ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜನತೆ ಜಾಯ್ತಿರುವಂತ ಯೋಜನೆ ಎತ್ತಿನಹೊಳೆ ಯೋಜನೆಯಾಗಿದೆ. ಈ ಯೋಜನೆಯಿಂದ ಈ ಭಾಗದ ಜನರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ. ಬಯಲು ಸೀಮೆಗೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಕೃಷಿಗೆ ನೀರಿನ ಸೌಲಭ್ಯ ಒದಗಿಸುವುದಕ್ಕೆ ಸರ್ಕಾರ ಮಾಡಿರುವಂತ ಯೋಜನೆ ಇದಾಗಿದೆ. ಆದರೆ ಈ ಕಾಮಗಾರಿ ಅದ್ಯಾಕೋ ಏನೋ ನಿಧಾನಗತಿಯಲ್ಲಿ ಸಾಗುತ್ತಿದೆ.
ಸಿಎಂ ಸಿದ್ದರಾಮಯ್ಯ ಅವರು ಈಗ ಮತ್ತೊಂದು ಡೆಡ್ಲೈನ್ ನೀಡಿದ್ದಾರೆ. 2027ರ ಮಾರ್ಚ್ ತಿಂಗಳ ಒಳಗೆ ಈ ಯೋಜನೆಯನ್ನು ಪೂರ್ಣ ಮಾಡಬೇಕೆಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಯಾವುದೇ ನೀರಾವರಿ ಯೋಜನೆಯಾದರೂ ಅದು ಹೇಳಿದ ಕಾಲಮಿತಿಯೊಳಗೆ ಪೂರ್ಣವಾಗುವುದೇ ಇಲ್ಲ. ಆ ಸಾಲಿಗೆ ಇದೀಗ ಎತ್ತಿನ ಹೊಳೆ ಯೋಜನೆಯೂ ಸೇರಿಕೊಂಡಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಬಳಿ ಕಳೆದ ವರ್ಷ ಡಿಸಿಎಂ ಡಿಕೆ ಶಿವಕುಮಾರ್ ಎತ್ತಿನ ಹೊಳೆ ಯೋಜನೆಯನ್ನು ಉದ್ಘಾಟನೆ ಮಾಡಿದ್ದರು.
ರಾಜ್ಯದಲ್ಲ ಈಗಾಗಲೇ ಮುಂಗಾರು ಶುರುವಾಗಿದೆ. ಪಶ್ಚಿಮ ಘಟ್ಟ ಭಾಗದಲ್ಲಿ ಉತ್ತಮ ಮಳೆಯೂ ಆಗ್ತಾ ಇದೆ. ಎತ್ತಿನಹೊಳೆ ಯೋಜನೆಯಿಂದ ವಾಣಿ ವಿಲಾಸ ಸಾಗರ ಡ್ಯಾಂಗೆ ನೀರಂತೂ ಹರಿದಿಲ್ಲ. ಇದರಿಂದ ಚಿತ್ರದುರ್ಗದ ಕೆರೆಗಳಿಗೂ ಎತ್ತಿನ ಹೊಳೆ ನೀರು ಹರಿದಿಲ್ಲ. ಎತ್ತಿನಹೊಳೆ ಯೋಜನೆಯಡಿ ವರ್ಷಕ್ಕೆ ಬರೋಬ್ಬರಿ 24 ಟಿಎಂಸಿ ನೀರು ಲಭ್ಯವಾಗುತ್ತದೆ ಎಂದುಬಾಂದಾಜಿಸಲಾಗಿತ್ತು. ಅದರಲ್ಲಿ 14 ಟಿಎಂಸಿ ನೀರನ್ನು ಕುಡಿಯುವ ಉದ್ದೇಶಕ್ಕೆ ಬಳಕೆ ಮಾಡಬೇಕಯ, 9.9 ಟಿಎಂಸಿ ನೀರನ್ನು ಕೆರೆಹಳಿಗೆ ನೀರು ತುಂಬಿಸಬೇಕೆಂದು ನಿರ್ಧರಿಸಲಾಗಿತ್ತು. ಏಳು ಜಿಲ್ಲೆಗಳಿಗೆ ಇದರಿಂದ ಕುಡಿಯುವ ನೀರಿನ ವ್ಯವಸ್ಥೆ ಆಗ್ತಾ ಇತ್ತು. ಆದರೆ ಯೋಜನೆ ವಿಳಂಬ ಆಗ್ತಾ ಇದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















