ಚಿತ್ರದುರ್ಗ. ಜ.10: ರಾಜ್ಯ ಸರ್ಕಾರ ಯಶಸ್ವಿನಿ ಸಹಕಾರ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆಯನ್ನು 2023-24ನೇ ಸಾಲಿಗೆ ಅನುಷ್ಠಾನಗೊಳಿಸಿದೆ. ಜ.1 ರಿಂದ ನೊಂದಣಿ ಪ್ರಕ್ರಿಯೆ ಆರಂಭವಾಗಿದೆ.
ಸಹಕಾರ ಸಂಘಗಳಿಗೆ ಸದಸ್ಯರು ಗ್ರಾಮೀಣ ಪ್ರದೇಶದಲ್ಲಿ ರೂ.500 ಹಾಗೂ ನಗರ ಪ್ರದೇಶದಲ್ಲಿ ರೂ.1000 ನಿಗಧಿತ ವಂತಿಕೆ ನೀಡಿ ನೊಂದಾಯಿಸಿಕೊಳ್ಳಬಹುದು. ಎಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಸದಸ್ಯರುಗಳ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ.

ಸದಸ್ಯರಿಗೆ ಜ.1 ರಿಂದಲೇ ಆರೋಗ್ಯ ರಕ್ಷಣಾ ಚಿಕಿತ್ಸೆ ಸೌಲಭ್ಯ ಲಭಿಸಲಿದೆ. ಸಹಕಾರಿ ಸಂಘಗಳ ಸದಸ್ಯರು ಈ ಯೋಜನೆ ಲಾಭ ಪಡೆದುಕೊಳ್ಳುವಂತೆ ಚಿತ್ರದುರ್ಗ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








