Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಾಸನ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಷ್ಪ..!

---Advertisement---

ಹಾಸನ: ಹಾಸನದಲ್ಲಿರುವ ಯಶ್ ತಾಯಿ ಮನೆ ಪಕ್ಕ ಬೇರೆಯವರ ಜಾಗವನ್ನ ಒತ್ತುವರಿ ಮಾಡಿಕೊಂಡು ಕಾಂಪೌಂಡ್ ಮತ್ತು ಶೌಚಾಲಯ ಸೇರಿದಂತೆ ಬೇಸಿಕ್ ಸೌಲಭ್ಯವನ್ನ ಮಾಡಿಕೊಂಡಿದ್ದರು. ಆದರೆ ಕೋರ್ಟ್ ಮೆಟ್ಟಿಲೇರಿದ್ದ ಜಮೀನಿಗೆ ಸಂಬಂಧ ಪಟ್ಟವರು, ಅದನ್ನೆಲ್ಲಾ ಹೊಡೆದು ಹಾಕಿ, ತಂತಿ ಬೇಲಿ ಹಾಕಿಕೊಂಡಿದ್ದಾರೆ. ಅವರ ಮನೆ ಕಡೆಗೆ ಎಡಭಾಗದಿಂದ ಬರುವುದಕ್ಕೆ ಸಾಧ್ಯವಾಗದಂತೆ ಬಿಗಿ ಮಾಡಿಕೊಂಡಿದ್ದಾರೆ. ಇದೀಗ ಪುಷ್ಪ ಕೂಡ ಹಾಸನದ ಪೊಲೀಸ್ ಠಾಣೆ‌ ಮೆಟ್ಟಿಲೇರಿದ್ದಾರೆ.

ಈ ಸಂಬಂಧ ದೂರು ಕೂಡ ದಾಖಲಾಗಿತ್ತು. ಹೀಗಾಗಿ ಹಾಸನದ ಪೊಲೀಸ್ ಠಾಣೆಗೆ ಪುಷ್ಪ ಭೇಟಿ ನೀಡಿದ್ದು, ಸಮಸ್ಯೆ ಬಗ್ಗೆ ಪೊಲೀಸರ ಜೊತೆಗೆ ಮಾತನ್ನಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೂ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಮತ್ತೆ ರಾತ್ರಿ ಸಮಯದಲ್ಲಿ ಬಂದು ಯಾರ್ಯಾರೋ ಗಲಾಟೆ ಮಾಡ್ತಾ ಇದ್ದರು. ಪಕ್ಕದಲ್ಲಿ ನಮ್ಮ ದೊಡ್ಡ ಮನೆ ಇರುವುದರಿಂದ ಏಕಾಏಕಿ ಬಂದು ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪೇಪರ್ ಇದೆ. ಅದನ್ನ ಕೋರ್ಟ್ ನೋಡುತ್ತೆ. ನಮ್ಮ ಅಕ್ಕನ ಮಗ, ಡ್ರೈವರ್ ಎಲ್ಲಾ ಇರ್ತಾರೆ ನೈಟ್ ನಲ್ಲಿ ಬಂದು ಮನೇಲಿ ಗಲಾಟೆ ಮಾಡ್ತಾರೆ ಅಂತ ದೂರು ನೀಡೋದಕ್ಕೆ ಬಂದಿದ್ದೆ. ಅದನ್ನ ಸಾಹೇಬ್ರು ತಗೊಂಡಿದ್ದಾರೆ, ಎಲ್ಲಾ ನಾನು ಮಾಡಿಕೊಡ್ತೀನಿ ಅಂತಾನು ಹೇಳಿದ್ದಾರೆ. ಉಳಿದದ್ದು ನಮ್ಮ ವಕೀಲರಾದ ಸಂಜಯ್ ನೋಡಿಕೊಳ್ಳುತ್ತಾರೆ. ಕೋರ್ಟ್ ನಲ್ಲಿ ಏನಾಗುತ್ತೆ, ನಮ್ಮದು ತಪ್ಪಾ, ಅವರದ್ದೇ ತಪ್ಪಿದೆಯಾ ಎಂಬುದೆಲ್ಲಾ ತಿಳಿದುಕೊಂಡ ಮೇಲೆ ಪ್ರೆಸ್ ಮೀಟ್ ಕರೆದು, ಮಾಹಿತಿ ನೀಡ್ತೇನೆ. ನಮ್ಮ ಜಾಗ ತೆಗೆದುಕೊಂಡು ಸುಮಾರು 6 ವರ್ಷ ಆಗಿದೆ. ಇದನ್ನ ಕಾನೂನು ಬದ್ಧವಾಗಿನೇ ತೆಗೆದುಕೊಂಡಿದ್ದೇವೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now