Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಟೌಟ್ ಕಟ್ಟುವಾಗ ಮೂವರು ಸಾವು : ಮೃತ ಕುಟುಂಬಸ್ಥರ ಭೇಟಿ ಮಾಡಲಿರುವ ಯಶ್…!

---Advertisement---

ಗದಗ: ಯಶ್ ಕಟೌಟ್ ಕಟ್ಟಲು ಹೋಗಿ ಮೂವರು ಅಭಿಮಾನಿಗಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಘೋಷಣೆ ಮಾಡಿದೆ. ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ನೀಡಲಾಗುತ್ತಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆ ನೀಡಿದ್ದಾರೆ. ಪರಿಹಾರ ಘೋಷಣೆ ಮಾಡುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರೇ ಸೂಚಿಸಿದ್ದಾರೆ ಎಂದಿದ್ದಾರೆ.

ನಟ ಯಶ್ ಅಭಿಮಾನಿಗಳು ಕಟೌಟ್ ಕಟ್ಟಲು ಹೋಗಿ ಸಾವನ್ನಪ್ಪಿದ್ದರು. ಇದೀಗ ಮೃತರ ಗ್ರಾಮಕ್ಕೆ ಯಶ್ ಭೇಟಿ ಕೊಡಲಿದ್ದಾರೆ ಎನ್ನಲಾಗಿದೆ. ಸಂಜೆ ನಾಲ್ಕು ಗಂಟೆಯ ವೇಳೆಗೆ ಸೊರಣಗಿ ಗ್ರಾಮಕ್ಕೆ ಯಶ್ ಭೇಟಿ ನೀಡಲಿದ್ದಾರಂತೆ. ಮೃತರ ಸಂಬಂಧಿಕರಿಗೆ ಸಾಂತ್ವಾನ ಹೇಳುವುದಕ್ಕೆ ಬರಲಿದ್ದಾರೆ ಎನ್ನಲಾಗಿದೆ.

ಯಶ್ ರವರ ಹುಟ್ಟಹಬ್ಬದ ಅಂಗವಾಗಿ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಅವಢಗ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟರೆ ಇನ್ನೂ ಮೂವರಿಗೆ ಗಂಭೀರಗಾಯಗಳಾಗಿವೆ. ಮೃತಪಟ್ಟವರನ್ನು ಹನುಮಂತ ಹರಿಜನ್, ಮುರಳಿನಡವಿನಮನಿ, ಮತ್ತು ನವೀನ್ ಗಾಜಿ ಎಂಬ ಮೂರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರಿಗೆ ಗಂಭೀರಗಾಯಗಳಾಗಿದ್ದು ಅವರನ್ನು ಲಕ್ಷ್ಮೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದುರ್ಘಟನೆ ಸಂಭಿವಿಸುತ್ತಿದ್ದಂತೆ ಅಭಿಮಾನಿಗಳು ಯಶ್ ಅವರು ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಫ್ಯಾನ್ಸ್ ಸಾವಿಗೆ ಸಂತಾಪ ಸೂಚಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಯಶ್ ಹುಟ್ಟುಹಬ್ಬವನ್ನು ಆಚರಿಸದೆ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರು. ಆದರೆ ಇಂಥ ದುರ್ಘಟನೆ ನಡೆದಿರುವುದು ನಿಜಕ್ಕೂ ಬೇಸರದ ಸಂಗತಿ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment