ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಇಂದು ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ಫೈನಲ್ ಆಗಲಿದೆ. ಕೇಂದ್ರದಿಂದ ವೀಕ್ಷಕರು ಬಂದಿದ್ದಾರೆ. ವಿಪಕ್ಷ ನಾಯಕರ ಆಕಾಂಕ್ಷೆಯ ರೇಸ್ ನಲ್ಲಿ ಬಿಜೆಪಿಯ ಹಲವರಿದ್ದಾರೆ. ಅದರಲ್ಲಿ ಶಾಸಕ ಬಸನಗೌಡ ಯತ್ನಾಳ್ ಕೂಡ ಒಬ್ಬರು. ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಯತ್ನಾಳ್ ಮನೆಗೆ ಭೇಟಿ ನೀಡಿದ್ದಾರೆ. ಬೆಂಗಳೂರಿನ ಪ್ರಕಾಶ್ ನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಈ ವೇಳೆ ಶಾಸಕ ಯತ್ನಾಳ್ ಕೇಂದ್ರದಿಂದ ಬಂದಿದ್ದಂತ ವೀಕ್ಷಕರಿಗೆ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಪ್ರೀತಿಯಿಂದ ಸ್ವಾಗತ ಮಾಡಿದ್ದಾರೆ. ಇಂದು ವಿಕ್ಷನ ನಾಯಕನ ಆಯ್ಕೆ ಮಾಡುವ ಹಿನ್ನೆಲೆ ವೀಕ್ಷಕರು ಕೂಡ ಸೂಕ್ತವಾದವರನ್ನು ಆಯ್ಕೆ ಮಾಡಲಿದ್ದಾರೆ.
ಈ ಸಂಬಂಧ ಮಾತನಾಡಿರುವ ಶಾಸಕ ಯತ್ನಾಳ್, ಪ್ರಧಾನಿ ಮೋದಿ, ನಡ್ಡಾ ಮಾತುಗಳನ್ನು ತಪ್ಪದೆ ಪಾಲಿಸುತ್ತೇನೆ. ನಾನು ಯಾವುದೇ ಕಾರಣಕ್ಕೂ ಥರ್ಡ್ ಕ್ಲಾಸ್ ರಾಜಕಾರಣ ಮಾಡಲ್ಲ. ಕೆಲಸ ಇಲ್ಲದೆ ಇದ್ದಾಗ ಸಂಪರ್ಕ ಮಾಡುತ್ತಾರೆ. ಮುಂದೆ ತುಳಿಯಬೇಕಾದಾಗ ತುಳಿಯುತ್ತಾರೆ. ಕೇಂದ್ರದ ನಾಯಕರಿಗೆ ಎಲ್ಲಾ ಮಾಹಿತಿಯನ್ನು ತಿಳಿಸಿದ್ದೇನೆ.
ಕೆಲವೊಂದಿಷ್ಟು ಮಂದಿ ಮಾತನಾಡುವುದಕ್ಕೆ ಹೆದರುತ್ತಾರೆ. ಆದರೆ ನಾನು ಎಲ್ಲವನ್ನು ಹೇಳುತ್ತೇನೆ. ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಕೊಡಬೇಕು ಯಾಕೆ ಕೊಡುವುದಿಲ್ಲ. ಬಹಳಷ್ಟು ಶಾಸಕರು ನನ್ನ ಜೊತೆಗೆ ಇದ್ದಾರೆ. ಲೋಕಸಭಾ ಚುನಾವಣೆಗೆ ಪ್ರಯತ್ನ ಮಾಡುತ್ತಿದ್ದಾರೆ. 2024ಕ್ಕೆ ಪ್ರಧಾನಿ ಮೋದಿ ಅವರ ಅವಶ್ಯಕತೆ ಇದೆ. ನರೇಂದ್ರ ಮೋದಿ ಅಧಿಕಾರಕ್ಕೆ ಬರದೆ ಇದ್ದಲ್ಲಿ ಭಾರತ ಉಳಿಯುತ್ತಿರಲಿಲ್ಲ. ನಿನ್ನೆ ಒಬ್ಬ ಏಜೆಂಟ್ ಬಂದಿದ್ದ, ಅವನಿಗೆ ಹೇಳಿದ್ದೀನಿ ನನ್ನನ್ನು ಖರೀದಿಸಲು ಸಾಧ್ಯವಿಲ್ಲ ಎಂದು. ಇವರ ಬಣ್ಣ ಬಯಲು ಮಾಡಿದ್ದೇನೆ ಯತ್ನಾಳ್ ಯಾರ ಮುಲಾಜಿನಲ್ಲೂ ಇಲ್ಲ. ನಿನ್ನಂಥವರನ್ನು 10 ಮಂದಿ ಖರೀದಿಸುತ್ತೇನೆ ಎಂದು ಹೇಳಿ ಕಳುಹಿಸಿದ್ದೀನಿ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್