Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯತೀಂದ್ರ ಸನ್ ಆಫ್ ಸಿದ್ದರಾಮಯ್ಯ ವರ್ಸಸ್ ಪತ್ರಕರ್ತ ಪ್ರತಾಪ್ ಸಿಂಹ ಮಜವಾಗಿರುತ್ತೆ : ಪ್ರತಾಪ್ ಸಿಂಹ

---Advertisement---

ಮೈಸೂರು: ಫೆಬ್ರವರಿ 4ರಿಂದ ಮೈಸೂರಿಂದ ಅಯೋಧ್ಯೆಗೆ ವಿಶೇಷವಾದ ರೈಲು ಸೇವೆ ಆರಂಭವಾಗುತ್ತಾ ಇದೆ. ತಿಂಗಳಿಗೆ ಎರಡು ಸಲ ರೈಲು ಓಡಾಡಲಿದೆ. ಹೀಗಾಗಿ ಮೈಸೂರಿನಿಂದ ದೊಡ್ಡ ಸಂಖ್ಯೆಯಲ್ಲಿ ರಾಮನ ಭಕ್ತರು ಅಯೋಧ್ಯೆಗೆ ಹೊರಡಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಅಯೋಧ್ಯೆಗೆ ಭೇಟಿ ನೀಡಬೇಕೆಂದು ಮನವಿ ಮಾಡುತ್ತೇನೆ. ಮೈಸೂರಿನಿಂದ ರೈಲು ಬಿಟ್ಟ ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.

 

ಇದೇ ವೇಳೆ ಮೈಸೂರಿನಲ್ಲಿ ಯತೀಂದ್ರ ಅವರ ಸ್ಪರ್ಧೆಯ ಬಗ್ಗೆ ಮಾತನಾಡಿ, ನನಗೆ ಆ ಬಗ್ಗೆ ಗೊತ್ತಿಲ್ಲ. ಕಾಂಗ್ರೆಸ್ ನವರು ಅಭ್ಯರ್ಥಿಯನ್ನು ಹುಡುಕುತ್ತಾ ಇದ್ದಾರೆ ಹುಡುಕುತ್ತಾ ಇದ್ದಾರೆ ಎಂಬ ಸುದ್ದಿಯೇ ಕೇಳಿ ಬರುತ್ತಾ ಇತ್ತು. ಯತೀಂದ್ರ ಅವರು ನಿಂತರೆ ಬಹಳ ಒಳ್ಳೆಯದು‌. ಅದಿಂಥರ ಹೇಗಿರುತ್ತೆ ಎಂದರೆ, ಯತೀಂದ್ರ ಸಿದ್ದರಾಮಯ್ಯ ಹಾಗೂ ಪ್ರತಾಪ್ ಸಿಂಹ ಫೈಟ್ ಎಂದರೆ ನಿಮಗೆಲ್ಲಾ ಒಳ್ಳೆ ಸುದ್ದಿ ಸಿಗುತ್ತದೆ. ಆದರೆ ಸ್ಪರ್ಧೆ ಹೇಗಿರುತ್ತದೆ ಎಂದರೆ ಡಾ. ಯತೀಂದ್ರ ಸನ್ ಆಫ್ ಸಿದ್ದರಾಮಯ್ಯ ವರ್ಸಸ್ ಪತ್ರಕರ್ತ ಪ್ರತಾಪ್ ಸಿಂಹ ಮಜವಾಗಿರುತ್ತದೆ ಎಂದಿದ್ದಾರೆ.

 

ಹೆಚ್ ಡಿ ಕುಮಾರಸ್ವಾಮಿ ಅವರನ್ನು ನಿನ್ನೆ ಭೇಟಿ ಮಾಡಿ ಬಂದಿದ್ದರ ಬಗ್ಗೆ ಮಾತನಾಡಿ, ಕುಮಾರಣ್ಣ ಅವರನ್ನು ಬಿಡದಿಯಲ್ಲಿರುವ ಅವರ ಮನೆಯಲ್ಲಿ ಭೇಟಿಯಾಗಿ ಮಾತನಾಡಿ, ಚರ್ಚೆ ಕೂಡ ಮಾಡಿ ಬಂದೆ. ನಾನು‌ ಮುಖ್ಯವಾಗಿ ಅಲ್ಲಿಗೆ ಹೋಗಿದ್ದು, ಇತ್ತಿಚೆಗೆ ನನ್ನ ತಮ್ಮನನ್ನು ಮರಗಳ್ಳತನದ ವಿಚಾರವಾಗಿ ಅನಗತ್ಯವಾಗಿ ಎಳೆದು ತಂದಿದ್ದರು. ದುರುದ್ದೇಶಪೂರಿತ ರಾಜಕೀಯ ನಡೆದಿದ್ದರ ಸತ್ಯ ಸಂಗತಿಯನ್ನು ದಾಖಲೆ ಸಮೇತ ಬಿಚ್ಚಿಟ್ಟಿದ್ದಂತ ಕುಮಾರಣ್ಣನಿಗೆ ನಾನು ಧನ್ಯವಾದವನ್ನು ಅರ್ಪಿಸಿದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment