Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದರಾಮಯ್ಯ ಸರ್ಕಾರಕ್ಕೆ ವರ್ಷದ ಸಂಭ್ರಮ : ಬಿಜೆಪಿಯ ಪ್ಲ್ಯಾನ್ ಏನು ಗೊತ್ತಾ..?

---Advertisement---

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ 135 ಕ್ಷೇತ್ರದಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿ, ಸ್ವತಂತ್ರವಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು. ಇದೀಗ ಆ ಸಂತಸದ ಗಳಿಗೆಗೆ ಭರ್ತಿ ಒಂದು ವರ್ಷವಾಗುತ್ತಿದೆ. ಮೇ20ಕ್ಕೆ ಸರ್ಕಾರ ರಚನೆ ಮಾಡಿ ಒಂದು ವರ್ಷ. ಈ ಒಂದು ವರ್ಷದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ ಘೋಷಿಸಿದ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಇದರಿಂದ ರಾಜ್ಯದ ಮಹಿಳೆಯರು ಕೂಡ ಸಂತಸದಲ್ಲಿದ್ದಾರೆ.

ಈ ಸುಸಂದರ್ಭದಲ್ಲಿ ಬಿಜೆಪಿ ಆರೋಪಗಳ ಪಟ್ಟಿ ರಿಲೀಸ್ ಮಾಡಲು ಪ್ಲ್ಯಾನ್ ಮಾಡಿದೆ. ರಾಜ್ಯದಲ್ಲಿ ಕೆಲವೊಂದು ಕೆಟ್ಟ ಘಟನೆಗಳು ನಡೆಯುತ್ತಿವೆ. ಅದರಲ್ಲಿ ಕೊಲೆಯೂ ಒಂದು. ಈ ಪ್ರಕರಣಗಳನ್ನು ಮುಂದಿಟ್ಟುಕೊಂಡು ಕಾನೂನು ಸುವ್ಯವಸ್ಥೆಯ ಬಗ್ಗೆ ಮಾತನಾಡಲು ಸಿದ್ಧತೆ ಮಾಡಿಕೊಂಡಿದೆ. ಕಾನೂನು ಸುವ್ಯವಸ್ಥೆಯ ವೈಫಲ್ಯಗಳನ್ನು ಪಟ್ಟಿ ಮಾಡಿಕೊಂಡು ಇದು ಸರ್ಕಾರದ ನೆಗೆಟಿವ್ ರೋಲ್ ಎಂದು ಬಿಂಬಿಸುವ ಪ್ಲ್ಯಾನ್ ಇದಾಗಿದೆ. ಅಷ್ಟೇ ಅಲ್ಲದೆ ಬರ ನಿರ್ವಹಣೆಯಲ್ಲೂ ವಿಫಲವಾಗಿದೆ, ರೈತರಿಗೆ ಬರಬೇಕಾದ ಪರಿಹಾರ ಸಿಕ್ಕಿಲ್ಲ ಎಂಬೆಲ್ಲಾ ಅಂಶಗಳನ್ನಿಟ್ಟುಕೊಂಡು ಸರ್ಕಾರದ ಮೇಲೆ ಮುಗಿಬೀಳಲು ಸಿದ್ಧವಾಗಿದೆ.

ಇನ್ನು ಕಾಂಗ್ರೆಸ್ ಒಂದು ವರ್ಷ ಪೂರೈಸಿರುವ ಸಂಭ್ರಮವನ್ನು ದೊಡ್ಡ ಮಟ್ಟದಲ್ಲಿಯೇ ಸೆಲೆಬ್ರೇಟ್ ಮಾಡಲಿದೆ. ಸಾಧನಾ ಸಮಾವೇಶ ಮಾಡುವ ಮೂಲಕ, ರಾಜ್ಯದ ಜನತೆಗೆ ಏನೆಲ್ಲಾ ಕೊಟ್ವಿ, ಮುಂದೆ ಏನೆಲ್ಲಾ ಕೊಡಲಿದ್ದೇವೆ ಎಂಬೆಲ್ಲಾ ವಿಚಾರಗಳನ್ನು ಜನತೆಗೆ ಮುಟ್ಟಿಸಲಿದ್ದಾರೆ. ಲೋಕಸಭಾ ಚುನಾವಣೆಯೂ ಮುಗಿದಿದ್ದು, ಜೂನ್ 4ಕ್ಕೆ ಫಲಿತಾಂಶ ಬರಲಿದೆ‌. ರಾಜ್ಯದಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಗೆದ್ದುಕೊಂಡರೆ ಆ ಸಂಭ್ರಮವನ್ನು ಒಟ್ಟಿಗೆ ಸೇರಿ ಮಾಡುವ ಯೋಜನೆಯನ್ನು ಕಾಂಗ್ರೆಸ್ ಹಾಕಿಕೊಂಡಿದೆಯಂತೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...