Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಡಿಯೂರಪ್ಪ ಅವರು ಬಳೆಗಾರ ಶೆಟ್ಟರ ; ಯತ್ನಾಳ್ ಬಿಚ್ಚಿಟ್ಟ ಸತ್ಯವೇನು..?

---Advertisement---

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸದಾ ಯಡಿಯೂರಪ್ಪ ಕುಟುಂಬದವರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಅದರಲ್ಲೂ ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಾಗಿಯಂತೂ ಸದಾ ವಿರೋಧ ಮಾಡುತ್ತಲೇ ಇದ್ರು. ಶಿಸ್ತು ಸಮಿತಿ ನೋಟೀಸ್ ಕೊಟ್ಟರು ಅದಕ್ಕೂ ಡೋಂಟ್ ಕೇರ್ ಎನ್ನುತ್ತಿರುವ ಯತ್ನಾಳ್ ಮತ್ತೆ ಮತ್ತೆ ಅದನ್ನೇ ಶುರು ಮಾಡಿದ್ದಾರೆ. ಇದೀಗ ಬಿ.ಎಸ್.ಯಡಿಯೂರಪ್ಪ ಅವರನ್ನ ನೀವೂ ಲಿಂಗಾಯತರೇ ಅಲ್ಲ ಅಂತ ಹೇಳುತ್ತಿದ್ದಾರೆ.

ಹೌದು ಯಡಿಯೂರಪ್ಪ ಅವರ ಸಮುದಾಯದ ಬಗ್ಗೆ ಮಾತನಾಡಿದ್ದಾರೆ. ಯಡಿಯೂರಪ್ಪ ಅವರು ಲಿಂಗಾಯತರೇ ಅಲ್ಲ, ಬಂಗಾರ ಶೆಟ್ಟಿ ಸಮುದಾಯದವರು ಅಂತ ಶಾಕಿಂಗ್ ನ್ಯೂಸ್ ಹೇಳಿದ್ದಾರೆ. ಅಷ್ಟೇ ಅಲ್ಲ ಸಾಕ್ಷಿ ಸಿಗುವ ಜಾಗವನ್ನು ಹೇಳಿದ್ದಾರೆ. ಬೇಕಾದರೆ ಯಡಿಯೂರಪ್ಪ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಬೂಕನಕೆರೆ ಹೋಗಿ ಕೇಳಿದರೆ ನಿಜ ಏನು ಎಂಬುದು ಗೊತ್ತಾಗುತ್ತದೆ. ಯಡಿಯೂರಪ್ಪ ಅವರು ಲಿಂಗಾಯತರು ಎಂದು ಹೇಳಿಕೊಂಡು ಪಕ್ಷವನ್ನ ಬ್ಲಾಕ್ಮೇಲ್ ಮಾಡುತ್ತಿದ್ದಾರೆ. ಇದೇ ರೀತಿ ಕಾಂಗ್ರೆಸ್ ನಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬ್ಲಾಕ್ಮೇಲ್ ಮಾಡ್ತಾ ಇದಾರೆ. ವಿರೇಂದ್ರ ಪಾಟೀಲ್ ಹಾಗೂ ಜೆ.ಹೆಚ್ ಪಾಟೀಲ್ ನಂತರದಲ್ಲಿ ಈ ಸಮುದಾಯದಲ್ಲಿ ಬೇರೆ ಯಾವ ನಾಯಕರು ಇಲ್ಲ.

ಆಗ ಅನಿವಾರ್ಯವಾಗಿ ಯಡಿಯೂರಪ್ಪ ಅವರನ್ನ ಜನ ಒಪ್ಪಿಕೊಂಡರು. ಆದರೂ ಯಡಿಯೂರಪ್ಪ ಅವರು ಪಂಚಮಸಾಲಿ ಹಾಗೂ ವೀರಶೈವ ಸಮುದಾಯಕ್ಕೆ ಮೀಸಲಾತಿ ನೀಡದೆ ಮೋಸ ಮಾಡಿದ್ದಾರೆ. ವೀರಶೈವ ಲಿಂಗಾಯತರಿಗೆ 2ಎ ಮೀಸಲಾತಿ ತಪ್ಪಿಸಿದ್ದೇ ಈ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿವೈ ವಿಜಯೇಂದ್ರ. ಹಾಗಾಗಿ ಅವರ ನಾಯಕತ್ವವನ್ನು ವೀರಶೈವ ಲಿಂಗಾಯತ ಸಮುದಾಯ ಎಂದಿಗೂ ಒಪ್ಪುವುದಿಲ್ಲ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment