ಮೊನ್ನೆ ವಿಜಯೇಂದ್ರ ಪರ ಸಭೆ.. ಇಂದು ವಿಜಯೇಂದ್ರ ವಿರುದ್ಧ ಸಭೆ ; ಲಿಂಗಾಯತ ನಾಯಕರ ಬ್ಯಾಕ್ ಟು ಬ್ಯಾಕ್ ಮೀಟಿಂಗ್

ಬೆಂಗಳೂರು; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಯಡಿಯೂರಪ್ಪ ಕುಟುಂಬಸ್ಥರ ನಡುವೆ ಇರುವ ಆಂತರಿಕ ಯುದ್ಧ ಇರೋದು ಎಲ್ಲರಿಗೂ ಗೊತ್ತು. ಅದರಲ್ಲೂ ವಿಜಯೇಂದ್ರ ಅವರನ್ನ ಹೇಗಾದರೂ ಮಾಡಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಎಲ್ಲಾ ಯೋಜನೆಗಳನ್ನ ಮಾಡಿದ್ದಾರೆ. ನೇರಾ ನೇರವಾಗಿಯೇ ಅವರ ಕುಟುಂಬದ ಮೇಲೆ ಆಕ್ರೋಶ ಹೊರ ಹಾಕುತ್ತಾ ಇರುತ್ತಾರೆ. ಇದೀಗ ಲಿಂಗಾಯತರ ಸಭೆ ನಡೆಸಿದ್ದು, ಬಿವೈ ವಿಜಯೇಂದ್ರ ಅವರ ಪರ ನಿಂತ ಲಿಂಗಾಯತರಿಗೆ ಟಾಂಟ್ ಕೊಟ್ಟಂತೆ ಇದೆ.

ಇಂದು ಶಾಸಕ ಯತ್ನಾಳ್ ಅವರು ಖಾಸಗಿ ಹೊಟೇಲ್ ನಲ್ಲಿ ಲಿಂಗಾಯತರ ಸಭೆಯನ್ನ ನಡೆಸಿದ್ದಾರೆ. ಈ ಸಭೆಯಲ್ಲಿ ಜಿ.ಎಂ.ಸಿದ್ದೇಶ್ವರ್, ಶಾಸಕ ಬಿ.ಪಿ ಹರೀಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಈ ಸಭೆಯಲ್ಲಿ ಬಿಜೆಪಿ ನಾಯಕತ್ವ, ರಾಜ್ಯಾಧ್ಯಕ್ಷ ಸ್ಥಾನದ ಬದಲಾವಣೆಯ ವಿಚಾರ ಚರ್ಚೆಯಾಗಿದೆ ಎನ್ನಲಾಗಿದೆ. ದೆಹಲಿಗೆ ಲಿಂಗಾಯತ ನಿಯೋಗವನ್ನ ಕೊಂಡೊಯ್ಯುವ ಬಗ್ಗೆಯೂ ಸಮಾಲೋಚನೆಯನ್ನು ನಡೆಸಲಾಗಿದೆ.

ಈ ಹಿಂದೆ ಕೂಡ ಲಿಂಗಾಯತ ನಾಯಕರ ಪರವಾಗಿ ಲಿಂಗಾಯತ ನಾಯಕರ ಸಭೆ ನಡೆಸಲಾಗಿತ್ತು. ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ಈ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಯತ್ನಾಳ್ ಬಣಕ್ಕೆ ಟಾಂಗ್ ಕೊಡುವಂತ ಚರ್ಚೆಗಳು ನಡೆದಿತ್ತು. ಈ ಸಭೆಯಲ್ಲಿ ಯಡಿಯೂರಪ್ಪ ಫ್ಯಾಮಿಲಿಯ ಪರವಾದ ಚರ್ಚೆಗಳು ನಡೆದಿದೆ. ವಿಜಯೇಂದ್ರ ಅವರನ್ನು ಯಾವುದೇ ಕಾರಣಕ್ಕೂ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬಾರದು, ಯಡಿಯೂರಪ್ಪ ಪರವಾಗಿ ಲಿಂಗಾಯತ ನಾಯಕರು ಇದ್ದೇವೆ ಎಂಬುದನ್ನು ಪ್ರೂವ್ ಮಾಡಬೇಕು ಎಂಬ ಉದ್ದೇಶದಿಂದ ಈ ಸಭೆ ನಡೆಸಲಾಗಿತ್ತು. ಇದೀಗ ಅದಕ್ಕೆ ವಿರುದ್ಧವಾಗಿಯೇ ಯತ್ನಾಳ್ ಬಣ ಮತ್ತೆ ಸಭೆ ನಡೆಸಿದೆ.

suddionenews

Recent Posts

ಸೋಮಶೇಖರ್, ಶಿವರಾಮ್ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆಗೊಳ್ಳುತ್ತಾರಾ..?

ಹುಬ್ಬಳ್ಳಿ; ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಬಿಜೆಪಿ ಪಕ್ಷದಲ್ಲಿಯೇ ಇದ್ರು ಕೂಡ ಕಾಂಗ್ರೆಸ್ ಪಕ್ಷದ ನಾಯಕರ ಜೊತೆಗೆ…

54 minutes ago

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?

  ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 15 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಶನಿವಾರ, ಮಾರ್ಚ್. 15 ) ಹತ್ತಿ ಮಾರುಕಟ್ಟೆ…

3 hours ago

ಚಿತ್ರದುರ್ಗ ಪಿಎಸ್ಐ ಮೇಲೆ ಬಿಜೆಪಿ ನಾಯಕನಿಂದ ಹಲ್ಲೆ ಆರೋಪ

  ಚಿತ್ರದುರ್ಗ; ನಗರ ಠಾಣೆ ಪಿಎಸ್ಐ ಗಾದಿಲಿಂಗಪ್ಪ ಮೇಲೆ ತುಮಕೂರು ಜಿಲ್ಲೆಯ ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ…

3 hours ago

ರುದ್ರಪ್ಪ ಲಮಾಣಿ ದಿಢೀರನೇ ಬೆಂಗಳೂರಿಗೆ ಶಿಫ್ಟ್

  ಬೆಂಗಳೂರು; ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಈಗಾಗಲೇ…

3 hours ago

ಈ ರಾಶಿಯವರು ವ್ಯಾಪಾರ ವೈಹಿವಾಟಗಳಲ್ಲಿ ಮುನ್ನಡೆ ಸಾಧಿಸಲಿದ್ದಾರೆ

ಈ ರಾಶಿಯವರು ವ್ಯಾಪಾರ ವೈಹಿವಾಟಗಳಲ್ಲಿ ಮುನ್ನಡೆ ಸಾಧಿಸಲಿದ್ದಾರೆ, ಈ ರಾಶಿಯವರು ಸೋಲಿಲ್ಲದ ಸರದಾರನಾಗಿ ಮುಟ್ಟಿದ್ದೆಲ್ಲ ಚಿನ್ನ. ಶನಿವಾರದ ರಾಶಿ ಭವಿಷ್ಯ…

10 hours ago

ಹಿರಿಯೂರು ಬಳಿ ಉಪ ಸಭಾಪತಿಗೆ ಬೈಕ್ ಡಿಕ್ಕಿ : ಪ್ರಾಣಾಪಾಯದಿಂದ ಪಾರು

ಸುದ್ದಿಒನ್, ಹಿರಿಯೂರು, ಮಾರ್ಚ್. 14 : ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು…

19 hours ago