Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಕ್ಷಗಾನ ತಾಳಮದ್ದಳೆ ಕೇವಲ ಮನರಂಜನೆಯಲ್ಲ, ಮೌಲ್ಯ ಆದರ್ಶಗಳ ಪ್ರತೀಕ : ಯೋಗೀಶ್ ಸಹ್ಯಾದ್ರಿ

---Advertisement---

ಸುದ್ದಿಒನ್, ಚಿತ್ರದುರ್ಗ,ಜುಲೈ. 23 : ಯಕ್ಷಗಾನ ತಾಳಮದ್ದಳೆ ಎಂಬುದು ಕೇವಲ ಮನರಂಜನೆಯ ಕಲೆಯಲ್ಲ, ಬದಲಾಗಿ ಅದು ನಮ್ಮ ಸಂಸ್ಕೃತಿ, ಪರಂಪರೆ, ಧಾರ್ಮಿಕ ಮೌಲ್ಯಗಳು ಹಾಗೂ ಜೀವನದ ಆದರ್ಶಗಳನ್ನು ಜನರಿಗೆ ತಲುಪಿಸುವ ಅಪರೂಪದ ಕಲಾ ಪ್ರಕಾರವಾಗಿದೆ ಎಂದು ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಅಧ್ಯಕ್ಷರಾದ ರೊ. ಯೋಗೀಶ್ ಸಹ್ಯಾದ್ರಿ ಅಭಿಪ್ರಾಯಪಟ್ಟರು.

ರೋಟರಿ ಕ್ಲಬ್ ಆಫ್ ಚಿತ್ರದುರ್ಗ, ಯಕ್ಷ ಕಲಾ ಬಳಗ, ಚಿತ್ರದುರ್ಗ, ಹಾಗೂ ಫಾಟಕ್ ಯಕ್ಷ ಸಂಸ್ಕೃತಿ ಟ್ರಸ್ಟ್, ಬೆಂಗಳೂರು ಇವರ ಸಹಯೋಗದಲ್ಲಿ ಬುಧವಾರ ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯೋಗೀಶ್ ಸಹ್ಯಾದ್ರಿ ಅವರು, ವೇಷಭೂಷಣ ಮತ್ತು ನೃತ್ಯವಿಲ್ಲದೆ ಕೇವಲ ಭಾಗವತರ ಗಾಯನ, ಚಂಡೆ–ಮದ್ದಳೆಯ ನಾದ ಹಾಗೂ ಅರ್ಥಪೂರ್ಣ ಸಂವಾದಗಳ ಮೂಲಕ ಪುರಾಣ ಕಥೆಗಳನ್ನು ಜೀವಂತವಾಗಿ ಪ್ರಸ್ತುತಪಡಿಸುವ ವಿಶಿಷ್ಟ ಕಲಾರೂಪವೇ ತಾಳಮದ್ದಳೆ. ಇದು ಕಲಾವಿದರ ಜ್ಞಾನ, ವಾಕ್ಚಾತುರ್ಯ, ಸಾಹಿತ್ಯಪ್ರಜ್ಞೆ ಮತ್ತು ತಕ್ಷಣದ ವಿಚಾರಶಕ್ತಿಯನ್ನು ಅನಾವರಣಗೊಳಿಸುವ ಅದ್ಭುತ ವೇದಿಕೆಯಾಗಿದೆ. ‘ಭಕ್ತ ಮಯೂರ ಧ್ವಜ’ ಪ್ರಸಂಗವು ಭಕ್ತಿ, ತ್ಯಾಗ, ಸತ್ಯನಿಷ್ಠೆ ಮತ್ತು ಧರ್ಮಪಾಲನೆಯ ಶ್ರೇಷ್ಠ ಆದರ್ಶಗಳನ್ನು ಸಾರುವ ಅಮೂಲ್ಯ ಕಥೆಯಾಗಿದೆ. ಇಂತಹ ಪ್ರಸಂಗಗಳು ಸಮಾಜದಲ್ಲಿ ನೈತಿಕ ಮೌಲ್ಯಗಳನ್ನು ಬಿತ್ತುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಸಮಾಜ ಸೇವೆಯ ಜೊತೆಗೆ ನಮ್ಮ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆ ಮತ್ತು ಪ್ರೋತ್ಸಾಹಕ್ಕೂ ರೋಟರಿ ಸದಾ ಬದ್ಧವಾಗಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಚಿತ್ರದುರ್ಗ ಯಕ್ಷ ಕಲಾ ಬಳಗದ ಅಧ್ಯಕ್ಷ ಅನಂತಕೃಷ್ಣ ಅವರು ಕಾರ್ಯಕ್ರಮ ಆಯೋಜನೆಗೆ ಶ್ರಮಿಸಿದ ಎಲ್ಲಾ ಆಯೋಜಕರಿಗೆ, ಕಲಾವಿದರಿಗೆ, ಸಹಕಾರ ನೀಡಿದ ದಾನಿಗಳಿಗೆ ಹಾಗೂ ಸಾಂಸ್ಕೃತಿಕ ಅಭಿಮಾನಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಇಂತಹ ಕಾರ್ಯಕ್ರಮಗಳು ಮುಂದಿನ ಪೀಳಿಗೆಗೆ ನಮ್ಮ ಶ್ರೀಮಂತ ಪರಂಪರೆಯನ್ನು ಪರಿಚಯಿಸುವ ಸೇತುವೆಯಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಫಾಟಕ್ ಯಕ್ಷ ಸಂಸ್ಕೃತಿ ಟ್ರಸ್ಟ್ ನ ಸಂಯೋಜಕ ವಿದ್ವಾನ್ ಅನಂತ ಪದ್ಮನಾಭ ಫಾಟಕ್, ರೋಟರಿ ಕ್ಲಬ್ ಚಿತ್ರದುರ್ಗ ಕಾರ್ಯದರ್ಶಿ ರೊ. ಮಂಜುನಾಥ್ ಕೆ ಜಿ, ರೊ. ಲಕ್ಷ್ಮಣ್ ಎಂ.ಆರ್, ಸಾಹಿತಿ ಬಿ. ರಾಜಶೇಖರಪ್ಪ, ಇನ್ನರ್ ವೀಲ್ ಕ್ಲಬ್ ಆಫ್ ಚಿತ್ರದುರ್ಗ ಅಧ್ಯಕ್ಷೆ ರಾಧಾ ಸತೀಶ್ ಹಾಗೂ ಕಲಾವಿದರಾದ ಅನಂತ ಹೆಗಡೆ ದಂತಳಿಗೆ, ವಿಶ್ವೇಶ್ವರ ಭಟ್ ಸುಣ್ಣಂಬಳ, ರಾಧಾಕೃಷ್ಣ ಕಲ್ಚಾರ್, ವಾಸುದೇವ ರಂಗಭಟ್, ಗಣೇಶ ಭಟ್ ಸುಂಕಸಾಳ, ಸುಹಾಸ್ ಮರಾಠೆ ಹಾಗೂ ಅನೇಕ ಸಾಹಿತ್ಯಾಸಕ್ತರು, ಕಲಾಭಿಮಾನಿಗಳು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now