Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಟೌಟ್ ಕಟ್ಟುವಾಗ ಮೂವರು ಸಾವು : ಮೃತ ಕುಟುಂಬಸ್ಥರ ಭೇಟಿ ಮಾಡಲಿರುವ ಯಶ್…!

Facebook
Twitter
Telegram
WhatsApp

ಗದಗ: ಯಶ್ ಕಟೌಟ್ ಕಟ್ಟಲು ಹೋಗಿ ಮೂವರು ಅಭಿಮಾನಿಗಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಘೋಷಣೆ ಮಾಡಿದೆ. ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ನೀಡಲಾಗುತ್ತಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆ ನೀಡಿದ್ದಾರೆ. ಪರಿಹಾರ ಘೋಷಣೆ ಮಾಡುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರೇ ಸೂಚಿಸಿದ್ದಾರೆ ಎಂದಿದ್ದಾರೆ.

ನಟ ಯಶ್ ಅಭಿಮಾನಿಗಳು ಕಟೌಟ್ ಕಟ್ಟಲು ಹೋಗಿ ಸಾವನ್ನಪ್ಪಿದ್ದರು. ಇದೀಗ ಮೃತರ ಗ್ರಾಮಕ್ಕೆ ಯಶ್ ಭೇಟಿ ಕೊಡಲಿದ್ದಾರೆ ಎನ್ನಲಾಗಿದೆ. ಸಂಜೆ ನಾಲ್ಕು ಗಂಟೆಯ ವೇಳೆಗೆ ಸೊರಣಗಿ ಗ್ರಾಮಕ್ಕೆ ಯಶ್ ಭೇಟಿ ನೀಡಲಿದ್ದಾರಂತೆ. ಮೃತರ ಸಂಬಂಧಿಕರಿಗೆ ಸಾಂತ್ವಾನ ಹೇಳುವುದಕ್ಕೆ ಬರಲಿದ್ದಾರೆ ಎನ್ನಲಾಗಿದೆ.

ಯಶ್ ರವರ ಹುಟ್ಟಹಬ್ಬದ ಅಂಗವಾಗಿ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಅವಢಗ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟರೆ ಇನ್ನೂ ಮೂವರಿಗೆ ಗಂಭೀರಗಾಯಗಳಾಗಿವೆ. ಮೃತಪಟ್ಟವರನ್ನು ಹನುಮಂತ ಹರಿಜನ್, ಮುರಳಿನಡವಿನಮನಿ, ಮತ್ತು ನವೀನ್ ಗಾಜಿ ಎಂಬ ಮೂರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರಿಗೆ ಗಂಭೀರಗಾಯಗಳಾಗಿದ್ದು ಅವರನ್ನು ಲಕ್ಷ್ಮೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದುರ್ಘಟನೆ ಸಂಭಿವಿಸುತ್ತಿದ್ದಂತೆ ಅಭಿಮಾನಿಗಳು ಯಶ್ ಅವರು ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಫ್ಯಾನ್ಸ್ ಸಾವಿಗೆ ಸಂತಾಪ ಸೂಚಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಯಶ್ ಹುಟ್ಟುಹಬ್ಬವನ್ನು ಆಚರಿಸದೆ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರು. ಆದರೆ ಇಂಥ ದುರ್ಘಟನೆ ನಡೆದಿರುವುದು ನಿಜಕ್ಕೂ ಬೇಸರದ ಸಂಗತಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!