ಸಚಿವ ಸಂಪುಟ ವಿಸ್ತರಣೆ ವೇಳೆ ಶಾಸಕ ತಿಪ್ಪಾರೆಡ್ಡಿ ಅವಕಾಶಕ್ಕೆ ಪ್ರಯತ್ನ : ಬಿ.ಎಸ್. ಯಡಿಯೂರಪ್ಪ

suddionenews
1 Min Read

ಸುದ್ದಿಒನ್, ಚಿತ್ರದುರ್ಗ, (ಅ.18) : ಮುಂದಿನ ಸಚಿವ ಸಂಪುಟ ವಿಸ್ತರಣೆ ಮಾಡುವ ಸಮಯದಲ್ಲಿ ಹಿರಿಯ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಯವರಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೆ ಮಾತನಾಡುತ್ತೇನೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದರು.

ಮುರುಘಾ ಮಠದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಯಡಿಯೂರಪ್ಪ, ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಮನೆಗೆ ಭೇಟಿ ನೀಡಿ ಮಾತನಾಡಿದರು.

ತಿಪ್ಪಾರೆಡ್ಡಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸುವ ಪ್ರತಿ ಸಂದರ್ಭದಲ್ಲಿಯೂ ಒಂದಲ್ಲ ಒಂದು ಕಾರಣಕ್ಕೆ ಸಚಿವರನ್ನಾಗಿ ಮಾಡದೇ ಅವರಿಗೆ ಅನ್ಯಾಯವಾಗಿದೆ. ಈ ಕುರಿತು ಸಿಎಂ ಜೊತೆಗೆ ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ಸಮಯದಲ್ಲಿ ಅವರಿಗೆ ಅವಕಾಶಕ್ಕಾಗಿ ಪ್ರಯತ್ನ ಮಾಡುವೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *