Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಪಕ್ಷ ನಾಯಕನ ಆಕಾಂಕ್ಷಿಯಾಗಿರುವ ಯತ್ನಾಳ್ ಕೆಂಡಾಮಂಡಲ..!

Facebook
Twitter
Telegram
WhatsApp

 

 

ಬೆಂಗಳೂರು: ಇಂದು ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ಫೈನಲ್ ಆಗಲಿದೆ. ಕೇಂದ್ರದಿಂದ ವೀಕ್ಷಕರು ಬಂದಿದ್ದಾರೆ. ವಿಪಕ್ಷ ನಾಯಕರ ಆಕಾಂಕ್ಷೆಯ ರೇಸ್ ನಲ್ಲಿ ಬಿಜೆಪಿಯ ಹಲವರಿದ್ದಾರೆ. ಅದರಲ್ಲಿ ಶಾಸಕ ಬಸನಗೌಡ ಯತ್ನಾಳ್ ಕೂಡ ಒಬ್ಬರು. ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಯತ್ನಾಳ್ ಮನೆಗೆ ಭೇಟಿ ನೀಡಿದ್ದಾರೆ. ಬೆಂಗಳೂರಿನ ಪ್ರಕಾಶ್ ನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಈ ವೇಳೆ ಶಾಸಕ ಯತ್ನಾಳ್ ಕೇಂದ್ರದಿಂದ ಬಂದಿದ್ದಂತ ವೀಕ್ಷಕರಿಗೆ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಪ್ರೀತಿಯಿಂದ ಸ್ವಾಗತ ಮಾಡಿದ್ದಾರೆ. ಇಂದು ವಿಕ್ಷನ ನಾಯಕನ ಆಯ್ಕೆ ಮಾಡುವ ಹಿನ್ನೆಲೆ ವೀಕ್ಷಕರು ಕೂಡ ಸೂಕ್ತವಾದವರನ್ನು ಆಯ್ಕೆ ಮಾಡಲಿದ್ದಾರೆ.

ಈ ಸಂಬಂಧ ಮಾತನಾಡಿರುವ ಶಾಸಕ ಯತ್ನಾಳ್, ಪ್ರಧಾನಿ ಮೋದಿ, ನಡ್ಡಾ ಮಾತುಗಳನ್ನು ತಪ್ಪದೆ ಪಾಲಿಸುತ್ತೇನೆ. ನಾನು ಯಾವುದೇ ಕಾರಣಕ್ಕೂ ಥರ್ಡ್ ಕ್ಲಾಸ್ ರಾಜಕಾರಣ ಮಾಡಲ್ಲ. ಕೆಲಸ‌ ಇಲ್ಲದೆ ಇದ್ದಾಗ ಸಂಪರ್ಕ‌ ಮಾಡುತ್ತಾರೆ.‌ ಮುಂದೆ‌ ತುಳಿಯಬೇಕಾದಾಗ ತುಳಿಯುತ್ತಾರೆ. ಕೇಂದ್ರದ ನಾಯಕರಿಗೆ ಎಲ್ಲಾ ಮಾಹಿತಿಯನ್ನು ತಿಳಿಸಿದ್ದೇನೆ.

ಕೆಲವೊಂದಿಷ್ಟು ಮಂದಿ ಮಾತನಾಡುವುದಕ್ಕೆ ಹೆದರುತ್ತಾರೆ. ಆದರೆ ನಾನು ಎಲ್ಲವನ್ನು ಹೇಳುತ್ತೇನೆ. ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಕೊಡಬೇಕು ಯಾಕೆ ಕೊಡುವುದಿಲ್ಲ. ಬಹಳಷ್ಟು ಶಾಸಕರು ನನ್ನ ಜೊತೆಗೆ ಇದ್ದಾರೆ. ಲೋಕಸಭಾ ಚುನಾವಣೆಗೆ ಪ್ರಯತ್ನ ಮಾಡುತ್ತಿದ್ದಾರೆ. 2024ಕ್ಕೆ ಪ್ರಧಾನಿ ಮೋದಿ ಅವರ ಅವಶ್ಯಕತೆ ಇದೆ. ನರೇಂದ್ರ ಮೋದಿ ಅಧಿಕಾರಕ್ಕೆ ಬರದೆ ಇದ್ದಲ್ಲಿ ಭಾರತ ಉಳಿಯುತ್ತಿರಲಿಲ್ಲ. ನಿನ್ನೆ ಒಬ್ಬ ಏಜೆಂಟ್ ಬಂದಿದ್ದ, ಅವನಿಗೆ ಹೇಳಿದ್ದೀನಿ ನನ್ನನ್ನು ಖರೀದಿಸಲು ಸಾಧ್ಯವಿಲ್ಲ ಎಂದು. ಇವರ ಬಣ್ಣ ಬಯಲು ಮಾಡಿದ್ದೇನೆ ಯತ್ನಾಳ್ ಯಾರ ಮುಲಾಜಿನಲ್ಲೂ ಇಲ್ಲ. ನಿನ್ನಂಥವರನ್ನು 10 ಮಂದಿ ಖರೀದಿಸುತ್ತೇನೆ ಎಂದು ಹೇಳಿ ಕಳುಹಿಸಿದ್ದೀನಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!