂ ವಿರುದ್ಧ, ಸರ್ಕಾರದ ವಿರುದ್ಧವೇ ಯಾಗ ಮಾಡಿಸಲಾಗುತ್ತಿದೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಈ ಯಾಗ ನಡೆಯುತ್ತಿದೆ. ಉತ್ತರ ಭಾರತದಿಂದ ಬಂದಿರುವ ಅಘೋರಿಗಳ ತಂಡವೊಂದು ಈ ಯಾಗವನ್ನು ನಡೆಸುತ್ತಿದ್ದಾರೆ. ಅಷ್ಟೇ ಅಲ್ಲ ಈ ಯಾಗದಲ್ಲು ಪಂಚ ಬಲಿಯನ್ನು ನೀಡಲಾಗುತ್ತಿದೆ. ಈ ಯಾಗವನ್ನು ಯಾರು ಮಾಡಿಸುತ್ತಿದ್ದಾರೆ. ಯಾಗದಲ್ಲಿ ಯಾರೆಲ್ಕಾ ಭಾಗಿಯಾಗಿದ್ದಾರೆ ಎಂಬ ಮಾಹಿತಿ ನನಗೆ ಗೊತ್ತಿದೆ. ಕೆಟ್ಟದು ಮಾಡಿದವರು ಮಾಡಲಿ, ನನಗೆ ನಮ್ಮ ದೇವರ ಮೇಲೆ ನಂಬಿಕೆ ಇದೆ. ದೇವರು ನಮ್ಮನ್ನು ಕಾಪಾಡುತ್ತವೆ ಎಂದಿದ್ದಾರೆ.

ಅಷ್ಟಕ್ಕು ಏನಿದು ಶತ್ರು ಭೈರವ ಯಾಗ..?

ಶತ್ರು ಯಾಗ ಎಂದರೆ ಹೆಸರೇ ಹೇಳುವಂತೆ ಶತ್ರುಗಳನ್ನು ನಾಶಪಡಿಸುವ ಅಥವಾ ಶತ್ರುಗಳ ಬಾಧೆಯಿಂದ ಹಿರಬರುವಂತ ಯಾಗ ಇದಾಗಿದೆ ಎಂದು ಧಾರ್ಮಿಕ ವಲಯದ ಹಲವರು ಹೇಳುತ್ತಾರೆ. ಕಾಲ ಭೈರವಿ ಎಂಬ ಹೆಸರು ಹೇಳಿದರೇನೆ ಹಲವರು ಬೆಚ್ಚಿಬೀಳುವುದು ಉಂಟು. ಇಂಥದ್ದೊಂದು ಯಾಗವನ್ನು ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ದೇಗುಲದಲ್ಲಿ ಈ ಯಾಗ ನಡೆಯುತ್ತಿದ್ದು, 21 ಮೇಕೆ, 3 ಎಮ್ಮೆ, 21‌ ಕುರಿಗಳು ಸೇರಿದಂತೆ ಪಂಚ ಬಲಿ ಕೊಡುತ್ತಿದ್ದಾರೆ. ಅವರ ಪ್ರಯತ್ನ ಅವರು ನಡೆಸುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment