Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿ ಡಿನ್ನರ್ ಮೀಟಿಂಗ್ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಕೌಂಟರ್..!

---Advertisement---

ಬೆಂಗಳೂರು: ಸಿಎಂ ಕುರ್ಚಿ ಕದನದ ಮನಸ್ತಾಪ ಸರಿ ಮಾಡಿಕೊಳ್ಳುವುದಕ್ಕೆ ಸಿಎಂ ಹಾಗೂ ಡಿಸಿಎಂ ಮನೆಯಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿ ಆಗಿದೆ. ಇದೀಗ ಡಿಕೆ ಶಿವಕುಮಾರ್ ಮನೆಯಲ್ಲಿ ಡಿನ್ನರ್ ಮೀಟಿಂಗ್ ವ್ಯವಸ್ಥೆ ಮಾಡಲಾಗಿದೆ. ಈ ಸಂಬಂಧ ಯತೀಂದ್ರ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಈಗ ನಾನು ಏನು ಹೇಳಬೇಕೋ ಅದೆಲ್ಲವನ್ನು ಹೇಳಿ ಆಗಿದೆ. ಈಗ ಬೇರೆಯವರು ಹೇಳಿಕೆಗೆ ಅದಕ್ಕೆ ನಾನು ಪ್ರತಿಕ್ರಿಯೆ ನೀಡುವುದಕ್ಕೆ ಆಗಲ್ಲ‌. ಅವರು ಡಿನ್ನರ್ ಮೀಟಿಂಗ್ ಮಾಡಿದ್ರೆ ಅದಕ್ಕೆ ನಾನೇನು ಮಾಡಲಿ. ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಎಲ್ಲರು ಬರ್ತಾರೆ. ಶಾಸಕರು, ಸಚಿವರನ್ನು ಕರೆದು ಮೀಟಿಂಗ್ ಮಾಡ್ತಾ ಇರುತ್ತಾರೆ. ಡಿನ್ನರ್ ಕೊಡುತ್ತಾ ಇರುತ್ತಾರೆ. ಅದಕ್ಕೆ ನಾನೇನು ಮಾಡುವುದಕ್ಕೆ ಆಗುತ್ತೆ ಎಂದಿದ್ದಾರೆ.

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದರು, ಸಮಸ್ಯೆಗಳ ಬಗ್ಗೆಗಿಂತ ಸಿಎಂ ಕುರ್ಚಿ ಕದನ, ಸಿಎಂ ಬದಲಾವಣೆಯ ವಿಚಾರಗಳೇ ಜಾಸ್ತಿಯಾಗಿವೆ. ಚಳಿಗಾಲದ ಅಧಿವೇಶನ ಆರಂಭದಲ್ಲಿಯೇ ಸಿಎಂ ವಿಚಾರವನ್ನ ಯತೀಂದ್ರ ಅವರು ಪ್ರಸ್ತಾಪ ಮಾಡಿದ್ದರು. ನಮ್ಮ ತಂದೆಯೇ ಐದು ವರ್ಷ ಸಿಎಂ ಅಂದಿದ್ರು. ಇದು ಬಹಳ ಚರ್ಚೆಗೆ ಗ್ರಾಸವಾಗಿತ್ತು. ಈ ಸಂಬಂಧ ಎಂಸಿ ಸುಧಾಕರ್ ಅವರು ಕೂಡ ಪ್ರತಿಕ್ರಿಯೆ ನೀಡಿದ್ದು, ಕೋಮಲ ದೊಡ್ಡಣ್ಣ ನವರ್ ಈ ಹಿಂದೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದರು. ಹೀಗಾಗಿ ಅವರ ಮನೆಗೆ ಕ್ಯಾಬಿನೆಟ್ ಮುಗಿಸಿ, ಊಟಕ್ಕೆ ಹೋಗಿದ್ದೆವು. ಇದರಲ್ಲಿ ಅಂಥ ವಿಶೇಷತೆ ಏನು ಇಲ್ಲ. ರಾಜಕೀಯವು ಇಲ‌್ಲ. ಇದೊಂದು ಖಾಸಗಿ ಊಟದ ವ್ಯವಸ್ಥೆ ಅಷ್ಟೇ ಎಂದು ಎಂಸಿ ಸುಧಾಕರ್ ಮಾಹಿತಿ ನೀಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now