Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಯಡಿಯೂರಪ್ಪ ಅವರಿಗೆ ಇಂದು ಜೈಲಾ..? ಬೇಲಾ..?

---Advertisement---

ಬೆಂಗಳೂರು: ಫೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಮಾಜಿ ಸಿಎಂ ಬಿಎದ್ ಯಡಿಯೂರಪ್ಪ ಅವರು ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಂದು ಅರ್ಜಿ ವಿಚಾರಣೆ ನಡೆಯಲಿದ್ದು, ಕೋರ್ಟ್ ನೀಡುವ ತೀರ್ಪಿನ ಮೇಲೆ ಯಡಿಯೂರಪ್ಪ ಅವರಿಗೆ ಜೇಲಾ..? ಬೇಲಾ ಎಂಬುದು ತೀರ್ಮಾನವಾಗಲಿದೆ.

ನಿನ್ನೆಯಷ್ಟೇ ಬೆಂಗಳೂರಿನ ನ್ಯಾಯಾಲಯ ಯಡಿಯೂರಪ್ಪ ಅವರ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಹೀಗಾಗಿ ಸಿಐಡಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆಯಲು ಕಾಯುತ್ತಿದ್ದಾರೆ. ಇಂದು ಕೋರ್ಟ್ ಏನಾದರೂ ಜಾಮೀನು ಅರ್ಜಿಯನ್ನು ತಿರಸ್ಕಾರ ಮಾಡಿದರೆ ಯಡಿಯೂರಪ್ಪ ಅವರ ಬಂಧನವಾಗುವುದು ಗ್ಯಾರಂಟಿ ಎನ್ನಲಾಗಿದೆ.

ಇನ್ನು ಈ ಫೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪ ಅವರ ಆಪ್ತರ ಮೇಲೆ ಸಾಕ್ಷ್ಯ ನಾಶ ಮಾಡಿದ ಆರೋಪವೂ ಇದೆ‌. ಅರುಣ್ ಹಾಗೂ ರುದ್ರೇಶ್ ಹಾಗೂ ಮರಿಸ್ವಾಮಿ ಎಂಬುವವರನ್ನೂ ಪ್ರಕರಣದ ಆರೋಪಿಗಳನ್ನಾಗಿ ತನಿಖಾ ತಂಡ ಗುರುತಿಸಿದೆ. ಸಾಕ್ಷಿಗಳನ್ನು ನಾಶ ಮಾಡಿರುವುದು, ಪ್ರಭಾವ ಬೀರಿದ ಹಿನ್ನಲೆಯಲ್ಲಿ ಅವರನ್ನು ಸಿಆರ್ಪಿಸಿ 41ರ ಅಡಿಯಲ್ಲಿ ಆರೋಪಿಗಳನ್ನಾಗಿ ಪರಿಗಣಿಸಿ ನೋಟೀಸ್ ಜಾರಿ ಮಾಡಲಾಗಿದೆ.

ಬಿಎಸ್ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಯ ತಾಯಿ ದೂರು ನೀಡಿದ್ದರು. ಪ್ರಕರಣ ದಾಖಲೊಸಿಕೊಂಡಿದ್ದ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಸಾಕಷ್ಟು ಬಾರಿ ನೋಟೀಸ್ ನೀಡಿದರು ವಿಚಾರಣೆಗೆ ಹಾಜರಾಗದ ಯಡಿಯೂರಪ್ಪ ವಿರುದ್ಧ ಸಿಐಡಿ ಪೊಲೀಸರು, ನ್ಯಾಯಲಯದ ಮೊರೆ ಹೋಗಿದ್ದರು. ನ್ಯಾಯಾಲಯದಿಂದ ಬಂಧನದ ವಾರೆಂಟ್ ಪಡೆದುಕೊಂಡಿದ್ದರು. ಬಳಿಕ ಯಡಿಯೂರಪ್ಪ ಅವರು ಎಚ್ಚೆತ್ತುಕೊಂಡು ಜಾಮೀನಿಗೆ ಅರ್ಜಿ ಹಾಕಿದ್ದಾರೆ. ಜಾಮೀನು ಸಿಗದೆ ಹೋದಲ್ಲಿ ಯಡಿಯೂರಪ್ಪ ಅವರ ಬಂಧನವೂ ಆಗಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...