ಬೆಳಗಾವಿ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನ ಬಿಜೆಪಿ ಸದ್ಯ ಉಚ್ಛಾಟನೆ ಮಾಡಿದೆ. ಆದ್ರೆ ಪಕ್ಷಕ್ಕೆ ಮರಳುವುದಕ್ಕೆ ಎಲ್ಲಾ ಸಿದ್ಧತೆಗಳು ಆಗಿದೆ ಅಂತ ರಮೇಶ್ ಜಾರಕಿಹೊಳಿ ಶಾಕಿಂಗ್ ವಿಚಾರ ತಿಳಿಸಿದ್ದಾರೆ. ಕೆಲವೇ ದಿನಗಳಲ್ಲಿ ಬಿಜೆಪಿಗೆ ಮರಳಲಿದ್ದಾರೆ ಎಂದು ಅಥಣಿಯಲ್ಲಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬಾಗಲಕೋಟೆ ಚುನಾವಣಾ ಪ್ರಚಾರದ ವಿಚಾರಕ್ಕೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೇ ಪ್ರಚಾರ ಮಾಡಲಿ ಎಂದಿದ್ದರು. ಈ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಈ ರೀತಿ ಹೇಳಿದ್ದಾರೆ.
ಉಚ್ಛಾಟನೆಯಾದ ದಿನದಿಂದ ನಾನು ಯತ್ನಾಳ್ ಅವರನ್ನು ಬಿಜೆಪಿಗೆ ಕರೆತರುವ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ವೇದಿಕೆಯೂ ಸಜ್ಜಾಗಿದೆ. ಯತ್ನಾಳ್ ಬಿಜೆಪಿಗೆ ಬಂದರೆ ಒಳ್ಳೆಯದು. ಹಿಂದೂ ಸಂಘಟನೆ ಮತ್ತು ಬಿಜೆಪಿ ಮತ ಕ್ರೋಢಿಕರಣಕ್ಕೆ ಅನುಕೂಲವಾಗುತ್ತದೆ. ಉಪಚುನಾವಣೆಯಲ್ಲಿ ನಮ್ಮ ಪಕ್ಷದವರು ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಿದ್ದು ಗೆಲ್ಲುವ ಆಶಾಭಾವನೆಯನ್ನು ನಾವು ಹೊಂದಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಮೂಲಕ ಬಿಜೆಪಿಯ ಹಿಂದೂ ಹುಲಿ ಎಂದೇ ಫೇಮಸ್ ಆಗಿರುವ ಯತ್ನಾಳ್ ಬಿಜೆಪಿಗೆ ಬೇಕೆ ಬೇಕು ಎಂಬಂತ ಮಾತುಗಳು ಹಲವರಿಂದ ಕೇಳಿ ಬರ್ತಿದೆ. ಆದರೆ ಯತ್ನಾಳ್ ಅವರು ಮಾತ್ರ ಯಡಿಯೂರಪ್ಪ ಅವರ ಕುಟುಂಬದ ಮೇಲೆ ಆಕ್ರೋಶ ಭರಿತರಾಗಿದ್ದು, ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನೋದನ್ನ ನೋಡಬೇಕಿದೆ.












