ಉಡುಪಿ: ಕಳೆದ ಒಂದೂವರೆ ತಿಂಗಳಿಂದ ಹಿಜಾಬ್ ಮತ್ತು ಕೇಸರಿ ಶಾಲು ವಿಚಾರ ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಭಾರೀ ಸದ್ದು ಮಾಡ್ತಿದೆ. ದಿನ ಕಳೆದಂತೆ ಹೆಚ್ಚಾಗುತ್ತಿದೆಯೇ ವಿನಃ ಕಡಿಮೆಯಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಇನ್ನು ಸರ್ಕಾರಿ ಆದೇಶಗಳನ್ನು ಪಾಲಿಸದೇ ಸಮವಸ್ತ್ರ ಧರಿಸದೇ ಇದ್ದವರನ್ನ ಡಿಬಾರ್ ಮಾಡಲಾಗುತ್ತೆ ಎಂದು ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಆರು ಜನ ವಿದ್ಯಾರ್ಥಿಗಳು ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುತ್ತಿದ್ದಾರೆ. ಮೂವತ್ತು ವರ್ಷದಿಂದ ಯಾವುದೇ ತಾರತಮ್ಯ ಮಾಡಿಲ್ಲ. ಆದ್ರೆ ಸರ್ಕಾರದ ನಿಯಮವನ್ನ ಎಲ್ಲರೂ ಪಾಲನೇ ಮಾಡಲೇಬೇಕು. ಆಡಳಿತ ಮಂಡಳಿಯ ಸದಸ್ಯನಾಗಿ ಈವರೆಗೆ ಚರ್ಚೆ ಮಾಡಿದ್ದೇನೆ. ಸರ್ಕಾರದ ಆದೇಶದಲ್ಲಿ ಯಾವುದೇ ರಾಜಿ ಇಲ್ಲ.
ಕಾಲೇಜಿನಲ್ಲಿ ಶೈಕ್ಷಣಿಕ ಕೊರತೆಯಿದ್ದರೆ ನೀಗಿಸುತ್ತೇವೆ. ಆದರೆ ಈ ರೀತಿ ನಡೆ ಸಲ್ಲದು. ಸರ್ಕಾರ ಸಮವಸ್ತ್ರ ಕಡ್ಡಾಯ ಮಾಡಿದೆ. ಹೀಗಾಗಿ ಸಮವಸ್ತ್ರ ಧರಿಸಿಯೇ ಬರಬೇಕು ಎಂದಿದ್ದಾರೆ. ಸಮವಸ್ತ್ರ ಧರಿಸದೇ ಇದ್ದರೇ ಡಿಬಾರ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…