Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೀಸಲಾತಿ ಇವರಪ್ಪನ ಮನೆಯದ್ದಾ..? : ಮುಸ್ಲಿಂ ಮೀಸಲಾತಿ ಕಡಿತಕ್ಕೆ ಯತ್ನಾಳ್ ಟಾಂಗ್..!

Facebook
Twitter
Telegram
WhatsApp

ವಿಜಯಪುರ: ಬಿಜೆಪಿ ಸರ್ಕಾರ ಮುಸ್ಲಿಂರಿಗೆ ನೀಡಿದ್ದ ಮೀಸಲಾತಿ ರದ್ದು ಮಾಡುವ ನಿರ್ಧಾರ ಮಾಡಿದೆ. ಈ ಬೆನ್ನಲ್ಲೇ ಹಲವರಿಂದ ವಿರೋಧ ವ್ಯಕ್ತವಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಸ್ಲಿಂರು ಮೂರು ಮೂರು ಕಡೆ ಲಾಭ ಪಡೆಯುತ್ತಿದ್ದಾರೆ. ಮೀಸಲಾತಿ ಏನು ಇವರಪ್ಪನ ಮನೆಯದ್ದಾ..? ಲಾಭ ಒಂದೇ ಕಡೆ ಸಿಗಬೇಕು ಎಂದು ತಿರುಗೇಟು ನೀಡಿದ್ದಾರೆ.

ಇನ್ನು ದಲಿತರ ಮೀಸಲಾತಿ ಬಗ್ಗೆ ಮಾತನಾಡಿ, ದಲಿತರಿಗೆ ಇನ್ನು ಎರಡು ಪರ್ಸೆಂಟ್ ಜಾಸ್ತಿ ಮಾಡುತ್ತೇವೆ. ಈಗ 17 ಪರ್ಸೆಂಟ್ ಇದೆ. ಮುಂದೆ ನರೇಂದ್ರ ಮೋದಿಯವರು 21 ಪರ್ಸೆಂಟ್ ಮಾಡ್ತಾರೆ. ಅತಿಯಾದ ಮುಸ್ಲಿಂ ತುಷ್ಠಿಕರಣವೇ ಸಿದ್ದರಾಮಯ್ಯ ಅವರ ಈ ಸ್ಥಿತಿಗೆ ಕಾರಣವಾಗಿದೆ. ಎಲ್ಲಾ ಜನಾಂಗವನ್ನು ಪ್ರೀತಿ ಮಾಡಬೇಕು ಒಂದೇ ಜನಾಂಗವನ್ನು ತಲೆ ಮೇಲೆ ಕೂರಿಸಿಕೊಂಡರೆ, ಇನ್ನುಳಿದವರು ಬುದ್ದಿ ಕಲಿಸುತ್ತಾರೆ ಎಂದು ಸಿದ್ದರಾಮಯ್ಯ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ಡಿಕೆಶಿಗೂ ತಿರುಗೇಟು ನೀಡಿರುವ ಯತ್ನಾಳ್, ಕಾಂಗ್ರೆಸ್ ಥರಥರ ಅಂತ ಅಲುಗಾಡಿ ಹೋಗಿದೆ. ಡಿಕೆ ಶಿವಕುಮಾರ್ ಗೆ ತಾಕತ್ತು ಇದ್ದರೆ ಮೀಸಲಾತಿ ರದ್ದು ಮಾಡ್ತೀವಿ ಅಂತ ಚುನಾವಣೆಯಲ್ಲಿ ಹೇಳಲಿ. ಆ ರೀತಿ ಹೇಳಿದ್ರೆ ಕಾಂಗ್ರೆಸ್ ನ ಡೆಪಾಜಿಟ್ ರದ್ದಾಗುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ. ಶುಕ್ರವಾರ- ರಾಶಿ ಭವಿಷ್ಯ ಏಪ್ರಿಲ್-26,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

error: Content is protected !!